<p>ಶಿರಸಿ: ಶಿರಸಿ ಕುಮಟಾ ಹೆದ್ದಾರಿ (766-ಇ)ಯು ಸಂಚಾರದ ದೃಷ್ಟಿಯಿಂದ ಪ್ರಮುಖವಾಗಿದ್ದು, ತಕ್ಷಣ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು ಎಂದು ಸರ್ಕಾರದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ಹೇಳಿದರು.</p>.<p>ಶಿರಸಿ ಕುಮಟಾ ರಸ್ತೆಯ ಬೆಣ್ಣೆಹೊಳೆ ಬಳಿ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿ ಈ ಮಾರ್ಗ ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಬುಧವಾರ ಸಂಜೆ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.</p>.<p>ಬಳಿಕ ಗುತ್ತಿಗೆದಾರ ಆರ್ ಎನ್ ಎಸ್ ಕಂಪನಿ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ‘ಮಳೆಗಾಲ ಮುಂಚಿತವಾಗಿ ಆರಂಭವಾಗುತ್ತದೆ ಎಂಬುದನ್ನು ಹವಾಮಾನ ಇಲಾಖೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಸೂಕ್ತ ಕಾರ್ಯ ಯೋಜನೆ ರೂಪಿಸಿಕೊಳ್ಳಬೇಕಿತ್ತು’ ಎಂದರು.</p>.<p>‘ಈಗ ಬದಲಿ ವ್ಯವಸ್ಥೆ ಹೇಗೆ ಎಂಬ ಬಗ್ಗೆ ಚಿಂತಿಸುವುದು ಅತ್ಯಗತ್ಯ. ಸಾಧ್ಯವಾದರೆ ತಾತ್ಕಾಲಿಕವಾಗಿ ನಿರ್ಮಿಸಿದ್ದ, ಕೊಚ್ಚಿಹೋದ ರಸ್ತೆಯನ್ನೂ ದುರಸ್ತಿ ಮಾಡಿಟ್ಟುಕೊಳ್ಳುವುದು ಉತ್ತಮ’ ಎಂದು ಸಲಹೆ ನೀಡಿದರು.</p>.<p>‘ಕೇವಲ ಬೆಣ್ಣೆಹೊಳೆ ಸೇತುವೆ ಮಾತ್ರ ಗಮನಿಸಬೇಡಿ. ಈ ಮಾರ್ಗದಲ್ಲಿ ಶಿರಸಿ ತಾಲ್ಲೂಕಿನ ಭಾಗದಲ್ಲಿ ಇನ್ನುಳಿದ ಸೇತುವೆ ನಿರ್ಮಾಣವಾಗುತ್ತಿದೆ. ಇಲ್ಲಿ ಬದಲಿ ರಸ್ತೆಯೇ ಇನ್ನೂ ಬಳಕೆಯಾಗುತ್ತಿದೆ. ಇದೂ ಕುಸಿತವಾಗುವ ಸಾಧ್ಯತೆ ಇರುವುದರಿಂದ ಈ ಬಗ್ಗೂ ಗಮನ ಹರಿಸಬೇಕು. ಸೂಕ್ತ ತಡೆಗೋಡೆ ನಿರ್ಮಿಸಿ ಕುಸಿಯದಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.</p>.<p>ಈ ವೇಳೆ ಮಾಹಿತಿ ನೀಡಿದ ಆರ್ ಎನ್ ಎಸ್ ಅಧಿಕಾರಿಗಳು, 'ಬೆಣ್ಣೆ ಹೊಳೆ ಸೇತುವೆಯ ಪಿಚಿಂಗ್ ಕಾಮಗಾರಿಯನ್ನು ತ್ವರಿತವಾಗಿ ಮಾಡುತ್ತಿದ್ದೇವೆ. ಈಗ ದ್ವಿಚಕ್ರ ವಾಹನ ದಾಟಲು ವ್ಯವಸ್ಥೆ ಮಾಡಿದ್ದೇವೆ. ಸೋಮವಾರದ ಒಳಗಡೆ ಸಣ್ಣ ವಾಹನಗಳು ದಾಟಿಸಲು ವ್ಯವಸ್ಥೆ ಮಾಡುತ್ತೇವೆ' ಎಂದು ಭರವಸೆ ನೀಡಿದರು.</p>.<p>ಉಪವಿಭಾಗಾಧಿಕಾರಿ ಕೆ.ವಿ. ಕಾವ್ಯಾರಾಣಿ, ತಹಶೀಲ್ದಾರ್ ಶಂಕರ ಗೌಡಿ, ತಾಲ್ಲೂಕು ಪಂಚಾಯಿತಿ ಇಒ ಚನ್ನಬಸಪ್ಪ ಹಾವಣಗಿ ಇದ್ದರು.</p>.<p>Highlights - ಶಿರಸಿ ಕುಮಟಾ ರಸ್ತೆಯ ಬೆಣ್ಣೆಹೊಳೆ ಬಳಿ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿರುವ ಸ್ಥಳಕ್ಕೆ ಸುಷ್ಮಾ ಗೋಡಬೋಲೆ ಆಗಮಿಸಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ಶಿರಸಿ ಕುಮಟಾ ಹೆದ್ದಾರಿ (766-ಇ)ಯು ಸಂಚಾರದ ದೃಷ್ಟಿಯಿಂದ ಪ್ರಮುಖವಾಗಿದ್ದು, ತಕ್ಷಣ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು ಎಂದು ಸರ್ಕಾರದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ಹೇಳಿದರು.</p>.<p>ಶಿರಸಿ ಕುಮಟಾ ರಸ್ತೆಯ ಬೆಣ್ಣೆಹೊಳೆ ಬಳಿ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿ ಈ ಮಾರ್ಗ ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಬುಧವಾರ ಸಂಜೆ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.</p>.<p>ಬಳಿಕ ಗುತ್ತಿಗೆದಾರ ಆರ್ ಎನ್ ಎಸ್ ಕಂಪನಿ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ‘ಮಳೆಗಾಲ ಮುಂಚಿತವಾಗಿ ಆರಂಭವಾಗುತ್ತದೆ ಎಂಬುದನ್ನು ಹವಾಮಾನ ಇಲಾಖೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಸೂಕ್ತ ಕಾರ್ಯ ಯೋಜನೆ ರೂಪಿಸಿಕೊಳ್ಳಬೇಕಿತ್ತು’ ಎಂದರು.</p>.<p>‘ಈಗ ಬದಲಿ ವ್ಯವಸ್ಥೆ ಹೇಗೆ ಎಂಬ ಬಗ್ಗೆ ಚಿಂತಿಸುವುದು ಅತ್ಯಗತ್ಯ. ಸಾಧ್ಯವಾದರೆ ತಾತ್ಕಾಲಿಕವಾಗಿ ನಿರ್ಮಿಸಿದ್ದ, ಕೊಚ್ಚಿಹೋದ ರಸ್ತೆಯನ್ನೂ ದುರಸ್ತಿ ಮಾಡಿಟ್ಟುಕೊಳ್ಳುವುದು ಉತ್ತಮ’ ಎಂದು ಸಲಹೆ ನೀಡಿದರು.</p>.<p>‘ಕೇವಲ ಬೆಣ್ಣೆಹೊಳೆ ಸೇತುವೆ ಮಾತ್ರ ಗಮನಿಸಬೇಡಿ. ಈ ಮಾರ್ಗದಲ್ಲಿ ಶಿರಸಿ ತಾಲ್ಲೂಕಿನ ಭಾಗದಲ್ಲಿ ಇನ್ನುಳಿದ ಸೇತುವೆ ನಿರ್ಮಾಣವಾಗುತ್ತಿದೆ. ಇಲ್ಲಿ ಬದಲಿ ರಸ್ತೆಯೇ ಇನ್ನೂ ಬಳಕೆಯಾಗುತ್ತಿದೆ. ಇದೂ ಕುಸಿತವಾಗುವ ಸಾಧ್ಯತೆ ಇರುವುದರಿಂದ ಈ ಬಗ್ಗೂ ಗಮನ ಹರಿಸಬೇಕು. ಸೂಕ್ತ ತಡೆಗೋಡೆ ನಿರ್ಮಿಸಿ ಕುಸಿಯದಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.</p>.<p>ಈ ವೇಳೆ ಮಾಹಿತಿ ನೀಡಿದ ಆರ್ ಎನ್ ಎಸ್ ಅಧಿಕಾರಿಗಳು, 'ಬೆಣ್ಣೆ ಹೊಳೆ ಸೇತುವೆಯ ಪಿಚಿಂಗ್ ಕಾಮಗಾರಿಯನ್ನು ತ್ವರಿತವಾಗಿ ಮಾಡುತ್ತಿದ್ದೇವೆ. ಈಗ ದ್ವಿಚಕ್ರ ವಾಹನ ದಾಟಲು ವ್ಯವಸ್ಥೆ ಮಾಡಿದ್ದೇವೆ. ಸೋಮವಾರದ ಒಳಗಡೆ ಸಣ್ಣ ವಾಹನಗಳು ದಾಟಿಸಲು ವ್ಯವಸ್ಥೆ ಮಾಡುತ್ತೇವೆ' ಎಂದು ಭರವಸೆ ನೀಡಿದರು.</p>.<p>ಉಪವಿಭಾಗಾಧಿಕಾರಿ ಕೆ.ವಿ. ಕಾವ್ಯಾರಾಣಿ, ತಹಶೀಲ್ದಾರ್ ಶಂಕರ ಗೌಡಿ, ತಾಲ್ಲೂಕು ಪಂಚಾಯಿತಿ ಇಒ ಚನ್ನಬಸಪ್ಪ ಹಾವಣಗಿ ಇದ್ದರು.</p>.<p>Highlights - ಶಿರಸಿ ಕುಮಟಾ ರಸ್ತೆಯ ಬೆಣ್ಣೆಹೊಳೆ ಬಳಿ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿರುವ ಸ್ಥಳಕ್ಕೆ ಸುಷ್ಮಾ ಗೋಡಬೋಲೆ ಆಗಮಿಸಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>