‘ಪೆನ್ನೇಕರ್ ಅವರು ಮಟ್ಕಾ, ಗಾಂಜಾದಂಥ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಿದ್ದರು. ಚುನಾವಣೆ ಸಮೀಪಿಸಿರುವ ಕಾರಣ ದಕ್ಷ, ನಿಷ್ಠಾವಂತ ಅಧಿಕಾರಿಗಳ ವರ್ಗಾವಣೆಯಾಗುತ್ತಿದೆ. ಆಡಳಿತ ಪಕ್ಷದ ಕೆಲವರೇ ಈ ಚಟುವಟಿಕೆಗಳಲ್ಲಿ ಇರುವ ಕಾರಣ, ಇವರ ವರ್ಗಾವಣೆ ತಡೆಗೆ ಕೋರಿ ಹೆಚ್ಚಿನ ಒತ್ತಡ ಹೇರಿದರೂ ಪ್ರಯೋಜನವಿರಲಿಲ್ಲ ಎಂಬುದು ನಮ್ಮ ಅರಿವಿಗೆ ಬಂದಿತ್ತು. ಹೀಗಾಗಿ ಈ ಬಗ್ಗೆ ಜನರೇ ಎಚ್ಚೆತ್ತುಕೊಳ್ಳಬೇಕು. ಆಡಳಿತ ಹೇಗಿದೆ ಎನ್ನುವುದನ್ನು ಅರಿತುಕೊಳ್ಳಬೇಕು’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.