<p><strong>ಕಾರವಾರ:</strong> ‘ಸರ್ಕಾರ ರೂಪಿಸಿರುವ ಆರ್ಥಿಕ ಯೋಜನೆಗಳು ಗ್ರಾಮೀಣ ಜನರ ಜೀವನಮಟ್ಟ ಸುಧಾರಣೆಗೆ, ಸಂಕಷ್ಟ ಕಾಲದಲ್ಲಿ ನೆರವಿಗೆ ಅನುಕೂಲವಾಗಿವೆ. ಅವುಗಳ ಸದುಪಯೋಗ ಪಡೆದುಕೊಳ್ಳಲು ಜನರು ಯೋಜನೆಗಳ ಅರಿವು ಹೊಂದಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಸಾಸಿ ಹೇಳಿದರು.</p>.<p>ತಾಲ್ಲೂಕಿನ ಅಸ್ನೋಟಿಯ ಶಿವಾಜಿ ವಿದ್ಯಾಮಂದಿರದ ಸಭಾಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆರ್ಥಿಕ ಸೇರ್ಪಡೆ ಯೋಜನೆಗಳ ಪೂರ್ಣಗೊಳಿಸುವಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಅವರು ಮಾತನಾಡಿದರು.</p>.<p>‘ಬ್ಯಾಂಕ್ಗಳ ಮೂಲಕ ವಹಿವಾಟು ನಡೆಸುವುದನ್ನು ರೂಢಿಸಿಕೊಳ್ಳಬೇಕು. ಬ್ಯಾಂಕ್ಗಳು ಜನಸ್ನೇಹಿ ನೀತಿಗಳನ್ನು ಹೆಚ್ಚು ರೂಪಿಸಿಕೊಳ್ಳಬೇಕು. ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು’ ಎಂದರು.</p>.<p>ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಜಿಲ್ಲಾ ವ್ಯವಸ್ಥಾಪಕ ಪ್ರದೀಪ ಥಾಮಸ್ ಬ್ಯಾಂಕ್ನಲ್ಲಿ ಸಿಗುವ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಜಪ್ಪ ಗೌಳಿ, ‘ವಾರ್ಷಿಕ ಕೇವಲ ₹20 ಪಾವತಿಸಿ ಪ್ರಧಾನ ಮಂತ್ರಿ ಸುರಕ್ಷೆ ವಿಮೆ ಯೋಜನೆ, ₹436ಕ್ಕೆ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮೆ ಯೋಜನೆ ಪಡೆಯಲು ಅವಕಾಶವಿದೆ. ಅಟಲ್ ಪಿಂಚಣಿ ಯೋಜನೆ ಮಾಡಿಸಿಕೊಳ್ಳಬಹುದು’ ಎಂದರು.</p>.<p>ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿದ್ಯೇಶ್ವರಿ ನಾಯ್ಕ, ಗಿರೀಶ ದೇಸಾಯಿ, ಇತರರು ಪಾಲ್ಗೊಂಡಿದ್ದರು. ಶಿವಾಜಿ ವಿದ್ಯಾಮಂದಿರದ ಮುಖ್ಯ ಶಿಕ್ಷಕ ಗಣೇಶ ಬಿಷ್ಟಣ್ಣನವರ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ‘ಸರ್ಕಾರ ರೂಪಿಸಿರುವ ಆರ್ಥಿಕ ಯೋಜನೆಗಳು ಗ್ರಾಮೀಣ ಜನರ ಜೀವನಮಟ್ಟ ಸುಧಾರಣೆಗೆ, ಸಂಕಷ್ಟ ಕಾಲದಲ್ಲಿ ನೆರವಿಗೆ ಅನುಕೂಲವಾಗಿವೆ. ಅವುಗಳ ಸದುಪಯೋಗ ಪಡೆದುಕೊಳ್ಳಲು ಜನರು ಯೋಜನೆಗಳ ಅರಿವು ಹೊಂದಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಸಾಸಿ ಹೇಳಿದರು.</p>.<p>ತಾಲ್ಲೂಕಿನ ಅಸ್ನೋಟಿಯ ಶಿವಾಜಿ ವಿದ್ಯಾಮಂದಿರದ ಸಭಾಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆರ್ಥಿಕ ಸೇರ್ಪಡೆ ಯೋಜನೆಗಳ ಪೂರ್ಣಗೊಳಿಸುವಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಅವರು ಮಾತನಾಡಿದರು.</p>.<p>‘ಬ್ಯಾಂಕ್ಗಳ ಮೂಲಕ ವಹಿವಾಟು ನಡೆಸುವುದನ್ನು ರೂಢಿಸಿಕೊಳ್ಳಬೇಕು. ಬ್ಯಾಂಕ್ಗಳು ಜನಸ್ನೇಹಿ ನೀತಿಗಳನ್ನು ಹೆಚ್ಚು ರೂಪಿಸಿಕೊಳ್ಳಬೇಕು. ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು’ ಎಂದರು.</p>.<p>ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಜಿಲ್ಲಾ ವ್ಯವಸ್ಥಾಪಕ ಪ್ರದೀಪ ಥಾಮಸ್ ಬ್ಯಾಂಕ್ನಲ್ಲಿ ಸಿಗುವ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಜಪ್ಪ ಗೌಳಿ, ‘ವಾರ್ಷಿಕ ಕೇವಲ ₹20 ಪಾವತಿಸಿ ಪ್ರಧಾನ ಮಂತ್ರಿ ಸುರಕ್ಷೆ ವಿಮೆ ಯೋಜನೆ, ₹436ಕ್ಕೆ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮೆ ಯೋಜನೆ ಪಡೆಯಲು ಅವಕಾಶವಿದೆ. ಅಟಲ್ ಪಿಂಚಣಿ ಯೋಜನೆ ಮಾಡಿಸಿಕೊಳ್ಳಬಹುದು’ ಎಂದರು.</p>.<p>ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿದ್ಯೇಶ್ವರಿ ನಾಯ್ಕ, ಗಿರೀಶ ದೇಸಾಯಿ, ಇತರರು ಪಾಲ್ಗೊಂಡಿದ್ದರು. ಶಿವಾಜಿ ವಿದ್ಯಾಮಂದಿರದ ಮುಖ್ಯ ಶಿಕ್ಷಕ ಗಣೇಶ ಬಿಷ್ಟಣ್ಣನವರ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>