<p><strong>ಕಾರವಾರ:</strong> ‘ಮೂಲವನ್ನು ರಕ್ಷಿಸಿಕೊಳ್ಳುವುದು ಪ್ರತಿಯೊಬ್ಬರ ಹೊಣೆ. ಶಂಕರಾಚಾರ್ಯರು ರಘೂತ್ತಮ ಮಠವನ್ನು ಸ್ಥಾಪಿಸಿದ ಅಶೋಕೆಯ ಪುನರುತ್ಥಾನ ಕಾರ್ಯ ಸದ್ಯದಲ್ಲೇ ಆರಂಭವಾಗಲಿದೆ’ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.</p>.<p>ಗೋಕರ್ಣದ ಅಶೋಕೆಯ ಮಲ್ಲಿಕಾರ್ಜುನ ಸ್ವಾಮಿಗೆ ಏಳು ದಿನಗಳಿಂದ ನಡೆಯುತ್ತಿರುವ ಅತಿರುದ್ರ ಅಭಿಷೇಕದ ಸಂದರ್ಭದಲ್ಲಿ ರುದ್ರಸೇವೆಗೆ ಉಪ್ಪಿನಂಗಡಿ ಮಂಡಲದಿಂದ ಆಗಮಿಸಿದ್ದ ಶಿಷ್ಯರನ್ನು ಉದ್ದೇಶಿಸಿ ಅವರು ಆಶೀರ್ವಚನ ನೀಡಿದರು.</p>.<p>‘ಆದಿ ಗುರು ಶಂಕರರ ಸಂಕಲ್ಪದ ಫಲವಾಗಿ ಮಠದ ಅವಿಚ್ಛಿನ್ನ ಪರಂಪರೆ ಮುಂದುವರಿದಿದೆ. ಕಾರಣಾಂತರದಿಂದ ಮೂಲಮಠ ಸ್ಥಳಾಂತರಗೊಂಡು, ಮೂಲಮಠದ ಕುರುಹುಗಳು ಮಾತ್ರ ಇಂದು ಉಳಿದುಕೊಂಡಿದೆ. ಗೋಕರ್ಣ ಮಂಡಲಕ್ಕೆ ರಾಮಚಂದ್ರಾಪುರ ಮಠ ಮೂಲ’ ಎಂದರು.</p>.<p>ಬೆಳಗಾವಿ ಜಿಲ್ಲೆ ಸವದತ್ತಿಯ ಬ್ರಹ್ಮಾನಂದ ಆಶ್ರಮದ ಶಿವಾನಂದ ಸ್ವಾಮೀಜಿ ಇದ್ದರು.</p>.<p>ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಗೌರವಾಧ್ಯಕ್ಷ ದೇವಶ್ರವ ಶರ್ಮಾ, ಆಡಳಿತಾಧಿಕಾರಿ ಪ್ರಸನ್ನ ಕುಮಾರ್ ಟಿ.ಜಿ., ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ರಮಣ ಭಟ್ ಮುಂಬೈ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ‘ಮೂಲವನ್ನು ರಕ್ಷಿಸಿಕೊಳ್ಳುವುದು ಪ್ರತಿಯೊಬ್ಬರ ಹೊಣೆ. ಶಂಕರಾಚಾರ್ಯರು ರಘೂತ್ತಮ ಮಠವನ್ನು ಸ್ಥಾಪಿಸಿದ ಅಶೋಕೆಯ ಪುನರುತ್ಥಾನ ಕಾರ್ಯ ಸದ್ಯದಲ್ಲೇ ಆರಂಭವಾಗಲಿದೆ’ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.</p>.<p>ಗೋಕರ್ಣದ ಅಶೋಕೆಯ ಮಲ್ಲಿಕಾರ್ಜುನ ಸ್ವಾಮಿಗೆ ಏಳು ದಿನಗಳಿಂದ ನಡೆಯುತ್ತಿರುವ ಅತಿರುದ್ರ ಅಭಿಷೇಕದ ಸಂದರ್ಭದಲ್ಲಿ ರುದ್ರಸೇವೆಗೆ ಉಪ್ಪಿನಂಗಡಿ ಮಂಡಲದಿಂದ ಆಗಮಿಸಿದ್ದ ಶಿಷ್ಯರನ್ನು ಉದ್ದೇಶಿಸಿ ಅವರು ಆಶೀರ್ವಚನ ನೀಡಿದರು.</p>.<p>‘ಆದಿ ಗುರು ಶಂಕರರ ಸಂಕಲ್ಪದ ಫಲವಾಗಿ ಮಠದ ಅವಿಚ್ಛಿನ್ನ ಪರಂಪರೆ ಮುಂದುವರಿದಿದೆ. ಕಾರಣಾಂತರದಿಂದ ಮೂಲಮಠ ಸ್ಥಳಾಂತರಗೊಂಡು, ಮೂಲಮಠದ ಕುರುಹುಗಳು ಮಾತ್ರ ಇಂದು ಉಳಿದುಕೊಂಡಿದೆ. ಗೋಕರ್ಣ ಮಂಡಲಕ್ಕೆ ರಾಮಚಂದ್ರಾಪುರ ಮಠ ಮೂಲ’ ಎಂದರು.</p>.<p>ಬೆಳಗಾವಿ ಜಿಲ್ಲೆ ಸವದತ್ತಿಯ ಬ್ರಹ್ಮಾನಂದ ಆಶ್ರಮದ ಶಿವಾನಂದ ಸ್ವಾಮೀಜಿ ಇದ್ದರು.</p>.<p>ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಗೌರವಾಧ್ಯಕ್ಷ ದೇವಶ್ರವ ಶರ್ಮಾ, ಆಡಳಿತಾಧಿಕಾರಿ ಪ್ರಸನ್ನ ಕುಮಾರ್ ಟಿ.ಜಿ., ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ರಮಣ ಭಟ್ ಮುಂಬೈ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>