<p><strong>ಕಾರವಾರ</strong>: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಜಯಂತಿ ಆಚರಣೆ ಹಳಿಯಾಳದ ಪುರಭವನದಲ್ಲಿ ಮೇ.10 ರಂದು ನಡೆಯಲಿದೆ’ ಎಂದು ಭೀಮ್ ಆರ್ಮಿ ಜಿಲ್ಲಾ ಘಟಕದ ಉಸ್ತುವಾರಿ ಮೇಘರಾಜ ಮೇತ್ರಿ ಹೇಳಿದರು.</p>.<p>ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಯಕ್ರಮದ ಅಂಗವಾಗಿ ಪ್ರಸ್ತುತ ಭಾರತದಲ್ಲಿ ಸಂವಿಧಾನದ ಮಹತ್ವ ವಿಷಯದ ಕುರಿತು ಪ್ರಬಂಧ, ಪ್ರಸ್ತುತ ಭಾರತದಲ್ಲಿ ಪ್ರಜಾಪ್ರಭುತ್ವದ ಪಾತ್ರ ವಿಷಯದಲ್ಲಿ ಭಾಷಣ, ನೂತನ ಸಂಸತ್ ಕಚೇರಿಯ ಚಿತ್ರ ರಚನೆಯ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ’ ಎಂದರು.</p>.<p>‘ಸಾಹಿತಿ ಮಾಸ್ಕೇರಿ ಎಂ.ಕೆ.ನಾಯಕ ಉದ್ಘಾಟಿಸಲಿದ್ದಾರೆ. ಭೀಮ್ ಆರ್ಮಿ ರಾಜ್ಯ ಘಟಕದ ಅಧ್ಯಕ್ಷ ರಾಜಗೋಪಾಲ ಡಿ.ಎಸ್, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.</p>.<p>‘ಪಹಲ್ಗಾಮ್ ಘಟನೆ ಅಮಾನವೀಯ ಕೃತ್ಯ. ದಾಳಿ ನಡೆಸಿದವರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಶಿಕ್ಷೆ ನೀಡಬೇಕು. ಭಯೋತ್ಪಾದನೆ ನಿಗ್ರಹಕ್ಕೆ ಸರ್ಕಾರ ವಿಶೇಷ ಕಾಯ್ದೆ ರೂಪಿಸಿ, ಉಗ್ರ ಚಟುವಟಿಕೆಯಲ್ಲಿ ತೊಡಗಿಕೊಂಡವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ನಿಯಮ ಜಾರಿಗೆ ತರಬೇಕು’ ಎಂದರು.</p>.<p>ಪದಾಧಿಕಾರಿಗಳಾದ ಅಲಿ ಆರ್.ಶೇಖ್, ಮಲಿಕ್ ಪಠಾಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಜಯಂತಿ ಆಚರಣೆ ಹಳಿಯಾಳದ ಪುರಭವನದಲ್ಲಿ ಮೇ.10 ರಂದು ನಡೆಯಲಿದೆ’ ಎಂದು ಭೀಮ್ ಆರ್ಮಿ ಜಿಲ್ಲಾ ಘಟಕದ ಉಸ್ತುವಾರಿ ಮೇಘರಾಜ ಮೇತ್ರಿ ಹೇಳಿದರು.</p>.<p>ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಯಕ್ರಮದ ಅಂಗವಾಗಿ ಪ್ರಸ್ತುತ ಭಾರತದಲ್ಲಿ ಸಂವಿಧಾನದ ಮಹತ್ವ ವಿಷಯದ ಕುರಿತು ಪ್ರಬಂಧ, ಪ್ರಸ್ತುತ ಭಾರತದಲ್ಲಿ ಪ್ರಜಾಪ್ರಭುತ್ವದ ಪಾತ್ರ ವಿಷಯದಲ್ಲಿ ಭಾಷಣ, ನೂತನ ಸಂಸತ್ ಕಚೇರಿಯ ಚಿತ್ರ ರಚನೆಯ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ’ ಎಂದರು.</p>.<p>‘ಸಾಹಿತಿ ಮಾಸ್ಕೇರಿ ಎಂ.ಕೆ.ನಾಯಕ ಉದ್ಘಾಟಿಸಲಿದ್ದಾರೆ. ಭೀಮ್ ಆರ್ಮಿ ರಾಜ್ಯ ಘಟಕದ ಅಧ್ಯಕ್ಷ ರಾಜಗೋಪಾಲ ಡಿ.ಎಸ್, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.</p>.<p>‘ಪಹಲ್ಗಾಮ್ ಘಟನೆ ಅಮಾನವೀಯ ಕೃತ್ಯ. ದಾಳಿ ನಡೆಸಿದವರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಶಿಕ್ಷೆ ನೀಡಬೇಕು. ಭಯೋತ್ಪಾದನೆ ನಿಗ್ರಹಕ್ಕೆ ಸರ್ಕಾರ ವಿಶೇಷ ಕಾಯ್ದೆ ರೂಪಿಸಿ, ಉಗ್ರ ಚಟುವಟಿಕೆಯಲ್ಲಿ ತೊಡಗಿಕೊಂಡವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ನಿಯಮ ಜಾರಿಗೆ ತರಬೇಕು’ ಎಂದರು.</p>.<p>ಪದಾಧಿಕಾರಿಗಳಾದ ಅಲಿ ಆರ್.ಶೇಖ್, ಮಲಿಕ್ ಪಠಾಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>