<p><strong>ಕಾರವಾರ</strong>: ಜಿಲ್ಲೆಯಲ್ಲಿ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಪುನಃ ಆರಂಭಗೊಳ್ಳಲಿದ್ದು, ಜೂನ್ 12ರಿಂದ 14ರವರೆಗೆ ಭಾರಿ ಮಳೆ ಸುರಿಯಲಿರುವ ಕಾರಣ ಹವಾಮಾನ ಇಲಾಖೆ ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ.</p>.<p>‘ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳವರೆಗೆ ಗುಡುಗು ಸಿಡಿಲಿನೊಂದಿಗೆ ಕೆಲವು ಪ್ರದೇಶಗಳಲ್ಲಿ ಗಾಳಿಯಿಂದ ಕೂಡಿದ ರಭಸದ ಮಳೆ ಬೀಳುವ ಸಾಧ್ಯತೆ ಇದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಎಚ್ಚರಿಸಿದ್ದಾರೆ.</p>.<p>‘ಮೂರು ದಿನಗಳ ಕಾಲ ಮೀನುಗಾರರು ಕಡಲತೀರದಲ್ಲಿ ಮೀನುಗಾರಿಕೆ ನಡೆಸಬಾರದು. ಸಾಂಪ್ರದಾಯಿಕ ದೋಣಿಗಳು ನೀರಿಗೆ ಇಳಿಯಬಾರದು. ಮೀನುಗಾರಿಕೆ ಪರಿಕರಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು. ಕಡಲತೀರದಲ್ಲಿರುವವರು, ನದಿ ತೀರ, ತಗ್ಗು ಪ್ರದೇಶಗಳಲ್ಲಿ ಜನರು ಸುರಕ್ಷಿತ ಸ್ಥಳಗಳಿಗೆ ಸಾಗಬೇಕು’ ಎಂದೂ ಸೂಚಿಸಿದ್ದಾರೆ.</p>.<p>‘ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ತೊಂದರೆಗಳು ಎದುರಾದಲ್ಲಿ 08382 229857, 9483511015 ಸಂಖ್ಯೆಗೆ ಮಾಹಿತಿ ನೀಡಬಹುದು’ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಜಿಲ್ಲೆಯಲ್ಲಿ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಪುನಃ ಆರಂಭಗೊಳ್ಳಲಿದ್ದು, ಜೂನ್ 12ರಿಂದ 14ರವರೆಗೆ ಭಾರಿ ಮಳೆ ಸುರಿಯಲಿರುವ ಕಾರಣ ಹವಾಮಾನ ಇಲಾಖೆ ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ.</p>.<p>‘ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳವರೆಗೆ ಗುಡುಗು ಸಿಡಿಲಿನೊಂದಿಗೆ ಕೆಲವು ಪ್ರದೇಶಗಳಲ್ಲಿ ಗಾಳಿಯಿಂದ ಕೂಡಿದ ರಭಸದ ಮಳೆ ಬೀಳುವ ಸಾಧ್ಯತೆ ಇದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಎಚ್ಚರಿಸಿದ್ದಾರೆ.</p>.<p>‘ಮೂರು ದಿನಗಳ ಕಾಲ ಮೀನುಗಾರರು ಕಡಲತೀರದಲ್ಲಿ ಮೀನುಗಾರಿಕೆ ನಡೆಸಬಾರದು. ಸಾಂಪ್ರದಾಯಿಕ ದೋಣಿಗಳು ನೀರಿಗೆ ಇಳಿಯಬಾರದು. ಮೀನುಗಾರಿಕೆ ಪರಿಕರಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು. ಕಡಲತೀರದಲ್ಲಿರುವವರು, ನದಿ ತೀರ, ತಗ್ಗು ಪ್ರದೇಶಗಳಲ್ಲಿ ಜನರು ಸುರಕ್ಷಿತ ಸ್ಥಳಗಳಿಗೆ ಸಾಗಬೇಕು’ ಎಂದೂ ಸೂಚಿಸಿದ್ದಾರೆ.</p>.<p>‘ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ತೊಂದರೆಗಳು ಎದುರಾದಲ್ಲಿ 08382 229857, 9483511015 ಸಂಖ್ಯೆಗೆ ಮಾಹಿತಿ ನೀಡಬಹುದು’ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>