<p><strong>ಕಾರವಾರ:</strong> ‘ದೇಶದಲ್ಲಿ ಡಿಎಪಿ ರಸಗೊಬ್ಬರ ಬಳಕೆ ನಿಯಂತ್ರಿಸಲು ಅಭಿಯಾನ ನಡೆದಿದ್ದು, ರಾಜ್ಯದಲ್ಲೂ ಬಳಕೆ ಕಡಿಮೆಯಾಗಬೇಕು’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.</p>.<p>ಜೊಯಿಡಾ ತಾಲ್ಲೂಕನ್ನು ರಾಜ್ಯದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತಿಸುವ ಪ್ರಕ್ರಿಯೆಗೆ ಮಂಗಳವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.</p>.<p>‘ರಾಸಾಯನಿಕ ಗೊಬ್ಬರ ಬಳಕೆ ಪ್ರಮಾಣ ಈ ತಾಲ್ಲೂಕಿನಲ್ಲಿ ಕಡಿಮೆಯಿದ್ದು, ಪೂರ್ಣ ತಡೆಗಟ್ಟುವ ಗುರಿಯಿದೆ. ಸಾವಯವ ಪದಾರ್ಥಗಳಿಗೆ ಮಾರುಕಟ್ಟೆ ಒದಗಿಸುವುದು ಸೇರಿ ಸಾವಯವ ಪದ್ಧತಿ ಬಲಗೊಳಿಸಲು ಹಂತ ಹಂತವಾಗಿ ಜಾರಿಗೊಳಿಸಲಿದ್ದೇವೆ’ ಎಂದರು.</p>.<p>‘ಈ ಬಾರಿ 69,526 ಟನ್ ಡಿಎಪಿ ರಸಗೊಬ್ಬರ ದಾಸ್ತಾನಿದೆ. ಕಬ್ಬು ಕಟಾವು ಯಂತ್ರಗಳ ಖರೀದಿಗೆ ಪರಿಶಿಷ್ಟ ಸಮುದಾಯದವರಿಗೆ ₹50 ಲಕ್ಷ, ಸಾಮಾನ್ಯ ವರ್ಗದ ರೈತರಿಗೆ ₹40 ಲಕ್ಷ ಸಹಾಯಧನ ನೀಡುವ ಮೂಲಕ ದೇಶದಲ್ಲೇ ಮಾದರಿ ಸೌಲಭ್ಯ ಕಲ್ಪಿಸಿದ್ದೇವೆ’ ಎಂದರು.</p>.<p>ನಂತರ ಅವರು, ಹಳಿಯಾಳದಲ್ಲಿ ಮುಂಗಾರು ಅವಧಿ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದರು. ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ‘ದೇಶದಲ್ಲಿ ಡಿಎಪಿ ರಸಗೊಬ್ಬರ ಬಳಕೆ ನಿಯಂತ್ರಿಸಲು ಅಭಿಯಾನ ನಡೆದಿದ್ದು, ರಾಜ್ಯದಲ್ಲೂ ಬಳಕೆ ಕಡಿಮೆಯಾಗಬೇಕು’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.</p>.<p>ಜೊಯಿಡಾ ತಾಲ್ಲೂಕನ್ನು ರಾಜ್ಯದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತಿಸುವ ಪ್ರಕ್ರಿಯೆಗೆ ಮಂಗಳವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.</p>.<p>‘ರಾಸಾಯನಿಕ ಗೊಬ್ಬರ ಬಳಕೆ ಪ್ರಮಾಣ ಈ ತಾಲ್ಲೂಕಿನಲ್ಲಿ ಕಡಿಮೆಯಿದ್ದು, ಪೂರ್ಣ ತಡೆಗಟ್ಟುವ ಗುರಿಯಿದೆ. ಸಾವಯವ ಪದಾರ್ಥಗಳಿಗೆ ಮಾರುಕಟ್ಟೆ ಒದಗಿಸುವುದು ಸೇರಿ ಸಾವಯವ ಪದ್ಧತಿ ಬಲಗೊಳಿಸಲು ಹಂತ ಹಂತವಾಗಿ ಜಾರಿಗೊಳಿಸಲಿದ್ದೇವೆ’ ಎಂದರು.</p>.<p>‘ಈ ಬಾರಿ 69,526 ಟನ್ ಡಿಎಪಿ ರಸಗೊಬ್ಬರ ದಾಸ್ತಾನಿದೆ. ಕಬ್ಬು ಕಟಾವು ಯಂತ್ರಗಳ ಖರೀದಿಗೆ ಪರಿಶಿಷ್ಟ ಸಮುದಾಯದವರಿಗೆ ₹50 ಲಕ್ಷ, ಸಾಮಾನ್ಯ ವರ್ಗದ ರೈತರಿಗೆ ₹40 ಲಕ್ಷ ಸಹಾಯಧನ ನೀಡುವ ಮೂಲಕ ದೇಶದಲ್ಲೇ ಮಾದರಿ ಸೌಲಭ್ಯ ಕಲ್ಪಿಸಿದ್ದೇವೆ’ ಎಂದರು.</p>.<p>ನಂತರ ಅವರು, ಹಳಿಯಾಳದಲ್ಲಿ ಮುಂಗಾರು ಅವಧಿ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದರು. ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>