‘ಇದೇ ಮಾದರಿಯಲ್ಲಿ ಜಿಲ್ಲೆಯ ಗಡಿ ಭಾಗಗಳಾದ ಕಾರವಾರ, ಯಲ್ಲಾಪುರ, ಶಿರಸಿ, ಸಿದ್ದಾಪುರ, ಮುಂಡಗೋಡ ಮತ್ತು ಭಟ್ಕಳದಲ್ಲಿ ಕೂಡ ತಂಡಗಳನ್ನು ನಿಯೋಜಿಸಬೇಕು. ಕ್ವಾರಂಟೈನ್ ಮಾಡಲು ಸೂಚಿಸಲಾಗಿರುವ ವ್ಯಕ್ತಿಗಳ ಹೆಸರನ್ನು ಆಯಾ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ ಪಟ್ಟಿಯ ಮೂಲಕ ತಿಳಿಸಬೇಕು. ಕ್ವಾರಂಟೈನ್ ಕೇಂದ್ರಗಳು ಮತ್ತು ಅವುಗಳ ಉಸ್ತುವಾರಿ ವ್ಯಕ್ತಿಗಳ ಮಾಹಿತಿಯನ್ನು ನೀಡಬೇಕು’ ಎಂದು ಸೂಚಿಸಿದರು.