<p><strong>ಕಾರವಾರ</strong>: ಬೆಂಗಳೂರಿನ ಖಾಸಗಿ ಸಾರಿಗೆ ಒಕ್ಕೂಟದಿಂದ ಕರೆ ನೀಡಲಾಗಿರುವ ಬಂದ್ಗೆ ಉತ್ತರ ಕನ್ನಡ ಜಿಲ್ಲೆಯ ಆಟೋ ಚಾಲಕ ಮಾಲಕರ ಸಂಘ, ಟೆಂಪೋ ಚಾಲಕ ಮಾಲಕರ ಸಂಘ ಮತ್ತು ಟ್ಯಾಕ್ಸಿ ಚಾಲಕರ ಮಾಲಕರ ಸಂಘದ ವತಿಯಿಂದ ಬೆಂಬಲ ನೀಡಲಾಗುವುದು ಎಂದು ಈ ಸಂಘಟನೆಯ ಪದಾಧಿಕಾರಿಗಳು ತಿಳಿಸಿದ್ದಾರೆ.</p>.<p>ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಆಟೋರಿಕ್ಷಾ ಚಾಲಕ ಮಾಲಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದಿಲೀಪ್ ಜಿ ಅರ್ಗೇಕರ್, ‘ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ಸಂಸ್ಥೆಗಳು ಮತ್ತು ಆಟೋರಿಕ್ಷಾ ಟೆಂಪೋ ಟ್ಯಾಕ್ಸಿ ನಂಬಿಕೊಂಡು ಜೀವನ ನಡೆಸುತ್ತಿರುವ ಬಹುಸಂಖ್ಯಾತರು ಬೀದಿಗೆ ಬಂದಿದ್ದಾರೆ. ಈ ಹಿನ್ನಲೆಯಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸೋಮವಾರ ಬಂದ್ ಗೆ ಕರೆ ನೀಡಲಾಗಿದೆ. ಹೋರಾಟದ ಭಾಗವಾಗಿ ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಗರದಲ್ಲಿ ಆಟೋ, ಟ್ಯಾಕ್ಸಿ, ಟೆಂಪೋ ಬಂದ್ ಮಾಡಿ ಬೆಂಬಲ ನೀಡುತ್ತಿದ್ದೇವೆ’ ಎಂದು ತಿಳಿಸಿದ್ದಾರೆ.</p>.<p>‘ಶಕ್ತಿ ಯೋಜನೆಯಿಂದ ಸಂಕಷ್ಟ ಎದುರಿಸುತ್ತಿರುವ ಚಾಲಕರಿಗೆ ಜೀವನ ನಿರ್ವಹಣೆಗೆ ಭತ್ಯೆಯಾಗಿ ಪ್ರತಿ ತಿಂಗಳು ರಾಜ್ಯ ಸರ್ಕಾರ ₹10 ಸಾವಿರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಬೆಂಗಳೂರಿನ ಖಾಸಗಿ ಸಾರಿಗೆ ಒಕ್ಕೂಟದಿಂದ ಕರೆ ನೀಡಲಾಗಿರುವ ಬಂದ್ಗೆ ಉತ್ತರ ಕನ್ನಡ ಜಿಲ್ಲೆಯ ಆಟೋ ಚಾಲಕ ಮಾಲಕರ ಸಂಘ, ಟೆಂಪೋ ಚಾಲಕ ಮಾಲಕರ ಸಂಘ ಮತ್ತು ಟ್ಯಾಕ್ಸಿ ಚಾಲಕರ ಮಾಲಕರ ಸಂಘದ ವತಿಯಿಂದ ಬೆಂಬಲ ನೀಡಲಾಗುವುದು ಎಂದು ಈ ಸಂಘಟನೆಯ ಪದಾಧಿಕಾರಿಗಳು ತಿಳಿಸಿದ್ದಾರೆ.</p>.<p>ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಆಟೋರಿಕ್ಷಾ ಚಾಲಕ ಮಾಲಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದಿಲೀಪ್ ಜಿ ಅರ್ಗೇಕರ್, ‘ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ಸಂಸ್ಥೆಗಳು ಮತ್ತು ಆಟೋರಿಕ್ಷಾ ಟೆಂಪೋ ಟ್ಯಾಕ್ಸಿ ನಂಬಿಕೊಂಡು ಜೀವನ ನಡೆಸುತ್ತಿರುವ ಬಹುಸಂಖ್ಯಾತರು ಬೀದಿಗೆ ಬಂದಿದ್ದಾರೆ. ಈ ಹಿನ್ನಲೆಯಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸೋಮವಾರ ಬಂದ್ ಗೆ ಕರೆ ನೀಡಲಾಗಿದೆ. ಹೋರಾಟದ ಭಾಗವಾಗಿ ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಗರದಲ್ಲಿ ಆಟೋ, ಟ್ಯಾಕ್ಸಿ, ಟೆಂಪೋ ಬಂದ್ ಮಾಡಿ ಬೆಂಬಲ ನೀಡುತ್ತಿದ್ದೇವೆ’ ಎಂದು ತಿಳಿಸಿದ್ದಾರೆ.</p>.<p>‘ಶಕ್ತಿ ಯೋಜನೆಯಿಂದ ಸಂಕಷ್ಟ ಎದುರಿಸುತ್ತಿರುವ ಚಾಲಕರಿಗೆ ಜೀವನ ನಿರ್ವಹಣೆಗೆ ಭತ್ಯೆಯಾಗಿ ಪ್ರತಿ ತಿಂಗಳು ರಾಜ್ಯ ಸರ್ಕಾರ ₹10 ಸಾವಿರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>