ಕಾರವಾರ: ಜಿಲ್ಲೆಯ ಹಲವೆಡೆ ಗುರುವಾರ ಸಾಧಾರಣ ಮಳೆ ಸುರಿಯಿತು. ಜೊಯಿಡಾ ತಾಲ್ಲೂಕಿನ ರಾಮನಗರದಲ್ಲಿ ಬುಧವಾರ ತಡರಾತ್ರಿ ಬೃಹತ್ ಗಾತ್ರದ ಮರವೊಂದು ರಾಮನಗರ–ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿದ್ದರಿಂದ ಕೆಲ ತಾಸುಗಳವರೆಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.
ಕಾರವಾರ, ಶಿರಸಿ ಸೇರಿದಂತೆ ಜಿಲ್ಲೆಯ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಕೆಲ ನಿಮಿಷ ಮಳೆ ಸುರಿಯಿತು. ಹಳಿಯಾಳದಲ್ಲಿ ತಾಸುಗಳ ಕಾಲ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತಾದರೂ ಕೃಷಿಗೆ ಪೂರಕ ವಾತಾವರಣ ಸೃಷ್ಟಿಸಯಾಯಿತು. ಜೊಯಿಡಾದಲ್ಲಿ ಸತತ ನಾಲ್ಕನೇ ದಿನವೂ ಮಳೆ ಸುರಿದಂತಾಯಿತು.
ಜೊಯಿಡಾ ತಾಲ್ಲೂಕಿನ ರಾಮನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಮರ ಬಿದ್ದು ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.