ಅಂಕೋಲಾ: ರಾಮನಗರದಲ್ಲಿ ವಕೀಲರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ ಪೊಲೀಸರ ಮೇಲೆ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಅಂಕೋಲಾ ವಕೀಲರ ಸಂಘದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಶಂಕರ ಬಿ. ಅವರಿಗೆ ಮನವಿ ಸಲ್ಲಿಸಲಾಯಿತು.
ವಕೀಲರ ಮೇಲೆ ಸುಳ್ಳು ಪ್ರಕರಣ ಹಾಕಿ ಪ್ರಥಮ ವರ್ತಮಾನ ವರದಿಯನ್ನು ನೀಡರುವುದು ಖಂಡನೀಯ. ಕಾನೂನು ಮೀರಿದ ಆರಕ್ಷಕ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ವಕೀಲರ ಸಂಘದ ಅಧ್ಯಕ್ಷ ವಿನೋದ ಶಾನಭಾಗ, ವಕೀಲರಾದ ನಿತ್ಯಾನಂದ ಕವರಿ, ಉಮೇಶ ನಾಯ್ಕ, ನಾಗಾನಂದ ಬಂಟ, ಎಸ್.ಜಿ.ನಾಯ್ಕ, ಇತರರು ಪಾಲ್ಗೊಂಡಿದ್ದರು.