<p><strong>ಶಿರಸಿ:</strong> ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ ಏಳು ತಾಲ್ಲೂಕುಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಶಿರಸಿಯಲ್ಲಿ ಕೋವಿಡ್ ಲ್ಯಾಬ್ ಸ್ಥಾಪನೆಗೆ ಅಂತಿಮ ಹಂತದ ಸಿದ್ಧತೆ ವೇಗ ಪಡೆದುಕೊಂಡಿದ್ದು, ಸೋಮವಾರ ಸಂಜೆ ಎರಡು ಆರ್.ಟಿ.ಪಿ.ಸಿ.ಆರ್. ಯಂತ್ರ ಪೂರೈಕೆ ಆಗಿದೆ.</p>.<p>ಪಂಡಿತ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣಗೊಂಡಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಹಿಂಬದಿಯಲ್ಲಿ ಪ್ರಯೋಗಾಲಯ ಸ್ಥಾಪನೆಗೆ ಸಿವಿಲ್ ಕೆಲಸ ಮಾತ್ರ ಮುಗಿಸಲಾಗಿತ್ತು. ಅಗತ್ಯ ಯಂತ್ರೋಪಕರಣಗಳ ಪೂರೈಕೆಗೆ ವಿಳಂಬವಾಗಿತ್ತು.</p>.<p>ಈ ಕುರಿತು ‘ಭರವಸೆಗೆ ಸೀಮಿತವಾದ ಕೋವಿಡ್ ಲ್ಯಾಬ್’ ಶೀರ್ಷಿಕೆ ಅಡಿ ‘ಪ್ರಜಾವಾಣಿ’ ಆ.13 ರಂದು ವರದಿ ಪ್ರಕಟಿಸಿತ್ತು. ಆ ಬಳಿಕ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡ ಆರ್.ಟಿ.ಪಿ.ಸಿ.ಆರ್ ಯಂತ್ರ ಸೇರಿದಂತೆ ಲ್ಯಾಬ್ಗೆ ಅಗತ್ಯವಿರುವ ಸೌಕರ್ಯ ಒದಗಿಸುವ ಕುರಿತು ಆರೋಗ್ಯ ಇಲಾಖೆ ಉನ್ನತ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು. ಇಲಾಖೆ ಪ್ರಯೋಗಾಲಯ ಕೆಲಸ ಪೂರ್ಣಗೊಳಿಸಲು ತ್ವರಿತ ಸಿದ್ಧತೆ ನಡೆಸಲಾರಂಭಿಸಿದೆ.</p>.<p>‘ಕೋವಿಡ್ ಲ್ಯಾಬ್ ಆದಷ್ಟು ಶೀಘ್ರ ಕಾರ್ಯಾರಂಭಿಸುವ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ’ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿಕ್ರಿಯಿಸಿದರು.</p>.<p>‘ನಾಲ್ಕೈದು ದಿನದೊಳಗೆ ಆರ್.ಎನ್.ಎ.ಎಕ್ಸಟ್ರಾಕ್ಟರ್ ಯಂತ್ರ ಬರಲಿದೆ. ಆ ಬಳಿಕ ಪ್ರಯೋಗಾಲಯದಲ್ಲಿ ತಾಂತ್ರಿಕ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಐ.ಸಿ.ಎಂ.ಆರ್. ಮಾರ್ಗಸೂಚಿ ಆಧರಿಸಿ, ಅಂತಿಮ ಅನುಮತಿ ಪಡೆದ ಬಳಿಕ ಕೋವಿಡ್ ಪತ್ತೆ ಕೆಲಸ ಆರಂಭಗೊಳ್ಳುತ್ತದೆ. ಮುಂದಿನ ಹದಿನೈದು ದಿನದೊಳಗೆ ಇದು ಸಾಧ್ಯವಾಗುವ ಗುರಿ ಇಟ್ಟುಕೊಂಡಿದ್ದೇವೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರದ್ ನಾಯಕ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ ಏಳು ತಾಲ್ಲೂಕುಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಶಿರಸಿಯಲ್ಲಿ ಕೋವಿಡ್ ಲ್ಯಾಬ್ ಸ್ಥಾಪನೆಗೆ ಅಂತಿಮ ಹಂತದ ಸಿದ್ಧತೆ ವೇಗ ಪಡೆದುಕೊಂಡಿದ್ದು, ಸೋಮವಾರ ಸಂಜೆ ಎರಡು ಆರ್.ಟಿ.ಪಿ.ಸಿ.ಆರ್. ಯಂತ್ರ ಪೂರೈಕೆ ಆಗಿದೆ.</p>.<p>ಪಂಡಿತ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣಗೊಂಡಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಹಿಂಬದಿಯಲ್ಲಿ ಪ್ರಯೋಗಾಲಯ ಸ್ಥಾಪನೆಗೆ ಸಿವಿಲ್ ಕೆಲಸ ಮಾತ್ರ ಮುಗಿಸಲಾಗಿತ್ತು. ಅಗತ್ಯ ಯಂತ್ರೋಪಕರಣಗಳ ಪೂರೈಕೆಗೆ ವಿಳಂಬವಾಗಿತ್ತು.</p>.<p>ಈ ಕುರಿತು ‘ಭರವಸೆಗೆ ಸೀಮಿತವಾದ ಕೋವಿಡ್ ಲ್ಯಾಬ್’ ಶೀರ್ಷಿಕೆ ಅಡಿ ‘ಪ್ರಜಾವಾಣಿ’ ಆ.13 ರಂದು ವರದಿ ಪ್ರಕಟಿಸಿತ್ತು. ಆ ಬಳಿಕ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡ ಆರ್.ಟಿ.ಪಿ.ಸಿ.ಆರ್ ಯಂತ್ರ ಸೇರಿದಂತೆ ಲ್ಯಾಬ್ಗೆ ಅಗತ್ಯವಿರುವ ಸೌಕರ್ಯ ಒದಗಿಸುವ ಕುರಿತು ಆರೋಗ್ಯ ಇಲಾಖೆ ಉನ್ನತ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು. ಇಲಾಖೆ ಪ್ರಯೋಗಾಲಯ ಕೆಲಸ ಪೂರ್ಣಗೊಳಿಸಲು ತ್ವರಿತ ಸಿದ್ಧತೆ ನಡೆಸಲಾರಂಭಿಸಿದೆ.</p>.<p>‘ಕೋವಿಡ್ ಲ್ಯಾಬ್ ಆದಷ್ಟು ಶೀಘ್ರ ಕಾರ್ಯಾರಂಭಿಸುವ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ’ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿಕ್ರಿಯಿಸಿದರು.</p>.<p>‘ನಾಲ್ಕೈದು ದಿನದೊಳಗೆ ಆರ್.ಎನ್.ಎ.ಎಕ್ಸಟ್ರಾಕ್ಟರ್ ಯಂತ್ರ ಬರಲಿದೆ. ಆ ಬಳಿಕ ಪ್ರಯೋಗಾಲಯದಲ್ಲಿ ತಾಂತ್ರಿಕ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಐ.ಸಿ.ಎಂ.ಆರ್. ಮಾರ್ಗಸೂಚಿ ಆಧರಿಸಿ, ಅಂತಿಮ ಅನುಮತಿ ಪಡೆದ ಬಳಿಕ ಕೋವಿಡ್ ಪತ್ತೆ ಕೆಲಸ ಆರಂಭಗೊಳ್ಳುತ್ತದೆ. ಮುಂದಿನ ಹದಿನೈದು ದಿನದೊಳಗೆ ಇದು ಸಾಧ್ಯವಾಗುವ ಗುರಿ ಇಟ್ಟುಕೊಂಡಿದ್ದೇವೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರದ್ ನಾಯಕ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>