ಸಂಘಟನೆಯ ಅಧ್ಯಕ್ಷ ಬೇಕ್ರಿ ರಮೇಶ ಧ್ವಜಾರೋಹಣ ನೆರವೇರಿಸಿದರು. ‘ಸತತ 11 ವರ್ಷಗಳಿಂದ ಕದಂಬ ಸೈನ್ಯ ಬನವಾಸಿ ರಾಜ್ಯೋತ್ಸವ ಆಚರಿಸುತ್ತಿದೆ. ಕನ್ನಡ ನಾಡು–ನುಡಿಯ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ’ ಎಂದು ಅವರು ಹೇಳಿದರು. ಗ್ರಾಮ ಪಂಚಾಯ್ತಿ ಅಧ್ಯಕ್ಷ ಗಣೇಶ ಸಣ್ಣಲಿಂಗಣ್ಣನವರ್, ಜಿಲ್ಲಾ ಪಂಚಾಯ್ತಿ ಸದಸ್ಯೆ ರೂಪಾ ನಾಯ್ಕ, ಸಂಘಟನೆ ಸಂಚಾಲಕ ಉದಯಕುಮಾರ ಕಾನಳ್ಳಿ, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎಚ್.ದೇವೇಂದ್ರ ಮಾತನಾಡಿದರು. ಪ್ರಮುಖರಾದ ದೀಪಕ ಬಂಗ್ಲೆ, ಮೋಹನದಾಸ ನಾಯಕ, ಎ.ನಾಗೇಂದ್ರ, ಪರಶುರಾಮ ಶೆಟ್ಟಿ, ಪ್ರಭಾಕರ ಗೌಡ, ಗುತ್ಯಪ್ಪ ಮಾದರ ಇದ್ದರು. ಶಿಕ್ಷಕ ನಾಗರಾಜ ನಾಯ್ಕ ನಿರೂಪಿಸಿದರು. ಮುಖ್ಯ ಶಿಕ್ಷಕ ಶ್ರೀಧರ ನಾಯ್ಕ ವಂದಿಸಿದರು.