<p><strong>ಕಾರವಾರ</strong>: ಜಿಲ್ಲೆಯಲ್ಲಿ ಗುರುವಾರ ಮಳೆ ಪ್ರಮಾಣ ತಗ್ಗಿದ್ದರೂ ಗಾಳಿಯ ವೇಗ ಹೆಚ್ಚಿದ್ದ ಪರಿಣಾಮ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿತ್ತು. ಇದರಿಂದ ಕಾರವಾರ ತಾಲ್ಲೂಕಿನ ದೇವಬಾಗದಲ್ಲಿ 8 ಹೆಕ್ಟೇರ್ನಷ್ಟು ಗಾಳಿಗಿಡಗಳ ನೆಡುತೋಪು ನಾಶವಾಗಿದೆ.</p>.<p>‘ಗಾಳಿಗಿಡಗಳ ನೆಡುತೋಪಿಗೆ ಸಮೀಪದಲ್ಲಿರುವ ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಗೆ ಸೇರಿದ ಬೀಚ್ ರೆಸಾರ್ಟ್ನ 4 ಕಾಟೇಜ್ಗಳು ಅಲೆಗಳ ಅಬ್ಬರಕ್ಕೆ ಹಾನಿಗೀಡಾಗಿವೆ. ಎರಡು ಕಾಟೇಜ್ಗಳು ನೀರಿನಲ್ಲಿ ಕೊಚ್ಚಿ ಹೋದರೆ, ಇನ್ನೂ ಎರಡು ಕಾಟೇಜ್ಗಳಿಗೆ ಹಾನಿಯಾಗಿದೆ. ₹1 ಕೋಟಿಯಷ್ಟು ನಷ್ಟವಾಗಿದೆ’ ಎಂದು ರೆಸಾರ್ಟ್ ವ್ಯವಸ್ಥಾಪಕರು ತಿಳಿಸಿದ್ದಾರೆ.</p>.<p>‘ಸಮುದ್ರದ ಅಲೆಗಳು ನಿರೀಕ್ಷಿತ ಮಟ್ಟಕ್ಕಿಂತ ಮೇಲಕ್ಕೆ ಅಪ್ಪಳಿಸುವ ಪರಿಣಾಮ ಗಾಳಿಗಿಡಗಳ ನೆಡುತೋಪು ಕೊಚ್ಚಿ ಹೋಗಿದೆ. ನೂರಾರು ಮರಗಳು, ಗಿಡಗಳು ಬುಡ ಸಮೇತ ಕಿತ್ತು ಸಮುದ್ರ ಪಾಲಾಗಿವೆ. 8 ಹೆಕ್ಟೇರ್ ನಷ್ಟು ನಷ್ಟವಾಗಿದೆ. ಕಳೆದ ವರ್ಷ ಏಳು ಹೆಕ್ಟೇರ್ ಪ್ರದೇಶದಲ್ಲಿ ಗಿಡಮರ ನಾಶವಾಗಿದ್ದವು’ ಎಂದು ಕಾರವಾರ ಅರಣ್ಯ ಉಪ ಸಂರಕ್ಷಣಾಧಿಕಾರಿ (ಡಿಸಿಎಫ್) ರವಿಶಂಕರ ತಿಳಿಸಿದ್ದಾರೆ.</p>.<p>ಸತತ ಮಳೆ ಪರಿಣಾಮ ಸಿದ್ದಾಪುರ ತಾಲ್ಲೂಕಿನ ಹಸ್ವಿಗುಳಿ ಗ್ರಾಮದಲ್ಲಿ ಗುಡ್ಡ ಕುಸಿದಿದೆ. ಸಮೀಪದಲ್ಲಿದ್ದ ಮನೆಗಳಿಗೆ ಹಾನಿಯಾಗಿಲ್ಲ. ಬುಧವಾರ ರಾತ್ರಿ ಹೊನ್ನಾವರ–ಸಾಗರ ರಾಷ್ಟ್ರೀಯ ಹೆದ್ದಾರಿ 206ರ ಭಾಸ್ಕೇರ ಸಮೀಪ ಗುಡ್ಡ ಕುಸಿದಿದ್ದರಿಂದ ಕೆಲ ಕಾಲ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಜಿಲ್ಲೆಯಲ್ಲಿ ಗುರುವಾರ ಮಳೆ ಪ್ರಮಾಣ ತಗ್ಗಿದ್ದರೂ ಗಾಳಿಯ ವೇಗ ಹೆಚ್ಚಿದ್ದ ಪರಿಣಾಮ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿತ್ತು. ಇದರಿಂದ ಕಾರವಾರ ತಾಲ್ಲೂಕಿನ ದೇವಬಾಗದಲ್ಲಿ 8 ಹೆಕ್ಟೇರ್ನಷ್ಟು ಗಾಳಿಗಿಡಗಳ ನೆಡುತೋಪು ನಾಶವಾಗಿದೆ.</p>.<p>‘ಗಾಳಿಗಿಡಗಳ ನೆಡುತೋಪಿಗೆ ಸಮೀಪದಲ್ಲಿರುವ ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಗೆ ಸೇರಿದ ಬೀಚ್ ರೆಸಾರ್ಟ್ನ 4 ಕಾಟೇಜ್ಗಳು ಅಲೆಗಳ ಅಬ್ಬರಕ್ಕೆ ಹಾನಿಗೀಡಾಗಿವೆ. ಎರಡು ಕಾಟೇಜ್ಗಳು ನೀರಿನಲ್ಲಿ ಕೊಚ್ಚಿ ಹೋದರೆ, ಇನ್ನೂ ಎರಡು ಕಾಟೇಜ್ಗಳಿಗೆ ಹಾನಿಯಾಗಿದೆ. ₹1 ಕೋಟಿಯಷ್ಟು ನಷ್ಟವಾಗಿದೆ’ ಎಂದು ರೆಸಾರ್ಟ್ ವ್ಯವಸ್ಥಾಪಕರು ತಿಳಿಸಿದ್ದಾರೆ.</p>.<p>‘ಸಮುದ್ರದ ಅಲೆಗಳು ನಿರೀಕ್ಷಿತ ಮಟ್ಟಕ್ಕಿಂತ ಮೇಲಕ್ಕೆ ಅಪ್ಪಳಿಸುವ ಪರಿಣಾಮ ಗಾಳಿಗಿಡಗಳ ನೆಡುತೋಪು ಕೊಚ್ಚಿ ಹೋಗಿದೆ. ನೂರಾರು ಮರಗಳು, ಗಿಡಗಳು ಬುಡ ಸಮೇತ ಕಿತ್ತು ಸಮುದ್ರ ಪಾಲಾಗಿವೆ. 8 ಹೆಕ್ಟೇರ್ ನಷ್ಟು ನಷ್ಟವಾಗಿದೆ. ಕಳೆದ ವರ್ಷ ಏಳು ಹೆಕ್ಟೇರ್ ಪ್ರದೇಶದಲ್ಲಿ ಗಿಡಮರ ನಾಶವಾಗಿದ್ದವು’ ಎಂದು ಕಾರವಾರ ಅರಣ್ಯ ಉಪ ಸಂರಕ್ಷಣಾಧಿಕಾರಿ (ಡಿಸಿಎಫ್) ರವಿಶಂಕರ ತಿಳಿಸಿದ್ದಾರೆ.</p>.<p>ಸತತ ಮಳೆ ಪರಿಣಾಮ ಸಿದ್ದಾಪುರ ತಾಲ್ಲೂಕಿನ ಹಸ್ವಿಗುಳಿ ಗ್ರಾಮದಲ್ಲಿ ಗುಡ್ಡ ಕುಸಿದಿದೆ. ಸಮೀಪದಲ್ಲಿದ್ದ ಮನೆಗಳಿಗೆ ಹಾನಿಯಾಗಿಲ್ಲ. ಬುಧವಾರ ರಾತ್ರಿ ಹೊನ್ನಾವರ–ಸಾಗರ ರಾಷ್ಟ್ರೀಯ ಹೆದ್ದಾರಿ 206ರ ಭಾಸ್ಕೇರ ಸಮೀಪ ಗುಡ್ಡ ಕುಸಿದಿದ್ದರಿಂದ ಕೆಲ ಕಾಲ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>