ಗಂಗಾವಳಿ ನದಿ ಪಾತ್ರದಲ್ಲಿರುವ ವಾಸರೆ, ಕೊಡ್ಸಣಿ ಮತ್ತು ಕುರ್ವೆ ದ್ವೀಪಗಳಲ್ಲಿಪ್ರವಾಹದಭೀತಿ ಎದುರಾಗಿದೆ. ಪೂಜಗೇರಿ ಹಳ್ಳ ಉಕ್ಕಿ ಹರಿದುಪೂಜಗೇರಿ ಮತ್ತು ನದಿಬಾಗ ಗ್ರಾಮಗಳಲ್ಲಿ ಕೃಷಿ ಭೂಮಿಗೆ ನೀರು ನುಗ್ಗಿದೆ. ಹಳ್ಳದ ನೀರು ಸಮುದ್ರ ಸೇರುವ ಜಾಗದಲ್ಲಿ ಸಮುದ್ರದ ಅಲೆಗಳ ರಭಸಕ್ಕೆ ಮರಳಿನಿಂದ ಮುಚ್ಚಿದೆ.ಇದರಿಂದಾಗಿ ಈ ಭಾಗದಲ್ಲಿರುವ 50ಕ್ಕೂ ಹೆಚ್ಚುಮನೆಗಳು ಜಲಾವೃತಗೊಂಡಿವೆ.