ಕಾರ್ಯಾಚರಣೆಯ ಭಾಗವಾಗಿ ಪೊಲೀಸರು ಕಾಳಿ ನದಿ ಸೇತುವೆಯ ಬಳಿ, ಬೈತಖೋಲ್ ಬಂದರಿಗೆ ಹೋಗುವ ದಾರಿಯಲ್ಲಿ, ರೈಲು ನಿಲ್ದಾಣ, ಕಡಲತೀರಗಳು, ಚರ್ಚ್, ಮಸೀದಿ, ದೇವಸ್ಥಾನಗಳಲ್ಲಿ ಹಾಗೂ ನಗರದ ವಿವಿಧ ಕಡೆಗಳಲ್ಲಿ ತಪಾಸಣೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿ ವಾಹನಗಳನ್ನು ಪರಿಶೀಲನೆ ಮಾಡಿದರು.