<p><strong>ಹೊನ್ನಾವರ</strong>: ’ಶ್ರೀಕ್ಷೇತ್ರ ಬಂಗಾರಮಕ್ಕಿ ಹಾಗೂ ಸುಧೀಕ್ಷ ಗ್ರುಪ್ ಆಫ್ ಕಂಪನಿ ಬೆಂಗಳೂರು ಇವುಗಳ ಸಹಯೋಗದಲ್ಲಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು’ ಎಂದು ಸುಧೀಕ್ಷ ಗ್ರುಪ್ ಆಫ್ ಕಂಪನಿಯ ಸಿಎಂಡಿ ಡಾ.ಸುಬ್ರಹ್ಮಣ್ಯ ಶರ್ಮ ಗೌರವರಂ ಭರವಸೆ ನೀಡಿದರು.</p>.<p>ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ನಡೆದ ಸಂಸ್ಕೃತಿ ಕುಂಭ ಮಲೆನಾಡ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲದಿರುವುದರಿಂದ ಜನರಿಗಾಗುತ್ತಿರುವ ಸಂಕಷ್ಟದ ಕುರಿತು ಕ್ಷೇತ್ರದ ಧರ್ಮಾಧಿಕಾರಿ ತಿಳಿಸಿದ್ದು, ಜನರ ಬೇಡಿಕೆಗೆ ಸ್ಪಂದಿಸುತ್ತೇನೆ. ಆಸ್ಪತ್ರೆಯ ಜೊತೆಗೆ ಎಂಜಿನಿಯರಿಂಗ್ ಕಾಲೇಜು ಆರಂಭಿಸಲಾಗುವುದು ಎಂದು ತಿಳಿಸಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಅರವಿಂದ ಕರ್ಕಿಕೋಡಿ, ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ವಿಚಾರ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ಸರಕಾಗಿ ಬಳಕೆಯಾಗುತ್ತಿದೆ. ಆಸ್ಪತ್ರೆ ಸ್ಥಾಪನೆ ಭರವಸೆ ನೀಡಿದ ಸುಬ್ರಹ್ಮಣ್ಯ ಶರ್ಮ ಅವರನ್ನು ಅಭಿವಂದಿಸುತ್ತೇನೆ ಎಂದು ಹೇಳಿದರು.</p>.<p>ಧರ್ಮಾಧಿಕಾರಿ ಮಾರುತಿ ಗುರೂಜಿ, ಬೆಂಗಳೂರಿನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಚೇತನ್ ಆರ್. ಮಾತನಾಡಿದರು. ಅರ್ಪಿತಾ, ಮಾರುತಿ ಗುರೂಜಿ ಇದ್ದರು. ಗಣಪತಿ ಹೆಗಡೆ ಸ್ವಾಗತಿಸಿದರು. ಆಡಳಿತಾಧಿಕಾರಿ ಎಂ.ಎನ್.ಮಂಜುನಾಥ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಾಲಕೃಷ್ಣ ನಾಯ್ಕ, ಕವಿತಾ ದೇವಾಡಿಗ ನಿರೂಪಿಸಿದರು. ಶಿಕ್ಷಕ ದಯಾನಂದ ನಾಯ್ಕ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾವರ</strong>: ’ಶ್ರೀಕ್ಷೇತ್ರ ಬಂಗಾರಮಕ್ಕಿ ಹಾಗೂ ಸುಧೀಕ್ಷ ಗ್ರುಪ್ ಆಫ್ ಕಂಪನಿ ಬೆಂಗಳೂರು ಇವುಗಳ ಸಹಯೋಗದಲ್ಲಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು’ ಎಂದು ಸುಧೀಕ್ಷ ಗ್ರುಪ್ ಆಫ್ ಕಂಪನಿಯ ಸಿಎಂಡಿ ಡಾ.ಸುಬ್ರಹ್ಮಣ್ಯ ಶರ್ಮ ಗೌರವರಂ ಭರವಸೆ ನೀಡಿದರು.</p>.<p>ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ನಡೆದ ಸಂಸ್ಕೃತಿ ಕುಂಭ ಮಲೆನಾಡ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲದಿರುವುದರಿಂದ ಜನರಿಗಾಗುತ್ತಿರುವ ಸಂಕಷ್ಟದ ಕುರಿತು ಕ್ಷೇತ್ರದ ಧರ್ಮಾಧಿಕಾರಿ ತಿಳಿಸಿದ್ದು, ಜನರ ಬೇಡಿಕೆಗೆ ಸ್ಪಂದಿಸುತ್ತೇನೆ. ಆಸ್ಪತ್ರೆಯ ಜೊತೆಗೆ ಎಂಜಿನಿಯರಿಂಗ್ ಕಾಲೇಜು ಆರಂಭಿಸಲಾಗುವುದು ಎಂದು ತಿಳಿಸಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಅರವಿಂದ ಕರ್ಕಿಕೋಡಿ, ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ವಿಚಾರ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ಸರಕಾಗಿ ಬಳಕೆಯಾಗುತ್ತಿದೆ. ಆಸ್ಪತ್ರೆ ಸ್ಥಾಪನೆ ಭರವಸೆ ನೀಡಿದ ಸುಬ್ರಹ್ಮಣ್ಯ ಶರ್ಮ ಅವರನ್ನು ಅಭಿವಂದಿಸುತ್ತೇನೆ ಎಂದು ಹೇಳಿದರು.</p>.<p>ಧರ್ಮಾಧಿಕಾರಿ ಮಾರುತಿ ಗುರೂಜಿ, ಬೆಂಗಳೂರಿನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಚೇತನ್ ಆರ್. ಮಾತನಾಡಿದರು. ಅರ್ಪಿತಾ, ಮಾರುತಿ ಗುರೂಜಿ ಇದ್ದರು. ಗಣಪತಿ ಹೆಗಡೆ ಸ್ವಾಗತಿಸಿದರು. ಆಡಳಿತಾಧಿಕಾರಿ ಎಂ.ಎನ್.ಮಂಜುನಾಥ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಾಲಕೃಷ್ಣ ನಾಯ್ಕ, ಕವಿತಾ ದೇವಾಡಿಗ ನಿರೂಪಿಸಿದರು. ಶಿಕ್ಷಕ ದಯಾನಂದ ನಾಯ್ಕ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>