ಪ್ರತಿಭಟನೆ ನೇತೃತ್ವ ವಹಿಸಿದ್ದ ವಿಧಾನಸಭೆ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾಂಗ್ರೆಸ್ ಭ್ರಷ್ಟಾಚಾರದ ಜನಕ. ಧೀರಜ್ ಸಾಹು ಎಂಬ ಸಂಸದ ಕಾಂಗ್ರೆಸ್ ಸಾವಿಗೆ ದಾರಿಮಾಡಿಕೊಟ್ಟಿದ್ದಾರೆ ಎಂದರು.
ಯುಪಿಎ ಸರ್ಕಾರದ ಅವಧಿಯಲ್ಲಿ ಬೋಫೋರ್ಸ್, 2ಜಿ ಹಗರಣ ಸೇರಿದಂತೆ ನೀರು, ನೆಲ, ಗಾಳಿಯಲ್ಲಿಯೂ ಭ್ರಷ್ಟಾಚಾರ ನಡೆದಿತ್ತು. ಕಾಂಗ್ರೆಸ್ ಹಣ ಹಂಚಿ ಮತ ಖರೀದಿಸುವ ಷಡ್ಯಂತ್ರ ನಡೆಸುತ್ತಿದೆ. ಕರ್ನಾಟಕವನ್ನು ಕಾಂಗ್ರೆಸ್ ನಾಯಕರು ಎಟಿಎಂ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.
ಚುನಾವಣೆಯಲ್ಲಿ ಗೆಲ್ಲಲು ಗ್ಯಾರಂಟಿ ಬಳಕೆಯಾಯಿತೆ ವಿನಃ ಅವುಗಳನ್ನು ಅರ್ಹರಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಭ್ರಷ್ಟ ಹಣದ ಮೂಲಕ ಚುನಾವಣೆ ಗೆಲ್ಲುತ್ತಿದ್ದ ಕಾಂಗ್ರೆಸ್ ಈಗ ಪಂಚರಾಜ್ಯ ಚುನಾವಣೆಯ ಸೋಲಿನ ಬಳಿಕ ದೃತಿಗೆಟ್ಟಿದೆ. ಲೋಕಸಭೆ ಚುನಾವಣೆಗೆ ಹಣ ಒಗ್ಗೂಡಿಸಲಾಗುತ್ತಿದೆ ಎಂದರು.
ಮುಖಂಡ ಸುನೀಲ ಹೆಗಡೆ, ಕಾಂಗ್ರೆಸ್ ರಕ್ತದಲ್ಲಿ ಭ್ರಷ್ಟಾಚಾರ ತುಂಬಿಕೊಂಡಿದೆ ಎಂದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ನಾಯಕ, ರಾಹುಲ್ ಗಾಂಧಿ ಅವರ ಆಪ್ತ ಸಂಸದನ ಮನೆಯಲ್ಲಿ ದೊಡ್ಡ ಮೊತ್ತದ ನಗದು ಪತ್ತೆಯಾಗಿದ್ದು, ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದ ಕಾಂಗ್ರೆಸ್ ಬಣ್ಣ ಬಹಿರಂಗವಾಗಿದೆ ಎಂದರು.
ಪ್ರಮುಖರಾದ ಚಂದ್ರು ಎಸಳೆ, ಗೋವಿಂದ ನಾಯ್ಕ, ನಾಗರಾಜ ನಾಯಕ, ಎಂ.ಜಿ.ಭಟ್, ಎನ್.ಎಸ್.ಹೆಗಡೆ, ನಯನಾ ನೀಲಾವರ, ನಗರಸಭೆಯ ಬಿಜೆಪಿ ಸದಸ್ಯರು, ಇತರರು ಪಾಲ್ಗೊಂಡಿದ್ದರು.