ಇಲ್ಲಿ ಬುಧವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ‘ಧರ್ಮದ ವಿಚಾರವನ್ನು ಮುಂದಿಟ್ಟು ರಾಜಕಾರಣ ಮಾಡುವುದು ಬಿಜೆಪಿಯ ಗುಣ. ಧರ್ಮದ ಮೇಲೆ ನಂಬಿಕೆ ಹೊಂದಿರುವ ಪ್ರತಿಯೊಬ್ಬರಿಗೂ ರಾಮಮಂದಿರ ಪವಿತ್ರವಾಗಿದೆ. ಆದರೆ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮಂದಿರ ಉದ್ಘಾಟನೆಯ ನೆಪದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ’ ಎಂದರು.