‘ಸಂತೆಗುಳಿ ಮುಖ್ಯ ಪ್ರದೇಶದಲ್ಲಿ ಅಬ್ದುಲ್ ಶುಕುರ್ ಸಾಬ್ ಮತ್ತು ಅಲಿ ಸಾಬ್ ಎನ್ನುವವರು ಲೋಕೋಪಯೋಗಿ ಇಲಾಖೆ ಜಾಗದಲ್ಲಿ ಅಂಗಡಿ ಕಟ್ಟಿಕೊಂಡು ವ್ಯಾಪಾರ ನಡೆಸುತ್ತ ಬಂದಿದ್ದರು. ಅಂಗಡಿ ತೆರವಿಗೆ ನೋಟಿಸ್ ನೀಡಿದ್ದರೂ ಸ್ಪಂದಿಸದ ಕಾರಣ ಸಹಾಯಕ ಎಂಜಿನಿಯರ್ ಸೋಮನಾಥ ಭಂಡಾರಿ ಹಾಗೂ ಸಿಬ್ಬಂದಿ ಕಟ್ಟಡ ತೆರವಿಗೆ ಮುಂದಾದಾಗ ಆರೋಪಿಗಳು ಸೋಮನಾಥ ಅವರ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.