<p><strong>ಶಿರಸಿ:</strong> ಬೇಡ್ತಿ–ವರದಾ ನದಿ ಜೋಡಣೆ ವಿಷಯ ಚರ್ಚೆಯಲ್ಲಿರುವಾಗಲೇ ತಾಲ್ಲೂಕಿನ ಸಾಲಕಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳಿಬ್ಬರು ಸರ್ವೆ ಮಾಡುತ್ತಿದ್ದುದನ್ನು ಕಂಡ ಸ್ಥಳೀಯರು ತಡೆದು ಪ್ರಶ್ನಿಸಿದ್ದು, ಅಪರಿಚಿತರ ನಡೆ ಆತಂಕಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಮಣದೂರು ಗ್ರಾಮದ ದುಗ್ಗುಮನೆ, ಯಡಿಮಠ, ತಟ್ಟೀಸರ ಸೇರಿದಂತೆ ಹಲವೆಡೆ ರಸ್ತೆ, ಮರಗಳಿಗೆ ಬಣ್ಣದಿಂದ ಗುರುತು ಮಾಡಿದ್ದು, ಶನಿವಾರ ಅನುಮಾನಾಸ್ಪದವಾಗಿ ಈ ಭಾಗದ ಸರ್ವೆ ನಡೆಸುತ್ತಿರುವುದನ್ನು ಸ್ಥಳೀಯರಾದ ವೆಂಕಟ್ರಮಣ ಹೆಗಡೆ ಗಮನಿಸಿದ್ದಾರೆ. ತಕ್ಷಣ ಗ್ರಾಮಸ್ಥರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಜಮಾಯಿಸಿದ ನೂರಕ್ಕೂ ಹೆಚ್ಚು ಜನರು ಅಧಿಕಾರಿಗಳನ್ನು ಪ್ರಶ್ನಿಸಿದ್ದು, ಯಾವುದೇ ಸ್ಪಷ್ಟ ಮಾಹಿತಿ ನೀಡದ ಅಧಿಕಾರಿಗಳ ನಡೆ ಹಲವು ಅನುಮಾನಕ್ಕೆ ಕಾರಣವಾಗಿದೆ.</p>.<p>‘ಹೈದರಾಬಾದ್ ಮೂಲದ ಅಕ್ವಿಲಿಯಾ ಡ್ರಿಲ್ಲಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿ ಹೆಸರಲ್ಲಿ ಸರ್ವೆ ನಡೆಸಲು ಬಂದ ಕೇರಳ ಮತ್ತು ರಾಜಸ್ಥಾನದ ಇಬ್ಬರು ವ್ಯಕ್ತಿಗಳು ಜಿಲ್ಲಾಧಿಕಾರಿಗಳಿಂದ ಪರವಾನಗಿ ಪಡೆದಿರುವುದಾಗಿ ತಿಳಿಸಿದ್ದಾರೆ. ಒಪ್ಪಿಗೆ ಪತ್ರದಲ್ಲಿ ಜಿಲ್ಲಾಧಿಕಾರಿ ಹಸ್ತಾಕ್ಷರ ಇರಲಿಲ್ಲ. ಈ ಬಗ್ಗೆ ವಿಚಾರಿಸಿದ್ದಕ್ಕೆ ತಡವರಿಸುತ್ತ ಉತ್ತರಿಸಿದ ಅವರು ಅಲ್ಲಿಂದ ಕಾಲ್ಕಿತ್ತಿದ್ದಾರೆ’ ಎಂದು ಸ್ಥಳೀಯರು ದೂರಿದ್ದಾರೆ.</p>.<p>ಈ ಬಗ್ಗೆ ಸ್ಥಳದಲ್ಲೇ ಇದ್ದ ಸಾಲಕಣಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಸೂಯಾ ಹೆಗಡೆ, ‘ತಮಗೆ ಯಾವುದೇ ಮಾಹಿತಿ ಇಲ್ಲ. ಹೀಗೆ ಏಕಾಏಕಿ ಸರ್ವೆ ನಡೆಸುವುದು ಸರಿಯಲ್ಲ’ ಎಂದು ಸರ್ವೆಗೆ ಬಂದ ವ್ಯಕ್ತಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p>ಬೇಡ್ತಿ ಅಘನಾಶಿನಿ ಕೊಳ್ಳ ಹಿತರಕ್ಷಣಾ ಸಮಿತಿ ಸಂಚಾಲಕ ಎನ್.ಎಸ್.ಭಟ್ ಮಣದೂರು, ಅರಣ್ಯ ಸಮಿತಿ ಅಧ್ಯಕ್ಷ ಶಿವಸುತ ಹೆಗಡೆ, ಸತೀಶ ಹೆಗಡೆ, ಸುಬ್ರಾಯಾ ಹೆಗಡೆ ತಟ್ಟೀಸರ, ಸುನಿಲ ಹೆಗಡೆ, ದಿನೇಶ ಹೆಗಡೆ ದುಗ್ಗುಮನೆ, ಇತರರು ಇದ್ದರು. </p>.<div><blockquote>ಯಾವುದೇ ಮಾಹಿತಿ ಇಲ್ಲದೆ ಸರ್ವೆ ನಡೆಸುತ್ತಿರುವುದು ಸರಿಯಲ್ಲ. ಸ್ಥಳೀಯ ಆಡಳಿತದ ಗಮನಕ್ಕೂ ಬಾರದಂತೆ ಸರ್ವೆ ನಡೆಸುವುದು ಅಪರಾಧ ಎಂದು ಪರಿಗಣಿಸಿ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು </blockquote><span class="attribution">ರಮಾಕಾಂತ ಹೆಗಡೆ ಮಂಡೆಮನೆ ಬೇಡ್ತಿ ಅಘನಾಶಿನಿ ಕೊಳ್ಳ ಹಿತರಕ್ಷಣಾ ಸಮಿತಿ ಸಂಚಾಲಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಬೇಡ್ತಿ–ವರದಾ ನದಿ ಜೋಡಣೆ ವಿಷಯ ಚರ್ಚೆಯಲ್ಲಿರುವಾಗಲೇ ತಾಲ್ಲೂಕಿನ ಸಾಲಕಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳಿಬ್ಬರು ಸರ್ವೆ ಮಾಡುತ್ತಿದ್ದುದನ್ನು ಕಂಡ ಸ್ಥಳೀಯರು ತಡೆದು ಪ್ರಶ್ನಿಸಿದ್ದು, ಅಪರಿಚಿತರ ನಡೆ ಆತಂಕಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಮಣದೂರು ಗ್ರಾಮದ ದುಗ್ಗುಮನೆ, ಯಡಿಮಠ, ತಟ್ಟೀಸರ ಸೇರಿದಂತೆ ಹಲವೆಡೆ ರಸ್ತೆ, ಮರಗಳಿಗೆ ಬಣ್ಣದಿಂದ ಗುರುತು ಮಾಡಿದ್ದು, ಶನಿವಾರ ಅನುಮಾನಾಸ್ಪದವಾಗಿ ಈ ಭಾಗದ ಸರ್ವೆ ನಡೆಸುತ್ತಿರುವುದನ್ನು ಸ್ಥಳೀಯರಾದ ವೆಂಕಟ್ರಮಣ ಹೆಗಡೆ ಗಮನಿಸಿದ್ದಾರೆ. ತಕ್ಷಣ ಗ್ರಾಮಸ್ಥರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಜಮಾಯಿಸಿದ ನೂರಕ್ಕೂ ಹೆಚ್ಚು ಜನರು ಅಧಿಕಾರಿಗಳನ್ನು ಪ್ರಶ್ನಿಸಿದ್ದು, ಯಾವುದೇ ಸ್ಪಷ್ಟ ಮಾಹಿತಿ ನೀಡದ ಅಧಿಕಾರಿಗಳ ನಡೆ ಹಲವು ಅನುಮಾನಕ್ಕೆ ಕಾರಣವಾಗಿದೆ.</p>.<p>‘ಹೈದರಾಬಾದ್ ಮೂಲದ ಅಕ್ವಿಲಿಯಾ ಡ್ರಿಲ್ಲಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿ ಹೆಸರಲ್ಲಿ ಸರ್ವೆ ನಡೆಸಲು ಬಂದ ಕೇರಳ ಮತ್ತು ರಾಜಸ್ಥಾನದ ಇಬ್ಬರು ವ್ಯಕ್ತಿಗಳು ಜಿಲ್ಲಾಧಿಕಾರಿಗಳಿಂದ ಪರವಾನಗಿ ಪಡೆದಿರುವುದಾಗಿ ತಿಳಿಸಿದ್ದಾರೆ. ಒಪ್ಪಿಗೆ ಪತ್ರದಲ್ಲಿ ಜಿಲ್ಲಾಧಿಕಾರಿ ಹಸ್ತಾಕ್ಷರ ಇರಲಿಲ್ಲ. ಈ ಬಗ್ಗೆ ವಿಚಾರಿಸಿದ್ದಕ್ಕೆ ತಡವರಿಸುತ್ತ ಉತ್ತರಿಸಿದ ಅವರು ಅಲ್ಲಿಂದ ಕಾಲ್ಕಿತ್ತಿದ್ದಾರೆ’ ಎಂದು ಸ್ಥಳೀಯರು ದೂರಿದ್ದಾರೆ.</p>.<p>ಈ ಬಗ್ಗೆ ಸ್ಥಳದಲ್ಲೇ ಇದ್ದ ಸಾಲಕಣಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಸೂಯಾ ಹೆಗಡೆ, ‘ತಮಗೆ ಯಾವುದೇ ಮಾಹಿತಿ ಇಲ್ಲ. ಹೀಗೆ ಏಕಾಏಕಿ ಸರ್ವೆ ನಡೆಸುವುದು ಸರಿಯಲ್ಲ’ ಎಂದು ಸರ್ವೆಗೆ ಬಂದ ವ್ಯಕ್ತಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p>ಬೇಡ್ತಿ ಅಘನಾಶಿನಿ ಕೊಳ್ಳ ಹಿತರಕ್ಷಣಾ ಸಮಿತಿ ಸಂಚಾಲಕ ಎನ್.ಎಸ್.ಭಟ್ ಮಣದೂರು, ಅರಣ್ಯ ಸಮಿತಿ ಅಧ್ಯಕ್ಷ ಶಿವಸುತ ಹೆಗಡೆ, ಸತೀಶ ಹೆಗಡೆ, ಸುಬ್ರಾಯಾ ಹೆಗಡೆ ತಟ್ಟೀಸರ, ಸುನಿಲ ಹೆಗಡೆ, ದಿನೇಶ ಹೆಗಡೆ ದುಗ್ಗುಮನೆ, ಇತರರು ಇದ್ದರು. </p>.<div><blockquote>ಯಾವುದೇ ಮಾಹಿತಿ ಇಲ್ಲದೆ ಸರ್ವೆ ನಡೆಸುತ್ತಿರುವುದು ಸರಿಯಲ್ಲ. ಸ್ಥಳೀಯ ಆಡಳಿತದ ಗಮನಕ್ಕೂ ಬಾರದಂತೆ ಸರ್ವೆ ನಡೆಸುವುದು ಅಪರಾಧ ಎಂದು ಪರಿಗಣಿಸಿ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು </blockquote><span class="attribution">ರಮಾಕಾಂತ ಹೆಗಡೆ ಮಂಡೆಮನೆ ಬೇಡ್ತಿ ಅಘನಾಶಿನಿ ಕೊಳ್ಳ ಹಿತರಕ್ಷಣಾ ಸಮಿತಿ ಸಂಚಾಲಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>