ಅಕಾಲಿಕ ಮಳೆಯಿಂದಾಗಿ ಭತ್ತ ಮತ್ತು ಮೆಕ್ಕೆಜೋಳ ಕೃಷಿಕರು ಚಿಂತೆಗೀಡಾಗಿದ್ದಾರೆ. ಬಹುತೇಕ ಕಡೆಗಳಲ್ಲಿ ಭತ್ತದ ಕಟಾವು ಮುಕ್ತಾಯವಾಗಿದೆ. ಪೈರನ್ನು ಹೊಲಗಳಲ್ಲಿ ಮತ್ತು ಮನೆಯಂಗಳದಲ್ಲಿ ಸಂಗ್ರಹಿಸಿಟ್ಟಿದ್ದು, ಮಳೆ ನೀರಿನಿಂದ ಸಂರಕ್ಷಿಸುವುದು ದೊಡ್ಡ ಸವಾಲಾಗಿದೆ. ಹಾಗಾಗಿ ಸರ್ಕಾರವು ಸಾಮಾನ್ಯ ಭತ್ತದ ಖರೀದಿ ಕೇಂದ್ರವನ್ನು ಶೀಘ್ರವೇ ಆರಂಭಿಸಬೇಕು ಎಂಬ ಒತ್ತಾಯ ರೈತರದ್ದಾಗಿದೆ.