<p><strong>ಸಿದ್ದಾಪುರ: </strong>'ಜನಪ್ರಿಯ ಯೋಜನೆಗಿಂತ ಜನಪರ ಕಾರ್ಯಕ್ರಮ ನೀಡುವುದು ನಮ್ಮ ಆದ್ಯತೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಇಲ್ಲಿನ ನೆಹರೂ ಮೈದಾನದಲ್ಲಿ ಮಂಗಳವಾರ ₹ 59 ಕೋಟಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿ, ಹಲವು ಯೋಜನೆಯ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಅವರು ಮಾತನಾಡಿದರು.</p>.<p>'ಡಬಲ್ ಎಂಜಿನ್ ಸರ್ಕಾರದಿಂದಾಗಿ ಸರ್ವೋದಯ, ನವೋದಯದ ಆಡಳಿತ ನಡೆಯುತ್ತಿದೆ' ಎಂದು ಹೇಳಿದರು.</p>.<p>'ಹಲವು ಕ್ಷೇತ್ರಗಳಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೌಕರ್ಯ ವೃದ್ಧಿಸುವ ಜತೆಗೆ ಸಿಬ್ಬಂದಿ ನೇಮಕಗೊಳಿಸಲಾಗಿದೆ. ಸಮಾಜದ ಎಲ್ಲ ವರ್ಗಗಳ ಏಳ್ಗೆಗೆ ಆದ್ಯತೆ ನೀಡಲಾಗಿದೆ' ಎಂದರು.</p>.<p>'ದುಡಿಮೆಯೆ ದೊಡ್ಡಪ್ಪ. ದುಡಿಯುವ ವರ್ಗ ದೇಶ ಕಟ್ಟುತ್ತಿದೆ' ಎಂದರು.</p>.<p>'ಜನಪರ ರಾಜಕಾರಣ ಮಾಡುವವರಿಗೆ ಸೋಲು ಇರದು. ವಿರೋಧ ಎದುರಿಸಿ ಯೋಜನೆ ಜಾರಿಗೊಳಿಸುವುದು ಇಚ್ಚಾಶಕ್ತಿ ಇರುವ ನಾಯಕರಿಗೆ ಖುಷಿ ಕೊಡುತ್ತದೆ' ಎಂದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, 'ಅಭಿವೃದ್ದಿಯ ಹೊಸ ಪರ್ವ ಆರಂಭವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸಾಮಾಜಿಕ ನ್ಯಾಯದ ಜತೆಗೆ ಸೌಲಭ್ಯ ಒದಗಿಸಲಾಗಿದೆ' ಎಂದರು.</p>.<p>ಜಲಸಂಪನ್ಮೂಲ ಇಲಾಖೆ ಸಚಿವ ಗೋವಿಂದ ಕಾರಜೋಳ, 'ಕಡು ಬಡವರನ್ನು ಮೇಲೆತ್ತುವ ಕೆಲಸ ಬಿಜೆಪಿ ಸರ್ಕಾರ ಮಾಡುತ್ತಿದೆ. ಕಾಂಗ್ರೆಸ್ ಭಾಷಣದಲ್ಲಿ ಕಾಲ ಕಳೆಯುತ್ತಿತ್ತು. ಬಿಜೆಪಿ ಸರ್ಕಾರ ಕೆಲಸ ಮಾಡಿ ತೋರಿಸಿದೆ' ಎಂದರು.</p>.<p>ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, 'ಶಿಕ್ಷಣ, ಆಡಳಿತ, ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಸಿದ್ದಾಪುರದ ಚಿತ್ರಣ ಬದಲಿಸಲಾಗಿದೆ. ಸಂವಿಧಾನಬದ್ಧ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು ಕೆಲಸ ಮಾಡಲಾಗುತ್ತಿದೆ. ಒಡೆದು ಆಳುವ ಬದಲು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲಾಗುತ್ತಿದೆ' ಎಂದರು.</p>.<p>'ಸಿದ್ದಾಪುರ ಪಟ್ಟಣಕ್ಕೆ ನೀರು ಒದಗಿಸಲು ಯೋಜನೆ ರೂಪಿಸಲಾಗುವುದು. ಸಾರಿಗೆ ಘಟಕ, ಕಾನಸೂರಿನಲ್ಲಿ ಗ್ರಿಡ್ ಸ್ಥಾಪನೆ ಮಾಡಲಾಗುವುದು' ಎಂದು ಭರವಸೆ ನೀಡಿದರು.</p>.<p>ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿದರು. ಶಾಸಕ ದಿನಕರ ಶೆಟ್ಟಿ, ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಚಂದ್ರಕಲಾ ನಾಯ್ಕ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯ್ತಿ ಸಿಇಒ ಈಶ್ವರ ಕಾಂದೂ, ಸಿಸಿಎಫ್ ವಸಂತ ರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ: </strong>'ಜನಪ್ರಿಯ ಯೋಜನೆಗಿಂತ ಜನಪರ ಕಾರ್ಯಕ್ರಮ ನೀಡುವುದು ನಮ್ಮ ಆದ್ಯತೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಇಲ್ಲಿನ ನೆಹರೂ ಮೈದಾನದಲ್ಲಿ ಮಂಗಳವಾರ ₹ 59 ಕೋಟಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿ, ಹಲವು ಯೋಜನೆಯ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಅವರು ಮಾತನಾಡಿದರು.</p>.<p>'ಡಬಲ್ ಎಂಜಿನ್ ಸರ್ಕಾರದಿಂದಾಗಿ ಸರ್ವೋದಯ, ನವೋದಯದ ಆಡಳಿತ ನಡೆಯುತ್ತಿದೆ' ಎಂದು ಹೇಳಿದರು.</p>.<p>'ಹಲವು ಕ್ಷೇತ್ರಗಳಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೌಕರ್ಯ ವೃದ್ಧಿಸುವ ಜತೆಗೆ ಸಿಬ್ಬಂದಿ ನೇಮಕಗೊಳಿಸಲಾಗಿದೆ. ಸಮಾಜದ ಎಲ್ಲ ವರ್ಗಗಳ ಏಳ್ಗೆಗೆ ಆದ್ಯತೆ ನೀಡಲಾಗಿದೆ' ಎಂದರು.</p>.<p>'ದುಡಿಮೆಯೆ ದೊಡ್ಡಪ್ಪ. ದುಡಿಯುವ ವರ್ಗ ದೇಶ ಕಟ್ಟುತ್ತಿದೆ' ಎಂದರು.</p>.<p>'ಜನಪರ ರಾಜಕಾರಣ ಮಾಡುವವರಿಗೆ ಸೋಲು ಇರದು. ವಿರೋಧ ಎದುರಿಸಿ ಯೋಜನೆ ಜಾರಿಗೊಳಿಸುವುದು ಇಚ್ಚಾಶಕ್ತಿ ಇರುವ ನಾಯಕರಿಗೆ ಖುಷಿ ಕೊಡುತ್ತದೆ' ಎಂದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, 'ಅಭಿವೃದ್ದಿಯ ಹೊಸ ಪರ್ವ ಆರಂಭವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸಾಮಾಜಿಕ ನ್ಯಾಯದ ಜತೆಗೆ ಸೌಲಭ್ಯ ಒದಗಿಸಲಾಗಿದೆ' ಎಂದರು.</p>.<p>ಜಲಸಂಪನ್ಮೂಲ ಇಲಾಖೆ ಸಚಿವ ಗೋವಿಂದ ಕಾರಜೋಳ, 'ಕಡು ಬಡವರನ್ನು ಮೇಲೆತ್ತುವ ಕೆಲಸ ಬಿಜೆಪಿ ಸರ್ಕಾರ ಮಾಡುತ್ತಿದೆ. ಕಾಂಗ್ರೆಸ್ ಭಾಷಣದಲ್ಲಿ ಕಾಲ ಕಳೆಯುತ್ತಿತ್ತು. ಬಿಜೆಪಿ ಸರ್ಕಾರ ಕೆಲಸ ಮಾಡಿ ತೋರಿಸಿದೆ' ಎಂದರು.</p>.<p>ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, 'ಶಿಕ್ಷಣ, ಆಡಳಿತ, ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಸಿದ್ದಾಪುರದ ಚಿತ್ರಣ ಬದಲಿಸಲಾಗಿದೆ. ಸಂವಿಧಾನಬದ್ಧ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು ಕೆಲಸ ಮಾಡಲಾಗುತ್ತಿದೆ. ಒಡೆದು ಆಳುವ ಬದಲು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲಾಗುತ್ತಿದೆ' ಎಂದರು.</p>.<p>'ಸಿದ್ದಾಪುರ ಪಟ್ಟಣಕ್ಕೆ ನೀರು ಒದಗಿಸಲು ಯೋಜನೆ ರೂಪಿಸಲಾಗುವುದು. ಸಾರಿಗೆ ಘಟಕ, ಕಾನಸೂರಿನಲ್ಲಿ ಗ್ರಿಡ್ ಸ್ಥಾಪನೆ ಮಾಡಲಾಗುವುದು' ಎಂದು ಭರವಸೆ ನೀಡಿದರು.</p>.<p>ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿದರು. ಶಾಸಕ ದಿನಕರ ಶೆಟ್ಟಿ, ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಚಂದ್ರಕಲಾ ನಾಯ್ಕ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯ್ತಿ ಸಿಇಒ ಈಶ್ವರ ಕಾಂದೂ, ಸಿಸಿಎಫ್ ವಸಂತ ರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>