‘ಮುಸ್ಲಿಮರ ರಂಜಾನ್ ಹಬ್ಬದ ಅಂಗವಾಗಿ ಹಾಕಲಾಗುವ ಈ ಮಾರುಕಟ್ಟೆಗೆ ಹಿಂದೂಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ತೆರಳಿ ಖರೀದಿ ಮಾಡುತ್ತಾರೆ. ಭಟ್ಕಳ ಮಾತ್ರವಲ್ಲದೇ ಹೊನ್ನಾವರ, ಕುಮಟಾ ತಾಲ್ಲೂಕಿನ ಜನರು, ನೆರೆಯ ಉಡುಪಿ ಜಿಲ್ಲೆಯ ಶಿರೂರು, ಬೈಂದೂರು ಭಾಗದ ಜನರು ಬಂದು ಖರೀದಿ ಮಾಡಿ ಹೋಗುತ್ತಾರೆ. ಹಬ್ಬದ ಮುಂಚಿನ ಮೂರು ನಾಲ್ಕು ದಿನಗಳಲ್ಲಿ ಇಲ್ಲಿ ವ್ಯಾಪಾರ ವಹಿವಾಟು ಜೋರಾಗಿ ನಡೆಯುತ್ತದೆ. ಈ ಸಮಯದಲ್ಲಿ ದಿನದ ಹಗಲು ರಾತ್ರಿ ಕೂಡ ಮಾರುಕಟ್ಟೆ ಸಂಪೂರ್ಣ ತೆರದಿರುತ್ತದೆ’ ಎನ್ನುತ್ತಾರೆ ವ್ಯಾಪಾರಿಯೊಬ್ಬರು.