ಬೃಹತ್ ಜನಾಂದೋಲನದ ಪೂರ್ವಭಾವಿಯಾಗಿ ನಡೆಯುವ ಜಾಗೃತಿ ಕಾರ್ಯಕ್ರಮಗಳಲ್ಲಿ ನದಿ ಜೋಡಣೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಮಗ್ರ ಮಾಹಿತಿ ಒದಗಿಸಬೇಕು
ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಸ್ವರ್ಣವಲ್ಲೀ ಮಠ
ವಿವಿಧ ಕಾರ್ಯಕ್ರಮ ಆಯೋಜನೆ
ಡಿ.29ರಂದು ಸಿದ್ಧಾಪುರದಲ್ಲಿ ಎಲ್ಲ ಸಹಕಾರಿಗಳ ಸಭೆ ನಡೆಯಲಿದೆ. ಇದರ ಜತೆ ಹೆಗ್ಗರಣಿಯಲ್ಲಿ ತಯಾರಿ ಸಭೆಗಳು ನಡೆಯಲಿವೆ. ಗ್ರಾಮೀಣ ಪ್ರದೇಶದ ಮನೆ ಮನೆಗೆ ಕರಪತ್ರ ವಿತರಣೆ ಆಗಲಿದೆ. ವಿವಿಧ ಧಾರ್ಮಿಕ ಮುಖಂಡರ ಭೇಟಿ ಮಾಡಿ ಆಹ್ವಾನದ ಜತೆಗೆ ಕುಮಟಾದಲ್ಲಿ ಜ.1ರಂದು ಅಘನಾಶಿನಿ ಜಾಗೃತಿ ಸಭೆ ನಡೆಸಲಾಗುವುದು. ಅಂಕೋಲಾದ ಕಲ್ಲೇಶ್ವರದಲ್ಲಿ ಸಭೆ ನಡೆಸುವ ಜತೆ ಶಿರಸಿ ಉಪವಿಭಾಗಾಧಿಕಾರಿ ಅರಣ್ಯ ಕಚೇರಿಗೆ ಸದ್ಯದಲ್ಲೆ ಬೇಡ್ತಿ ನಿಯೋಗ ಭೇಟಿ ನೀಡಲಿದೆ ಎಂದು ಪ್ರಮುಖರು ಸಭೆಗೆ ತಿಳಿಸಿದರು. ಇದೇ ವೇಳೆ ಸಾಮಾಜಿಕ ಮಾಧ್ಯಮದ ಮೂಲಕ ಬೇಡ್ತಿ– ಅಘನಾಶಿನಿ ಜಾಗೃತಿ ಮೂಡಿಸಲು ಜವಾಬ್ದಾರಿ ನೀಡಲಾಯಿತು.