<p><strong>ಕಾರವಾರ</strong>: ‘ಸ್ವಭಾಷಾ ಅಭಿಯಾನ ಚಾತುರ್ಮಾಸ್ಯಕ್ಕೆ ಅಥವಾ ಶಿಷ್ಯರಿಗೆ ಸೀಮಿತವಾಗದೇ ನಾಡಿನ ಹೊರಗೂ ಪಸರಿಸಬೇಕು. ನಮ್ಮತನ ಉಳಿಯಬೇಕು’ ಎಂದು ರಾಘವೇಶ್ವರ ಭಾರತಿ ಸ್ವಾಮೀಜಿ ಹೇಳಿದರು.</p>.<p>ಗೋಕರ್ಣದ ಅಶೋಕೆಯಲ್ಲಿ ಭಾನುವಾರ ಸ್ವಭಾಷಾ ಚಾತುರ್ಮಾಸ್ಯ ವ್ರತ ಸಮಾರೋಪಗೊಳಿಸಿ, ಸೀಮೋಲ್ಲಂಘನ ಬಳಿಕ ನಡೆದ ಧರ್ಮಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.</p>.<p>‘ಎಂಥದ್ದೇ ಪರಿಸ್ಥಿತಿಯಲ್ಲೂ ನಮ್ಮತನವನ್ನು ಬಿಡಬಾರದು. ನಮ್ಮತನವನ್ನು ಬಿಟ್ಟು ಬದುಕುವುದು ಸಾವಿಗೆ ಸಮಾನ. ದಿನಕ್ಕೊಂದು ಆಂಗ್ಲಪದ ತ್ಯಜಿಸುವ ಅಭಿಯಾನ ಮುಂದುವರಿಯಬೇಕು’ ಎಂದರು.</p>.<p>‘ಪ್ರತಿಯೊಬ್ಬರೂ ತಮ್ಮ ತಮ್ಮ ಕರ್ತವ್ಯವನ್ನು ತಿಳಿದುಕೊಂಡು ಅವರ ಆತ್ಮ ಮೆಚ್ಚುವಂತೆ ಅದನ್ನು ನಿರ್ವಹಿಸಿದರೆ ಅದು ಅತ್ಯುತ್ತಮ ವ್ಯವಸ್ಥೆಯಾಗುತ್ತದೆ. ಹೊಗಳಿಕೆಯಿಂದ ಸತ್ಕಾರ್ಯದ ಪುಣ್ಯ ಕ್ಷಯಿಸುತ್ತದೆ. ನಿರ್ವಿಘ್ನವಾಗಿ ಚಾತುರ್ಮಾಸ್ಯ ಸಂಪನ್ನಗೊಂಡಿದೆ’ ಎಂದು ತಿಳಿಸಿದರು.</p>.<p>ಸೀಮೋಲ್ಲಂಘನ ಸಂದರ್ಭದಲ್ಲಿ ಗಂಗಾವಳಿ ನದಿಗೆ ಬಾಗಿನ ಸಮರ್ಪಿಸಿದ ಅವರು ಗಂಗಾಂಬಿಕಾ ದೇವಸ್ಥಾನದಲ್ಲಿ ಮತ್ತು ಅಶೋಕೆಯ ಮಲ್ಲಿಕಾರ್ಜುನ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.</p>.<p>ಚಾತುರ್ಮಾಸ್ಯ ತಂಡದ ಪ್ರಧಾನ ಸಂಚಾಲಕ ಮಂಜುನಾಥ ಸುವರ್ಣಗದ್ದೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂತೋಷ ಹೆಗಡೆ, ಗಣೇಶ್ ಜಿ.ಎಲ್, ಕೆ.ಪಿ.ಎಡಪ್ಪಾಡಿ, ಹರಿಪ್ರಸಾದ್ ಪೆರಿಯಪ್ಪು, ಮಹೇಶ್ ಚಟ್ನಳ್ಳಿ, ಡಾ.ವೈ.ವಿ.ಕೃಷ್ಣಮೂರ್ತಿ, ನಾಗರಾಜ ಭಟ್ ಪೆದಮಲೆ, ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ಸ್ವಭಾಷಾ ಅಭಿಯಾನ ಚಾತುರ್ಮಾಸ್ಯಕ್ಕೆ ಅಥವಾ ಶಿಷ್ಯರಿಗೆ ಸೀಮಿತವಾಗದೇ ನಾಡಿನ ಹೊರಗೂ ಪಸರಿಸಬೇಕು. ನಮ್ಮತನ ಉಳಿಯಬೇಕು’ ಎಂದು ರಾಘವೇಶ್ವರ ಭಾರತಿ ಸ್ವಾಮೀಜಿ ಹೇಳಿದರು.</p>.<p>ಗೋಕರ್ಣದ ಅಶೋಕೆಯಲ್ಲಿ ಭಾನುವಾರ ಸ್ವಭಾಷಾ ಚಾತುರ್ಮಾಸ್ಯ ವ್ರತ ಸಮಾರೋಪಗೊಳಿಸಿ, ಸೀಮೋಲ್ಲಂಘನ ಬಳಿಕ ನಡೆದ ಧರ್ಮಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.</p>.<p>‘ಎಂಥದ್ದೇ ಪರಿಸ್ಥಿತಿಯಲ್ಲೂ ನಮ್ಮತನವನ್ನು ಬಿಡಬಾರದು. ನಮ್ಮತನವನ್ನು ಬಿಟ್ಟು ಬದುಕುವುದು ಸಾವಿಗೆ ಸಮಾನ. ದಿನಕ್ಕೊಂದು ಆಂಗ್ಲಪದ ತ್ಯಜಿಸುವ ಅಭಿಯಾನ ಮುಂದುವರಿಯಬೇಕು’ ಎಂದರು.</p>.<p>‘ಪ್ರತಿಯೊಬ್ಬರೂ ತಮ್ಮ ತಮ್ಮ ಕರ್ತವ್ಯವನ್ನು ತಿಳಿದುಕೊಂಡು ಅವರ ಆತ್ಮ ಮೆಚ್ಚುವಂತೆ ಅದನ್ನು ನಿರ್ವಹಿಸಿದರೆ ಅದು ಅತ್ಯುತ್ತಮ ವ್ಯವಸ್ಥೆಯಾಗುತ್ತದೆ. ಹೊಗಳಿಕೆಯಿಂದ ಸತ್ಕಾರ್ಯದ ಪುಣ್ಯ ಕ್ಷಯಿಸುತ್ತದೆ. ನಿರ್ವಿಘ್ನವಾಗಿ ಚಾತುರ್ಮಾಸ್ಯ ಸಂಪನ್ನಗೊಂಡಿದೆ’ ಎಂದು ತಿಳಿಸಿದರು.</p>.<p>ಸೀಮೋಲ್ಲಂಘನ ಸಂದರ್ಭದಲ್ಲಿ ಗಂಗಾವಳಿ ನದಿಗೆ ಬಾಗಿನ ಸಮರ್ಪಿಸಿದ ಅವರು ಗಂಗಾಂಬಿಕಾ ದೇವಸ್ಥಾನದಲ್ಲಿ ಮತ್ತು ಅಶೋಕೆಯ ಮಲ್ಲಿಕಾರ್ಜುನ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.</p>.<p>ಚಾತುರ್ಮಾಸ್ಯ ತಂಡದ ಪ್ರಧಾನ ಸಂಚಾಲಕ ಮಂಜುನಾಥ ಸುವರ್ಣಗದ್ದೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂತೋಷ ಹೆಗಡೆ, ಗಣೇಶ್ ಜಿ.ಎಲ್, ಕೆ.ಪಿ.ಎಡಪ್ಪಾಡಿ, ಹರಿಪ್ರಸಾದ್ ಪೆರಿಯಪ್ಪು, ಮಹೇಶ್ ಚಟ್ನಳ್ಳಿ, ಡಾ.ವೈ.ವಿ.ಕೃಷ್ಣಮೂರ್ತಿ, ನಾಗರಾಜ ಭಟ್ ಪೆದಮಲೆ, ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>