<p><strong>ಶಿರಸಿ: </strong>ವಿದ್ಯುತ್ ಖಾಸಗೀಕರಣ ಕಾನೂನು ಜಾರಿಗೊಳಿಸಿ ಕೃಷಿ ಪಂಪ್ಸೆಟ್ಗೂ ಮುಂಗಡ ಪಾವತಿ (ಪ್ರಿಪೇಯ್ಡ್) ಜಾರಿಗೊಳಿಸುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿ ಖಂಡಿಸಿ ಭೂಮಿ ಹಕ್ಕು ಹೋರಾಟಗಾರರು ತಾಲ್ಲೂಕಿನ ಕಂಡ್ರಾಜಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಗ್ರಾಮದ ರೈತರೊಬ್ಬರ ಕೃಷಿ ಪಂಪ್ಸೆಟ್ ಮನೆ ಪಕ್ಕ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಭಾವಚಿತ್ರ ಪ್ರದರ್ಶಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.</p>.<p>ಭೂಮಿ ಹಕ್ಕು ಹೋರಾಟಗಾರರ ಪ್ರಮುಖ ರವೀಂದ್ರ ನಾಯ್ಕ ಮಾತನಾಡಿ, ‘ರಾಜ್ಯದ ರೈತರ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನೀಡಿದ್ದ ಅಂದಿನ ಮುಖ್ಯಮಂತ್ರಿ ಬಂಗಾರಪ್ಪ ಮಾದರಿ ಕೆಲಸ ಮಾಡಿದ್ದರು. ಆದರೆ ಈಗಿನ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿಯಾಗಿ ವರ್ತಿಸುತ್ತಿವೆ’ ಎಂದು ಆರೋಪಿಸಿದರು.</p>.<p>‘ತಿದ್ದುಪಡಿ ಮಸೂದೆ ರೈತರು ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ತುಂಬಲಾರದಷ್ಟು ನಷ್ಟ ಉಂಟುಮಾಡುವುದು ನಿಶ್ಚಿತ. ಅತಿವೃಷ್ಟಿ ಮತ್ತು ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ಈ ಮಸೂದೆ ಗಾಯದ ಮೇಲೆ ಬರೆ ಎಳೆಯಲಿದೆ’ ಎಂದರು.</p>.<p>ತಕ್ಷಣ ಸರ್ಕಾರ ವಿದ್ಯುತ್ ತಿದ್ದುಪಡಿ ಮಸೂದೆ ಹಿಂದಕ್ಕೆ ಪಡೆಯಬೇಕೆಂದು ಪ್ರಗತಿ ಪರ ರೈತ ವೆಂಕಟೇಶ ಬೈಂದೂರ್ ಬಿಸಲಕೊಪ್ಪ ಒತ್ತಾಯಿಸಿದರು.</p>.<p>ಬಂಕನಾಳ ಗ್ರಾಮ ಪಂಚಾಯ್ತಿ ಅಧ್ಯಕ್ಷ ಬೆಲ್ಲ ಗೌಡ, ಎಂ.ಆರ್.ನಾಯ್ಕ ಕಂಡ್ರಾಜಿ, ಮೋಹನ ನಾಯ್ಕ, ನೆಹರು ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ವಿದ್ಯುತ್ ಖಾಸಗೀಕರಣ ಕಾನೂನು ಜಾರಿಗೊಳಿಸಿ ಕೃಷಿ ಪಂಪ್ಸೆಟ್ಗೂ ಮುಂಗಡ ಪಾವತಿ (ಪ್ರಿಪೇಯ್ಡ್) ಜಾರಿಗೊಳಿಸುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿ ಖಂಡಿಸಿ ಭೂಮಿ ಹಕ್ಕು ಹೋರಾಟಗಾರರು ತಾಲ್ಲೂಕಿನ ಕಂಡ್ರಾಜಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಗ್ರಾಮದ ರೈತರೊಬ್ಬರ ಕೃಷಿ ಪಂಪ್ಸೆಟ್ ಮನೆ ಪಕ್ಕ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಭಾವಚಿತ್ರ ಪ್ರದರ್ಶಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.</p>.<p>ಭೂಮಿ ಹಕ್ಕು ಹೋರಾಟಗಾರರ ಪ್ರಮುಖ ರವೀಂದ್ರ ನಾಯ್ಕ ಮಾತನಾಡಿ, ‘ರಾಜ್ಯದ ರೈತರ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನೀಡಿದ್ದ ಅಂದಿನ ಮುಖ್ಯಮಂತ್ರಿ ಬಂಗಾರಪ್ಪ ಮಾದರಿ ಕೆಲಸ ಮಾಡಿದ್ದರು. ಆದರೆ ಈಗಿನ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿಯಾಗಿ ವರ್ತಿಸುತ್ತಿವೆ’ ಎಂದು ಆರೋಪಿಸಿದರು.</p>.<p>‘ತಿದ್ದುಪಡಿ ಮಸೂದೆ ರೈತರು ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ತುಂಬಲಾರದಷ್ಟು ನಷ್ಟ ಉಂಟುಮಾಡುವುದು ನಿಶ್ಚಿತ. ಅತಿವೃಷ್ಟಿ ಮತ್ತು ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ಈ ಮಸೂದೆ ಗಾಯದ ಮೇಲೆ ಬರೆ ಎಳೆಯಲಿದೆ’ ಎಂದರು.</p>.<p>ತಕ್ಷಣ ಸರ್ಕಾರ ವಿದ್ಯುತ್ ತಿದ್ದುಪಡಿ ಮಸೂದೆ ಹಿಂದಕ್ಕೆ ಪಡೆಯಬೇಕೆಂದು ಪ್ರಗತಿ ಪರ ರೈತ ವೆಂಕಟೇಶ ಬೈಂದೂರ್ ಬಿಸಲಕೊಪ್ಪ ಒತ್ತಾಯಿಸಿದರು.</p>.<p>ಬಂಕನಾಳ ಗ್ರಾಮ ಪಂಚಾಯ್ತಿ ಅಧ್ಯಕ್ಷ ಬೆಲ್ಲ ಗೌಡ, ಎಂ.ಆರ್.ನಾಯ್ಕ ಕಂಡ್ರಾಜಿ, ಮೋಹನ ನಾಯ್ಕ, ನೆಹರು ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>