<p><strong>ಮುಂಡಗೋಡ (ಉತ್ತರ ಕನ್ನಡ)</strong>: ‘ಟಿಬೆಟಿಯನ್ ಧಾರ್ಮಿಕ ನಾಯಕ ದಲೈಲಾಮಾ ಅವರ ಈ ಭಾಗದಲ್ಲಿನ ಓಡಾಟ ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತದೆ’ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು.</p>.<p>ತಾಲ್ಲೂಕಿನ ಟಿಬೆಟಿಯನ್ ಕ್ಯಾಂಪ್ ನಂ.6ರ ಡ್ರೆಪುಂಗ್ ಗೋಮಾಂಗ್ ಬೌದ್ಧಮಂದಿರದಲ್ಲಿ ಗುರುವಾರ ದಲೈಲಾಮಾ ಅವರನ್ನು ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಮುಖ್ಯಮಂತ್ರಿ ಬದಲಾವಣೆ ವಿಷಯ ಚರ್ಚೆ ಮಾಡುವುದು ಸರಿಯಲ್ಲ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಪಕ್ಷಕ್ಕಾಗಿ ದುಡಿದಿದ್ದಾರೆ. ಪಕ್ಷ ಬೆಳವಣಿಗೆಯಲ್ಲಿ ಅವರ ಸಹಕಾರವಿದೆ. ಅವರಿಗೂ ಉಜ್ವಲವಾದ ಭವಿಷ್ಯವಿದೆ. ಸ್ವಲ್ಪ ಕಾಯಬೇಕು ಅಷ್ಟೆ’ ಎಂದರು.</p>.<p>‘ಸಿಎಂ., ಡಿಸಿಎಂ., ನಡುವೆ ಅಧಿಕಾರ ಹಂಚಿಕೆಯ ಸಂಬಂಧ ಒಪ್ಪಂದದ ಬಗ್ಗೆ ನಾನೇನೂ ಹೇಳಲು ಆಗುವುದಿಲ್ಲ. ಸಚಿವ ಸಂಪುಟದ ಪುನರ್ ರಚನೆಗೆ ಯೋಗ, ಸಮಯ ಕೂಡಿಬರಬೇಕು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡಗೋಡ (ಉತ್ತರ ಕನ್ನಡ)</strong>: ‘ಟಿಬೆಟಿಯನ್ ಧಾರ್ಮಿಕ ನಾಯಕ ದಲೈಲಾಮಾ ಅವರ ಈ ಭಾಗದಲ್ಲಿನ ಓಡಾಟ ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತದೆ’ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು.</p>.<p>ತಾಲ್ಲೂಕಿನ ಟಿಬೆಟಿಯನ್ ಕ್ಯಾಂಪ್ ನಂ.6ರ ಡ್ರೆಪುಂಗ್ ಗೋಮಾಂಗ್ ಬೌದ್ಧಮಂದಿರದಲ್ಲಿ ಗುರುವಾರ ದಲೈಲಾಮಾ ಅವರನ್ನು ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಮುಖ್ಯಮಂತ್ರಿ ಬದಲಾವಣೆ ವಿಷಯ ಚರ್ಚೆ ಮಾಡುವುದು ಸರಿಯಲ್ಲ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಪಕ್ಷಕ್ಕಾಗಿ ದುಡಿದಿದ್ದಾರೆ. ಪಕ್ಷ ಬೆಳವಣಿಗೆಯಲ್ಲಿ ಅವರ ಸಹಕಾರವಿದೆ. ಅವರಿಗೂ ಉಜ್ವಲವಾದ ಭವಿಷ್ಯವಿದೆ. ಸ್ವಲ್ಪ ಕಾಯಬೇಕು ಅಷ್ಟೆ’ ಎಂದರು.</p>.<p>‘ಸಿಎಂ., ಡಿಸಿಎಂ., ನಡುವೆ ಅಧಿಕಾರ ಹಂಚಿಕೆಯ ಸಂಬಂಧ ಒಪ್ಪಂದದ ಬಗ್ಗೆ ನಾನೇನೂ ಹೇಳಲು ಆಗುವುದಿಲ್ಲ. ಸಚಿವ ಸಂಪುಟದ ಪುನರ್ ರಚನೆಗೆ ಯೋಗ, ಸಮಯ ಕೂಡಿಬರಬೇಕು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>