<p><strong>ಕಾರವಾರ</strong>: ಅಕ್ರಮವಾಗಿ ಕೋಟ್ಯಂತರ ಮೊತ್ತ ದಾಸ್ತಾನಿಟ್ಟುಕೊಂಡಿದ್ದ ಜಾರ್ಖಂಡ್ ಕಾಂಗ್ರೆಸ್ ಸಂಸದ ಧೀರಜ್ ಸಾಹು ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.</p><p>ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಧರಣಿ ನಡೆಸಿದ ಬಳಿಕ ಕಾಲ್ನಡಿಗೆ ಮೂಲಕ ಗಾಂಧಿ ಉದ್ಯಾನಕ್ಕೆ ಮುಖಂಡರು, ಕಾರ್ಯಕರ್ತರು ತೆರಳಿದರು. ಗಾಂಧಿ ಪ್ರತಿಮೆ ಎದುರು ಕುಳಿತು ಪ್ರತಿಭಟನೆ ನಡೆಸಿ ಭ್ರಷ್ಟ ಕಾಂಗ್ರೆಸ್ ನಾಯಕರನ್ನು ಬಂಧಿಸಲು ಆಗ್ರಹಿಸಲಾಯಿತು.</p><p>ನಗರದ ಮುಖ್ಯ ರಸ್ತೆಯಲ್ಲಿಯೂ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ಸುಭಾಷ ವೃತ್ತದಲ್ಲಿ ಸೇರಿ ಪ್ರತಿಭಟಿಸಿದರು.</p>. <p>ಪ್ರತಿಭಟನೆ ನೇತೃತ್ವ ವಹಿಸಿದ್ದ ವಿಧಾನಸಭೆ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾಂಗ್ರೆಸ್ ಭ್ರಷ್ಟಾಚಾರದ ಜನಕ. ಧೀರಜ್ ಸಾಹು ಎಂಬ ಸಂಸದ ಕಾಂಗ್ರೆಸ್ ಸಾವಿಗೆ ದಾರಿಮಾಡಿಕೊಟ್ಟಿದ್ದಾರೆ ಎಂದರು.</p><p>ಯುಪಿಎ ಸರ್ಕಾರದ ಅವಧಿಯಲ್ಲಿ ಬೋಫೋರ್ಸ್, 2ಜಿ ಹಗರಣ ಸೇರಿದಂತೆ ನೀರು, ನೆಲ, ಗಾಳಿಯಲ್ಲಿಯೂ ಭ್ರಷ್ಟಾಚಾರ ನಡೆದಿತ್ತು. ಕಾಂಗ್ರೆಸ್ ಹಣ ಹಂಚಿ ಮತ ಖರೀದಿಸುವ ಷಡ್ಯಂತ್ರ ನಡೆಸುತ್ತಿದೆ. ಕರ್ನಾಟಕವನ್ನು ಕಾಂಗ್ರೆಸ್ ನಾಯಕರು ಎಟಿಎಂ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.</p><p>ಚುನಾವಣೆಯಲ್ಲಿ ಗೆಲ್ಲಲು ಗ್ಯಾರಂಟಿ ಬಳಕೆಯಾಯಿತೆ ವಿನಃ ಅವುಗಳನ್ನು ಅರ್ಹರಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದರು.</p><p>ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಭ್ರಷ್ಟ ಹಣದ ಮೂಲಕ ಚುನಾವಣೆ ಗೆಲ್ಲುತ್ತಿದ್ದ ಕಾಂಗ್ರೆಸ್ ಈಗ ಪಂಚರಾಜ್ಯ ಚುನಾವಣೆಯ ಸೋಲಿನ ಬಳಿಕ ದೃತಿಗೆಟ್ಟಿದೆ. ಲೋಕಸಭೆ ಚುನಾವಣೆಗೆ ಹಣ ಒಗ್ಗೂಡಿಸಲಾಗುತ್ತಿದೆ ಎಂದರು.</p><p>ಮುಖಂಡ ಸುನೀಲ ಹೆಗಡೆ, ಕಾಂಗ್ರೆಸ್ ರಕ್ತದಲ್ಲಿ ಭ್ರಷ್ಟಾಚಾರ ತುಂಬಿಕೊಂಡಿದೆ ಎಂದರು. </p><p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ನಾಯಕ, ರಾಹುಲ್ ಗಾಂಧಿ ಅವರ ಆಪ್ತ ಸಂಸದನ ಮನೆಯಲ್ಲಿ ದೊಡ್ಡ ಮೊತ್ತದ ನಗದು ಪತ್ತೆಯಾಗಿದ್ದು, ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದ ಕಾಂಗ್ರೆಸ್ ಬಣ್ಣ ಬಹಿರಂಗವಾಗಿದೆ ಎಂದರು.</p><p>ಪ್ರಮುಖರಾದ ಚಂದ್ರು ಎಸಳೆ, ಗೋವಿಂದ ನಾಯ್ಕ, ನಾಗರಾಜ ನಾಯಕ, ಎಂ.ಜಿ.ಭಟ್, ಎನ್.ಎಸ್.ಹೆಗಡೆ, ನಯನಾ ನೀಲಾವರ, ನಗರಸಭೆಯ ಬಿಜೆಪಿ ಸದಸ್ಯರು, ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಅಕ್ರಮವಾಗಿ ಕೋಟ್ಯಂತರ ಮೊತ್ತ ದಾಸ್ತಾನಿಟ್ಟುಕೊಂಡಿದ್ದ ಜಾರ್ಖಂಡ್ ಕಾಂಗ್ರೆಸ್ ಸಂಸದ ಧೀರಜ್ ಸಾಹು ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.</p><p>ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಧರಣಿ ನಡೆಸಿದ ಬಳಿಕ ಕಾಲ್ನಡಿಗೆ ಮೂಲಕ ಗಾಂಧಿ ಉದ್ಯಾನಕ್ಕೆ ಮುಖಂಡರು, ಕಾರ್ಯಕರ್ತರು ತೆರಳಿದರು. ಗಾಂಧಿ ಪ್ರತಿಮೆ ಎದುರು ಕುಳಿತು ಪ್ರತಿಭಟನೆ ನಡೆಸಿ ಭ್ರಷ್ಟ ಕಾಂಗ್ರೆಸ್ ನಾಯಕರನ್ನು ಬಂಧಿಸಲು ಆಗ್ರಹಿಸಲಾಯಿತು.</p><p>ನಗರದ ಮುಖ್ಯ ರಸ್ತೆಯಲ್ಲಿಯೂ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ಸುಭಾಷ ವೃತ್ತದಲ್ಲಿ ಸೇರಿ ಪ್ರತಿಭಟಿಸಿದರು.</p>. <p>ಪ್ರತಿಭಟನೆ ನೇತೃತ್ವ ವಹಿಸಿದ್ದ ವಿಧಾನಸಭೆ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾಂಗ್ರೆಸ್ ಭ್ರಷ್ಟಾಚಾರದ ಜನಕ. ಧೀರಜ್ ಸಾಹು ಎಂಬ ಸಂಸದ ಕಾಂಗ್ರೆಸ್ ಸಾವಿಗೆ ದಾರಿಮಾಡಿಕೊಟ್ಟಿದ್ದಾರೆ ಎಂದರು.</p><p>ಯುಪಿಎ ಸರ್ಕಾರದ ಅವಧಿಯಲ್ಲಿ ಬೋಫೋರ್ಸ್, 2ಜಿ ಹಗರಣ ಸೇರಿದಂತೆ ನೀರು, ನೆಲ, ಗಾಳಿಯಲ್ಲಿಯೂ ಭ್ರಷ್ಟಾಚಾರ ನಡೆದಿತ್ತು. ಕಾಂಗ್ರೆಸ್ ಹಣ ಹಂಚಿ ಮತ ಖರೀದಿಸುವ ಷಡ್ಯಂತ್ರ ನಡೆಸುತ್ತಿದೆ. ಕರ್ನಾಟಕವನ್ನು ಕಾಂಗ್ರೆಸ್ ನಾಯಕರು ಎಟಿಎಂ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.</p><p>ಚುನಾವಣೆಯಲ್ಲಿ ಗೆಲ್ಲಲು ಗ್ಯಾರಂಟಿ ಬಳಕೆಯಾಯಿತೆ ವಿನಃ ಅವುಗಳನ್ನು ಅರ್ಹರಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದರು.</p><p>ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಭ್ರಷ್ಟ ಹಣದ ಮೂಲಕ ಚುನಾವಣೆ ಗೆಲ್ಲುತ್ತಿದ್ದ ಕಾಂಗ್ರೆಸ್ ಈಗ ಪಂಚರಾಜ್ಯ ಚುನಾವಣೆಯ ಸೋಲಿನ ಬಳಿಕ ದೃತಿಗೆಟ್ಟಿದೆ. ಲೋಕಸಭೆ ಚುನಾವಣೆಗೆ ಹಣ ಒಗ್ಗೂಡಿಸಲಾಗುತ್ತಿದೆ ಎಂದರು.</p><p>ಮುಖಂಡ ಸುನೀಲ ಹೆಗಡೆ, ಕಾಂಗ್ರೆಸ್ ರಕ್ತದಲ್ಲಿ ಭ್ರಷ್ಟಾಚಾರ ತುಂಬಿಕೊಂಡಿದೆ ಎಂದರು. </p><p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ನಾಯಕ, ರಾಹುಲ್ ಗಾಂಧಿ ಅವರ ಆಪ್ತ ಸಂಸದನ ಮನೆಯಲ್ಲಿ ದೊಡ್ಡ ಮೊತ್ತದ ನಗದು ಪತ್ತೆಯಾಗಿದ್ದು, ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದ ಕಾಂಗ್ರೆಸ್ ಬಣ್ಣ ಬಹಿರಂಗವಾಗಿದೆ ಎಂದರು.</p><p>ಪ್ರಮುಖರಾದ ಚಂದ್ರು ಎಸಳೆ, ಗೋವಿಂದ ನಾಯ್ಕ, ನಾಗರಾಜ ನಾಯಕ, ಎಂ.ಜಿ.ಭಟ್, ಎನ್.ಎಸ್.ಹೆಗಡೆ, ನಯನಾ ನೀಲಾವರ, ನಗರಸಭೆಯ ಬಿಜೆಪಿ ಸದಸ್ಯರು, ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>