<p><strong>ಜೊಯಿಡಾ</strong>: ತಾಲ್ಲೂಕಿನಲ್ಲಿ ಶನಿವಾರ ಮಧ್ಯಾಹ್ನದಿಂದ ಗಾಳಿ ಸಹಿತ ಬಿರುಸಿನ ಮಳೆ ಬಿಳುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.</p>.<p>ಭಾನುವಾರ ಅಣಶಿಯಿಂದ ಉಳಿವಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ದಿನವಿಡೀ ನೀರು ಹರಿದಿದ್ದು ಜನರು ಸಂಚಾರಕ್ಕೆ ಪರದಾಡುವಂತಾಯಿತು.</p>.<p>ಕುಂಬಾರವಾಡ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆಲೋಲಿ ರಸ್ತೆಯಲ್ಲಿ ನಿರ್ಮಿಸಲಾಗಿದ್ದ ಕಿರು ಸೇತುವೆ ಮಳೆಗೆ ಕುಸಿದಿದ್ದು, ಜೊತೆಗೆ ಅಪ್ಪರ ಕಾನೇರಿ ಜಲಾಶಯ ತುಂಬುತ್ತಿದ್ದು ಕುಂಡಲ ಭಾಗದ ಎಂಟು ಹಳ್ಳಿಗಳ ಜನರು ಸಂಚಾರಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಅಣಶಿಯಿಂದ ಜೊಯಿಡಾ ಮಧ್ಯದಲ್ಲಿ ಬೆಳಗಾವಿ-ಸದಾಶಿವಗಡ ರಾಜ್ಯ ಹೆದ್ದಾರಿಯಲ್ಲಿ ಬಹುತೇಕ ಕಡೆಗಳಲ್ಲಿ ನೀರು ಹರಿಯುತ್ತಿದ್ದು, ಮೊದಲೇ ಗುಂಡಿಗಳಿಂದ ತುಂಬಿರುವ ಹೆದ್ದಾರಿಯಲ್ಲಿ ಜನ ಸಂಚಾರಕ್ಕೆ ಕಷ್ಟ ಎದುರಾಯಿತು.</p>.<p>ಗ್ರಾಮೀಣ ಪ್ರದೇಶದಲ್ಲಿ ಮಳೆಗೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ತೇರಾಳಿ, ಡಿಗ್ಗಿ, ಅಣಶಿ, ಉಳವಿ, ಅನಮೋಡ, ಬಜಾರಕುಣಂಗ ಭಾಗದ ಬಹುತೇಕ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೊಯಿಡಾ</strong>: ತಾಲ್ಲೂಕಿನಲ್ಲಿ ಶನಿವಾರ ಮಧ್ಯಾಹ್ನದಿಂದ ಗಾಳಿ ಸಹಿತ ಬಿರುಸಿನ ಮಳೆ ಬಿಳುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.</p>.<p>ಭಾನುವಾರ ಅಣಶಿಯಿಂದ ಉಳಿವಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ದಿನವಿಡೀ ನೀರು ಹರಿದಿದ್ದು ಜನರು ಸಂಚಾರಕ್ಕೆ ಪರದಾಡುವಂತಾಯಿತು.</p>.<p>ಕುಂಬಾರವಾಡ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆಲೋಲಿ ರಸ್ತೆಯಲ್ಲಿ ನಿರ್ಮಿಸಲಾಗಿದ್ದ ಕಿರು ಸೇತುವೆ ಮಳೆಗೆ ಕುಸಿದಿದ್ದು, ಜೊತೆಗೆ ಅಪ್ಪರ ಕಾನೇರಿ ಜಲಾಶಯ ತುಂಬುತ್ತಿದ್ದು ಕುಂಡಲ ಭಾಗದ ಎಂಟು ಹಳ್ಳಿಗಳ ಜನರು ಸಂಚಾರಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಅಣಶಿಯಿಂದ ಜೊಯಿಡಾ ಮಧ್ಯದಲ್ಲಿ ಬೆಳಗಾವಿ-ಸದಾಶಿವಗಡ ರಾಜ್ಯ ಹೆದ್ದಾರಿಯಲ್ಲಿ ಬಹುತೇಕ ಕಡೆಗಳಲ್ಲಿ ನೀರು ಹರಿಯುತ್ತಿದ್ದು, ಮೊದಲೇ ಗುಂಡಿಗಳಿಂದ ತುಂಬಿರುವ ಹೆದ್ದಾರಿಯಲ್ಲಿ ಜನ ಸಂಚಾರಕ್ಕೆ ಕಷ್ಟ ಎದುರಾಯಿತು.</p>.<p>ಗ್ರಾಮೀಣ ಪ್ರದೇಶದಲ್ಲಿ ಮಳೆಗೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ತೇರಾಳಿ, ಡಿಗ್ಗಿ, ಅಣಶಿ, ಉಳವಿ, ಅನಮೋಡ, ಬಜಾರಕುಣಂಗ ಭಾಗದ ಬಹುತೇಕ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>