<p><strong>ಕಾರವಾರ</strong>: ಕಾರ್ಮಿಕ ಇಲಾಖೆಯಿಂದ ಜನರಿಗೆ ದೊರೆಯುವ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸಲು ಕೈಗಾ ರೋಲರ್ ಸ್ಕೇಟಿಂಗ್ ಕ್ಲಬ್ ಆಯೋಜಿಸಿರುವ ರೋಲರ್ ಸ್ಕೇಟಿಂಗ್ ಯಾತ್ರೆಗೆ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ದೊರೆಯಿತು.</p>.<p>ಜಿಲ್ಲಾ ಪಂಚಾಯ್ತಿ ಸಿಇಒ ಎಂ.ಪ್ರಿಯಾಂಗಾ ಯಾತ್ರೆಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ‘ಸದುದ್ದೇಶದಿಂದ ಕೈಗೊಂಡಿರುವ ಯಾತ್ರೆ ಯಶಸ್ವಿಯಾಗಲಿ. ಜಾಗೃತಿ ಜೊತೆಗೆ ಮಕ್ಕಳಿಗೂ ಹೊಸತನದ ಅನುಭವ ದೊರೆಯುತ್ತಿದೆ’ ಎಂದರು.</p>.<p>ಉತ್ತರ ಕನ್ನಡದ 25 ಮಂದಿ ಸೇರಿದಂತೆ ಒಟ್ಟೂ 40 ಪಟುಗಳು ಕಾರವಾರದಿಂದ ಬೆಂಗಳೂರಿನವರೆಗೆ 610 ಕಿ.ಮೀ. ದೂರವನ್ನು ಸ್ಕೇಟಿಂಗ್ ಮಾಡುತ್ತ 6 ದಿನಗಳಲ್ಲಿ ಕ್ರಮಿಸಲಿದ್ದಾರೆ. ಕಾರ್ಮಿಕ ಇಲಾಖೆಯಿಂದ ಜನರಿಗೆ ಸಿಗುವ ಸೌಲಭ್ಯಗಳ ಕುರಿತ ಮಾಹಿತಿ ಫಲಕಗಳನ್ನು ಹಿಡಿದು ನಗರದಲ್ಲಿಯೂ ಸ್ಕೇಟಿಂಗ್ ಮಾಡುತ್ತ ಮಕ್ಕಳು ಸಾಗಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ, ಜಿಲ್ಲಾ ಕಾರ್ಮಿಕ ಅಧಿಕಾರಿ ಅಕ್ಬರ್ ಮುಲ್ಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಕಾರ್ಮಿಕ ಇಲಾಖೆಯಿಂದ ಜನರಿಗೆ ದೊರೆಯುವ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸಲು ಕೈಗಾ ರೋಲರ್ ಸ್ಕೇಟಿಂಗ್ ಕ್ಲಬ್ ಆಯೋಜಿಸಿರುವ ರೋಲರ್ ಸ್ಕೇಟಿಂಗ್ ಯಾತ್ರೆಗೆ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ದೊರೆಯಿತು.</p>.<p>ಜಿಲ್ಲಾ ಪಂಚಾಯ್ತಿ ಸಿಇಒ ಎಂ.ಪ್ರಿಯಾಂಗಾ ಯಾತ್ರೆಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ‘ಸದುದ್ದೇಶದಿಂದ ಕೈಗೊಂಡಿರುವ ಯಾತ್ರೆ ಯಶಸ್ವಿಯಾಗಲಿ. ಜಾಗೃತಿ ಜೊತೆಗೆ ಮಕ್ಕಳಿಗೂ ಹೊಸತನದ ಅನುಭವ ದೊರೆಯುತ್ತಿದೆ’ ಎಂದರು.</p>.<p>ಉತ್ತರ ಕನ್ನಡದ 25 ಮಂದಿ ಸೇರಿದಂತೆ ಒಟ್ಟೂ 40 ಪಟುಗಳು ಕಾರವಾರದಿಂದ ಬೆಂಗಳೂರಿನವರೆಗೆ 610 ಕಿ.ಮೀ. ದೂರವನ್ನು ಸ್ಕೇಟಿಂಗ್ ಮಾಡುತ್ತ 6 ದಿನಗಳಲ್ಲಿ ಕ್ರಮಿಸಲಿದ್ದಾರೆ. ಕಾರ್ಮಿಕ ಇಲಾಖೆಯಿಂದ ಜನರಿಗೆ ಸಿಗುವ ಸೌಲಭ್ಯಗಳ ಕುರಿತ ಮಾಹಿತಿ ಫಲಕಗಳನ್ನು ಹಿಡಿದು ನಗರದಲ್ಲಿಯೂ ಸ್ಕೇಟಿಂಗ್ ಮಾಡುತ್ತ ಮಕ್ಕಳು ಸಾಗಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ, ಜಿಲ್ಲಾ ಕಾರ್ಮಿಕ ಅಧಿಕಾರಿ ಅಕ್ಬರ್ ಮುಲ್ಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>