<p><strong>ಶಿರಸಿ</strong>: ಇಲ್ಲಿನ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದ ಪಕ್ಕದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಿಸಲು ಅಂತಿಮ ಹಂತದ ಸಿದ್ಧತೆ ನಡೆದಿದೆ.</p>.<p>ಹುಬ್ಬಳ್ಳಿ ರಸ್ತೆಯ ಬದಿಯಲ್ಲಿ ಕ್ರೀಡಾ ಇಲಾಖೆಗೆ ಸೇರಿದ ಎರಡೂವರೆ ಎಕರೆ ಜಾಗವನ್ನು ಈಗಾಗಲೆ ಅಂತಿಮಗೊಳಿಸಲಾಗಿದೆ. ಈ ಜಾಗದಲ್ಲಿರುವ 35ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅರಣ್ಯ ಇಲಾಖೆಗೆ ಅನುಮತಿ ಕೇಳಿದೆ. ಕಟಾವು ಮಾಡಲಾಗುವ ಮರಗಳಿಗೆ ಗುರುತನ್ನೂ ಹಾಕಲಾಗಿದೆ.</p>.<p>ಕ್ರೀಡಾಂಗಣ ಸ್ಥಾಪನೆಗೆ ಗುರುತಿಸಿದ ಜಾಗದಲ್ಲಿ ಪಿಡಬ್ಲ್ಯೂಡಿ ಕೆಲವು ದಿನಗಳ ಹಿಂದೆಯೇ ಮಣ್ಣು ಪರೀಕ್ಷೆಯನ್ನೂ ನಡೆಸಿದೆ. ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು ಬೆಳಗಾವಿ ಮೂಲದ ಖಾಸಗಿ ಸಂಸ್ಥೆ ಗುತ್ತಿಗೆ ಪಡೆದುಕೊಂಡಿದೆ.</p>.<p>‘ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದ್ದು ಜಾಗವನ್ನು ಕಾಮಗಾರಿಗೆ ಬಿಟ್ಟುಕೊಡಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸೂಚಿಸಲಾಗಿದೆ. ಮರಗಳ ಕಟಾವು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕೆಲಸ ಆರಂಭಿಸಲಾಗುತ್ತದೆ’ ಎಂದು ಪಿಡಬ್ಲ್ಯೂಡಿ ಅಸಿಸ್ಟಂಟ್ ಎಂಜಿನಿಯರ್ ರಾಮಲಿಂಗೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘400 ಆಸನಗಳ ಸಾಮರ್ಥ್ಯದ ಒಳಾಂಗಣ ಕ್ರೀಡಾಂಗಣ ಇದಾಗಿರಲಿದೆ. ₹10 ಕೋಟಿ ಅನುದಾನ ನಿಗದಿಯಾಗಿದೆ. ಮುಂದಿನ ಎರಡು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆ ಪಡೆದ ಸಂಸ್ಥೆಗೆ ಷರತ್ತು ವಿಧಿಸಲಾಗಿದೆ’ ಎಂದು ಹೇಳಿದರು.</p>.<p>ಅಥ್ಲೆಟಿಕ್ಸ್, ಶಟಲ್ ಬ್ಯಾಡ್ಮಿಂಟನ್ ಕ್ರೀಡೆಗಳಿಗೆ ಅನುಕೂಲವಾಗುವಂತೆ ಹಲವು ವರ್ಷಗಳಿಂದ ಒಳಾಂಗಣ ಕ್ರೀಡಾಂಗಣ ಸ್ಥಾಪಿಸುವ ಬೇಡಿಕೆ ಸಾರ್ವಜನಿಕ ವಲಯದಲ್ಲಿತ್ತು. ಕಳೆದ ವರ್ಷ ಸರ್ಕಾರದಿಂದ ವಿಶೇಷ ಅನುದಾನವೂ ಬಿಡುಗಡೆಯಾಗಿತ್ತು.</p>.<p>ಕೆಲವು ತಿಂಗಳ ಹಿಂದಷ್ಟೆ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಅಂದು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಶಿವರಾಮ ಹೆಬ್ಬಾರ ಶಿರಸಿಯಲ್ಲಿ ಜಂಟಿ ಸಭೆ ನಡೆಸಿ ಕ್ರೀಡಾಂಗಣಕ್ಕೆ ಜಾಗ ಅಂತಿಮಗೊಳಿಸಿದ್ದರು.</p>.<p><strong>ಒಳಾಂಗಣ ಕ್ರೀಡಾಂಗಣ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದ್ದು, ಕ್ರೀಡಾಪಟುಗಳಿಗೆ ಆದಷ್ಟು ಬೇಗ ಅನುಕೂಲ ಕಲ್ಪಿಸಿಕೊಡಲಾಗುವುದು .</strong></p>.<p class="Subhead"><em>ವಿಶ್ವೇಶ್ವರ ಹೆಗಡೆ ಕಾಗೇರಿ</em></p>.<p><em>ವಿಧಾನಸಭಾ ಅಧ್ಯಕ್ಷ</em></p>.<p><strong>ಅಂಕಿ–ಅಂಶ</strong></p>.<p>₹10 ಕೋಟಿ</p>.<p>ಕ್ರೀಡಾಂಗಣಕ್ಕೆ ಬಿಡುಗಡೆಯಾದ ಅನುದಾನ</p>.<p>24 ತಿಂಗಳು</p>.<p>ಕಾಮಗಾರಿಗೆ ನಿಗದಿಪಡಿಸಿದ ಅವಧಿ</p>.<p>400</p>.<p>ಆಸನದ ಸಾಮರ್ಥ್ಯ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ಇಲ್ಲಿನ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದ ಪಕ್ಕದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಿಸಲು ಅಂತಿಮ ಹಂತದ ಸಿದ್ಧತೆ ನಡೆದಿದೆ.</p>.<p>ಹುಬ್ಬಳ್ಳಿ ರಸ್ತೆಯ ಬದಿಯಲ್ಲಿ ಕ್ರೀಡಾ ಇಲಾಖೆಗೆ ಸೇರಿದ ಎರಡೂವರೆ ಎಕರೆ ಜಾಗವನ್ನು ಈಗಾಗಲೆ ಅಂತಿಮಗೊಳಿಸಲಾಗಿದೆ. ಈ ಜಾಗದಲ್ಲಿರುವ 35ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅರಣ್ಯ ಇಲಾಖೆಗೆ ಅನುಮತಿ ಕೇಳಿದೆ. ಕಟಾವು ಮಾಡಲಾಗುವ ಮರಗಳಿಗೆ ಗುರುತನ್ನೂ ಹಾಕಲಾಗಿದೆ.</p>.<p>ಕ್ರೀಡಾಂಗಣ ಸ್ಥಾಪನೆಗೆ ಗುರುತಿಸಿದ ಜಾಗದಲ್ಲಿ ಪಿಡಬ್ಲ್ಯೂಡಿ ಕೆಲವು ದಿನಗಳ ಹಿಂದೆಯೇ ಮಣ್ಣು ಪರೀಕ್ಷೆಯನ್ನೂ ನಡೆಸಿದೆ. ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು ಬೆಳಗಾವಿ ಮೂಲದ ಖಾಸಗಿ ಸಂಸ್ಥೆ ಗುತ್ತಿಗೆ ಪಡೆದುಕೊಂಡಿದೆ.</p>.<p>‘ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದ್ದು ಜಾಗವನ್ನು ಕಾಮಗಾರಿಗೆ ಬಿಟ್ಟುಕೊಡಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸೂಚಿಸಲಾಗಿದೆ. ಮರಗಳ ಕಟಾವು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕೆಲಸ ಆರಂಭಿಸಲಾಗುತ್ತದೆ’ ಎಂದು ಪಿಡಬ್ಲ್ಯೂಡಿ ಅಸಿಸ್ಟಂಟ್ ಎಂಜಿನಿಯರ್ ರಾಮಲಿಂಗೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘400 ಆಸನಗಳ ಸಾಮರ್ಥ್ಯದ ಒಳಾಂಗಣ ಕ್ರೀಡಾಂಗಣ ಇದಾಗಿರಲಿದೆ. ₹10 ಕೋಟಿ ಅನುದಾನ ನಿಗದಿಯಾಗಿದೆ. ಮುಂದಿನ ಎರಡು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆ ಪಡೆದ ಸಂಸ್ಥೆಗೆ ಷರತ್ತು ವಿಧಿಸಲಾಗಿದೆ’ ಎಂದು ಹೇಳಿದರು.</p>.<p>ಅಥ್ಲೆಟಿಕ್ಸ್, ಶಟಲ್ ಬ್ಯಾಡ್ಮಿಂಟನ್ ಕ್ರೀಡೆಗಳಿಗೆ ಅನುಕೂಲವಾಗುವಂತೆ ಹಲವು ವರ್ಷಗಳಿಂದ ಒಳಾಂಗಣ ಕ್ರೀಡಾಂಗಣ ಸ್ಥಾಪಿಸುವ ಬೇಡಿಕೆ ಸಾರ್ವಜನಿಕ ವಲಯದಲ್ಲಿತ್ತು. ಕಳೆದ ವರ್ಷ ಸರ್ಕಾರದಿಂದ ವಿಶೇಷ ಅನುದಾನವೂ ಬಿಡುಗಡೆಯಾಗಿತ್ತು.</p>.<p>ಕೆಲವು ತಿಂಗಳ ಹಿಂದಷ್ಟೆ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಅಂದು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಶಿವರಾಮ ಹೆಬ್ಬಾರ ಶಿರಸಿಯಲ್ಲಿ ಜಂಟಿ ಸಭೆ ನಡೆಸಿ ಕ್ರೀಡಾಂಗಣಕ್ಕೆ ಜಾಗ ಅಂತಿಮಗೊಳಿಸಿದ್ದರು.</p>.<p><strong>ಒಳಾಂಗಣ ಕ್ರೀಡಾಂಗಣ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದ್ದು, ಕ್ರೀಡಾಪಟುಗಳಿಗೆ ಆದಷ್ಟು ಬೇಗ ಅನುಕೂಲ ಕಲ್ಪಿಸಿಕೊಡಲಾಗುವುದು .</strong></p>.<p class="Subhead"><em>ವಿಶ್ವೇಶ್ವರ ಹೆಗಡೆ ಕಾಗೇರಿ</em></p>.<p><em>ವಿಧಾನಸಭಾ ಅಧ್ಯಕ್ಷ</em></p>.<p><strong>ಅಂಕಿ–ಅಂಶ</strong></p>.<p>₹10 ಕೋಟಿ</p>.<p>ಕ್ರೀಡಾಂಗಣಕ್ಕೆ ಬಿಡುಗಡೆಯಾದ ಅನುದಾನ</p>.<p>24 ತಿಂಗಳು</p>.<p>ಕಾಮಗಾರಿಗೆ ನಿಗದಿಪಡಿಸಿದ ಅವಧಿ</p>.<p>400</p>.<p>ಆಸನದ ಸಾಮರ್ಥ್ಯ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>