ಬಸ್ ನಿಲ್ದಾಣದ ಎದುರು ಸೇರಿದ ಸಿಐಟಿಯು ಕಾರ್ಯಕರ್ತರು ಬಸ್ ಗಳಿಗೆ ಅಡ್ಡ ನಿಂತರು. ಆಗ ಪೊಲೀಸರು ಮಧ್ಯಪ್ರವೇಶಿಸಿ ಬಸ್ ಸಂಚಾರ ತಡೆಯದಂತೆ ಮನವಿ ಮಾಡಿದರು. ಆದರೂ ಪ್ರತಿಭಟನಾಕಾರರು ಕೇಳಲಿಲ್ಲ. ಕೊನೆಗೆ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಪೊಲೀಸ್ ಬಸ್ ಗೆ ಹತ್ತಿಸಿ ಬೇರೆಡೆಗೆ ಕರೆದುಕೊಂಡು ಹೋದರು. ಪೊಲೀಸರ ಕ್ರಮಕ್ಕೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.