ಬೈತಖೋಲ್ನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವ್ಯವಸ್ಥೆ ಮುಂದುವರಿದಿದೆ. ಈ ಬಗ್ಗೆ ಸ್ಥಳೀಯರುಅಸಮಾಧಾನ ವ್ಯಕ್ತಪಡಿಸಿ, ‘ಬಂದರು ಇಲಾಖೆಯ ಕಾಂಪೌಂಡ್ ಮೂಲಕ ದೊಡ್ಡ ಪೈಪ್ ಅಳವಡಿಸಿದರೆ ನೀರು ಸರಾಗವಾಗಿ ಹರಿದು ಹೋಗುತ್ತದೆ. ಆದರೆ, ಅದಕ್ಕೆ ಮನಸ್ಸು ಮಾಡದ ಕಾರಣ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ದೂರಿದರು.