<p><strong>ಶಿರಸಿ:</strong> ‘ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಅರಣ್ಯ ವ್ಯಾಪ್ತಿಯ ಹಳ್ಳಿಗಳಲ್ಲಿನ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಇಂಧನ ಸಚಿವರಲ್ಲಿ ₹75 ಕೋಟಿಗೆ ವಿಶೇಷ ಮನವಿ ಸಲ್ಲಿಸಿದ್ದು, ಹಂತ ಹಂತವಾಗಿ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ’ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು. </p>.<p>ತಾಲ್ಲೂಕಿನ ಹುಲೇಕಲ್ನಲ್ಲಿ ಶನಿವಾರ ಅವರು ರೈತ ಸಂಪರ್ಕ ಕೇಂದ್ರದ ₹20 ಲಕ್ಷ ವೆಚ್ಚದ ನೂತನ ಗೋದಾಮನ್ನು ಉದ್ಘಾಟಿಸಿ ಹಾಗೂ ₹1.99 ಕೋಟಿ ವೆಚ್ಚದ ಹೆಸ್ಕಾಂ ಶಾಖಾ ಕಚೇರಿ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಕ್ಷೇತ್ರದಲ್ಲಿ ಅರಣ್ಯ ಭಾಗದಲ್ಲಿ ಇರುವ ಹಳ್ಳಿಗಳ ಸಂಖ್ಯೆ ಹೆಚ್ಚಿದ್ದು, ಗಾಳಿ-ಮಳೆಯಿಂದ ಹಲವು ಸಮಸ್ಯೆ ಎದುರಾಗುತ್ತಿದೆ. ಈ ನಿಟ್ಟಿನಲ್ಲಿ ಅರಣ್ಯದೊಳಗಿನ ವಿದ್ಯುತ್ ಮಾರ್ಗಗಳ ಬದಲಾವಣೆ ಅಗತ್ಯತೆಯಿದೆ. ಹೀಗಾಗಿ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಮನವಿ ಮಾಡಿದ್ದು, ಹೆಚ್ಚಿನ ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ’ ಎಂದರು.</p>.<p>ಕಾನಸೂರು ಮತ್ತು ಹತ್ತರಗಿ ಭಾಗಗಳಲ್ಲಿ ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಈಗಾಗಲೇ ಕ್ರಮ ವಹಿಸಲಾಗಿದೆ ಎಂದ ಅವರು, ‘ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಿಲ್ಲ. ಅಭಿವೃದ್ಧಿ ಪ್ರಕ್ರಿಯೆ ನಿರಂತರವಾಗಿದ್ದು, ಹಂತ–ಹಂತವಾಗಿ ಎಲ್ಲ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದು ಹೇಳಿದರು. </p>.<p>ಕೃಷಿ ಇಲಾಖೆಯ ಸೌಲಭ್ಯಗಳು ರೈತರಿಗೆ ಸಕಾಲದಲ್ಲಿ ತಲುಪುವಂತಾಗಲು ಗೋದಾಮು ಸಹಕಾರಿಯಾಗಲಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿ ಸುಲಲಿತವಾಗಿ ನಡೆಯುತ್ತಿವೆ ಎಂದರು. </p>.<p>ಕಾರ್ಯಕ್ರಮದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ, ಹುಲೇಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಸಿಂ ಇಬ್ರಾಹಿಂ ಸಾಬ್, ಸ್ಥಳೀಯ ಜನಪ್ರತಿನಿಧಿಗಳು, ಹೆಸ್ಕಾಂ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ‘ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಅರಣ್ಯ ವ್ಯಾಪ್ತಿಯ ಹಳ್ಳಿಗಳಲ್ಲಿನ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಇಂಧನ ಸಚಿವರಲ್ಲಿ ₹75 ಕೋಟಿಗೆ ವಿಶೇಷ ಮನವಿ ಸಲ್ಲಿಸಿದ್ದು, ಹಂತ ಹಂತವಾಗಿ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ’ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು. </p>.<p>ತಾಲ್ಲೂಕಿನ ಹುಲೇಕಲ್ನಲ್ಲಿ ಶನಿವಾರ ಅವರು ರೈತ ಸಂಪರ್ಕ ಕೇಂದ್ರದ ₹20 ಲಕ್ಷ ವೆಚ್ಚದ ನೂತನ ಗೋದಾಮನ್ನು ಉದ್ಘಾಟಿಸಿ ಹಾಗೂ ₹1.99 ಕೋಟಿ ವೆಚ್ಚದ ಹೆಸ್ಕಾಂ ಶಾಖಾ ಕಚೇರಿ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಕ್ಷೇತ್ರದಲ್ಲಿ ಅರಣ್ಯ ಭಾಗದಲ್ಲಿ ಇರುವ ಹಳ್ಳಿಗಳ ಸಂಖ್ಯೆ ಹೆಚ್ಚಿದ್ದು, ಗಾಳಿ-ಮಳೆಯಿಂದ ಹಲವು ಸಮಸ್ಯೆ ಎದುರಾಗುತ್ತಿದೆ. ಈ ನಿಟ್ಟಿನಲ್ಲಿ ಅರಣ್ಯದೊಳಗಿನ ವಿದ್ಯುತ್ ಮಾರ್ಗಗಳ ಬದಲಾವಣೆ ಅಗತ್ಯತೆಯಿದೆ. ಹೀಗಾಗಿ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಮನವಿ ಮಾಡಿದ್ದು, ಹೆಚ್ಚಿನ ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ’ ಎಂದರು.</p>.<p>ಕಾನಸೂರು ಮತ್ತು ಹತ್ತರಗಿ ಭಾಗಗಳಲ್ಲಿ ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಈಗಾಗಲೇ ಕ್ರಮ ವಹಿಸಲಾಗಿದೆ ಎಂದ ಅವರು, ‘ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಿಲ್ಲ. ಅಭಿವೃದ್ಧಿ ಪ್ರಕ್ರಿಯೆ ನಿರಂತರವಾಗಿದ್ದು, ಹಂತ–ಹಂತವಾಗಿ ಎಲ್ಲ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದು ಹೇಳಿದರು. </p>.<p>ಕೃಷಿ ಇಲಾಖೆಯ ಸೌಲಭ್ಯಗಳು ರೈತರಿಗೆ ಸಕಾಲದಲ್ಲಿ ತಲುಪುವಂತಾಗಲು ಗೋದಾಮು ಸಹಕಾರಿಯಾಗಲಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿ ಸುಲಲಿತವಾಗಿ ನಡೆಯುತ್ತಿವೆ ಎಂದರು. </p>.<p>ಕಾರ್ಯಕ್ರಮದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ, ಹುಲೇಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಸಿಂ ಇಬ್ರಾಹಿಂ ಸಾಬ್, ಸ್ಥಳೀಯ ಜನಪ್ರತಿನಿಧಿಗಳು, ಹೆಸ್ಕಾಂ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>