<p><strong>ಕಾರವಾರ:</strong> ಅಂಕೋಲಾ ತಾಲ್ಲೂಕಿನ ರಾಮನಗುಳಿ ಸಮೀಪ ರಾಷ್ಟ್ರೀಯ ಹೆದ್ದಾರಿ-63 ಪಕ್ಕದ ನಿರ್ಜನ ಸ್ಥಳದಲ್ಲಿ ನಿಲ್ಲಿಸಿಟ್ಟಿದ್ದ ಕಾರಿನಲ್ಲಿ ₹1.14 ಕೋಟಿ ನಗದು ಪತ್ತೆಯಾಗಿದೆ.</p><p>ವಾರಸುದಾರರಿಲ್ಲದೆ ನಿಂತಿದ್ದ ಕಾರಿನ ಬಗ್ಗೆ ಸ್ಥಳೀಯರ ಮಾಹಿತಿ ಆಧರಿಸಿ ಪೊಲೀಸರು ಪರಿಶೀಲನೆ ನಡೆಸಿದ್ದರು. ಈ ವೇಳೆ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ.</p><p>'ಹೆದ್ದಾರಿ ಪಕ್ಕದ ಕಾಡಂಚಿನಲ್ಲಿ ಮಂಗಳವಾರ ನಸುಕಿನ ಜಾವದಿಂದಲೂ ಕಾರು ನಿಂತಿತ್ತು. ಕಾರಿನ ನೋಂದಣಿ ಸಂಖ್ಯೆ ನಕಲಿಯಾಗಿದೆ. ಬೇರೊಂದು ಕಾರಿನ ನಂಬರ್ ಪ್ಲೇಟ್ ಅಳವಡಿಸಿಕೊಂಡು ಬರಲಾಗಿದೆ. ಕಾರಿನಲ್ಲಿ ₹1,14,99,500 ನಗದು ಕಾರಿನಲ್ಲಿದ್ದು, ಅದನ್ನು ವಶಕ್ಕೆ ಪಡೆಯಲಾಗಿದೆ' ಎಂದು ಅಂಕೋಲಾ ಠಾಣೆ ಪೊಲೀಸರು ತಿಳಿಸಿದ್ದಾರೆ.</p><p>'ಕಾರಿನ ಕಿಟಕಿ ಗಾಜುಗಳು ಒಡೆದಿದ್ದವು. ಚಾಲಕನ ಸೀಟಿನ ಅಡಿಯಲ್ಲಿ ಕಬ್ಬಿಣದ ಪೆಟ್ಟಿಗೆಯಲ್ಲಿ ಹಣ ಇರಿಸಲಾಗಿತ್ತು. ಹವಾಲಾ ದಂಧೆಯಲ್ಲಿ ತೊಡಗಿದವರು ಹಣ ಸಾಗಿಸುತ್ತಿರುವ ಶಂಕೆ ಇದೆ. ತನಿಖೆ ನಡೆಸಲಾಗುತ್ತಿದೆ' ಎಂದೂ ತಿಳಿಸಿದ್ದಾರೆ.</p>.ಮಂಗಳೂರು | ₹14 ಕೋಟಿ ಮೌಲ್ಯದ ಚಿನ್ನಾಭರಣ, ನಗದು ದರೋಡೆ ಪ್ರಕರಣ: ಮೂವರ ಬಂಧನ.ಅಫಜಲಪುರ ದೇವಾಲಯ ಹುಂಡಿ ಎಣಿಕೆ: ₹70 ಲಕ್ಷ ನಗದು, 200 ಗ್ರಾಂ ಚಿನ್ನಾಭರಣ ಸಂಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಅಂಕೋಲಾ ತಾಲ್ಲೂಕಿನ ರಾಮನಗುಳಿ ಸಮೀಪ ರಾಷ್ಟ್ರೀಯ ಹೆದ್ದಾರಿ-63 ಪಕ್ಕದ ನಿರ್ಜನ ಸ್ಥಳದಲ್ಲಿ ನಿಲ್ಲಿಸಿಟ್ಟಿದ್ದ ಕಾರಿನಲ್ಲಿ ₹1.14 ಕೋಟಿ ನಗದು ಪತ್ತೆಯಾಗಿದೆ.</p><p>ವಾರಸುದಾರರಿಲ್ಲದೆ ನಿಂತಿದ್ದ ಕಾರಿನ ಬಗ್ಗೆ ಸ್ಥಳೀಯರ ಮಾಹಿತಿ ಆಧರಿಸಿ ಪೊಲೀಸರು ಪರಿಶೀಲನೆ ನಡೆಸಿದ್ದರು. ಈ ವೇಳೆ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ.</p><p>'ಹೆದ್ದಾರಿ ಪಕ್ಕದ ಕಾಡಂಚಿನಲ್ಲಿ ಮಂಗಳವಾರ ನಸುಕಿನ ಜಾವದಿಂದಲೂ ಕಾರು ನಿಂತಿತ್ತು. ಕಾರಿನ ನೋಂದಣಿ ಸಂಖ್ಯೆ ನಕಲಿಯಾಗಿದೆ. ಬೇರೊಂದು ಕಾರಿನ ನಂಬರ್ ಪ್ಲೇಟ್ ಅಳವಡಿಸಿಕೊಂಡು ಬರಲಾಗಿದೆ. ಕಾರಿನಲ್ಲಿ ₹1,14,99,500 ನಗದು ಕಾರಿನಲ್ಲಿದ್ದು, ಅದನ್ನು ವಶಕ್ಕೆ ಪಡೆಯಲಾಗಿದೆ' ಎಂದು ಅಂಕೋಲಾ ಠಾಣೆ ಪೊಲೀಸರು ತಿಳಿಸಿದ್ದಾರೆ.</p><p>'ಕಾರಿನ ಕಿಟಕಿ ಗಾಜುಗಳು ಒಡೆದಿದ್ದವು. ಚಾಲಕನ ಸೀಟಿನ ಅಡಿಯಲ್ಲಿ ಕಬ್ಬಿಣದ ಪೆಟ್ಟಿಗೆಯಲ್ಲಿ ಹಣ ಇರಿಸಲಾಗಿತ್ತು. ಹವಾಲಾ ದಂಧೆಯಲ್ಲಿ ತೊಡಗಿದವರು ಹಣ ಸಾಗಿಸುತ್ತಿರುವ ಶಂಕೆ ಇದೆ. ತನಿಖೆ ನಡೆಸಲಾಗುತ್ತಿದೆ' ಎಂದೂ ತಿಳಿಸಿದ್ದಾರೆ.</p>.ಮಂಗಳೂರು | ₹14 ಕೋಟಿ ಮೌಲ್ಯದ ಚಿನ್ನಾಭರಣ, ನಗದು ದರೋಡೆ ಪ್ರಕರಣ: ಮೂವರ ಬಂಧನ.ಅಫಜಲಪುರ ದೇವಾಲಯ ಹುಂಡಿ ಎಣಿಕೆ: ₹70 ಲಕ್ಷ ನಗದು, 200 ಗ್ರಾಂ ಚಿನ್ನಾಭರಣ ಸಂಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>