<p><strong>ಕಾರವಾರ</strong>: ‘ಸಂತ ಸೇವಾಲಾಲ ಅವರು ಬಂಜಾರ ಸಮುದಾಯಕ್ಕೆ ಸ್ವಾಭಿಮಾನದ ಬದುಕು ಮತ್ತು ಸಾಮಾಜಿಕ ಸಮಾನತೆಯನ್ನು ಕಲಿಸಿದ ಮಹಾನ್ ಸಂತ’ ಎಂದು ಶಾಸಕ ಸತೀಶ ಸೈಲ್ ಹೇಳಿದರು.</p>.<p>ತಾಲ್ಲೂಕಿನ ಬಿಣಗಾದ ಸೀತಾ ನಗರದಲ್ಲಿ ಭಾನುವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳೀಯ ಮಹಾನಾಯಕ ತಾಂಡ ಜಂಟಿಯಾಗಿ ಹಮ್ಮಿಕೊಂಡಿದ್ದ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಒಂದು ಕಾಲದಲ್ಲಿ ಶಿಕ್ಷಣ, ಸಾಮಾಜಿಕ ಸೌಕರ್ಯಗಳಿಂದ ವಂಚಿತವಾಗಿದ್ದ ಸಮುದಾಯವನ್ನು ಪ್ರೇರೇಪಿಸಿ ಒಗ್ಗೂಡುವಂತೆ ಮಾಡುವ ಜೊತೆಗೆ ಸಮಾಜದಲ್ಲಿ ಸೂಕ್ತ ಸ್ಥಾನಮಾನ ಸಿಗುವಲ್ಲಿ ಸೇವಾಲಾಲ ಅವರ ಪಾತ್ರ ಮಹತ್ವದ್ದಾಗಿದೆ’ ಎಂದರು.</p>.<p>‘ಸಂತ ಸೇವಲಾಲ ಕೇವಲ ಆಧ್ಯಾತ್ಮಿಕ ಕ್ಷೇತ್ರಕ್ಕೆ ಸೀಮಿತರಾಗದೆ ಸಮಾಜ ಸುಧಾರಣೆಗೂ ತಮ್ಮದೇ ಕೊಡುಗೆ ನೀಡಿದ್ದಾರೆ. ಸತ್ಯ, ಅಹಿಂಸೆ, ಬ್ರಹ್ಮಚರ್ಯ ಮತ್ತು ವ್ಯಸನ ಮುಕ್ತ ಜೀವನವನ್ನು ಬೋಧಿಸಿ ಶಿಕ್ಷಣದೇ ಜೀವನಕ್ಕೆ ದಾರಿದೀಪ ಎಂದು ಸಾಬೀತುಪಡಿಸಿದ್ದರು’ ಎಂದರು.</p>.<p>ಸಂತ ಸೇವಲಾಲ ಕುರಿತು ಅನಿಲ ಪವಾರ ಉಪನ್ಯಾಸ ನೀಡಿದರು. ಸಭಾ ಕಾರ್ಯಕ್ರಮಕ್ಕೆ ಮುನ್ನ ಬಂಜಾರ ಸಮುದಾಯದವರಿಂದ ಅದ್ದೂರಿ ಮೆರವಣಿಗೆ ನಡೆಯಿತು.</p>.<p>ತಹಶೀಲ್ದಾರ ನಿಶ್ಚಲ್ ನೊರೋನ್ಹಾ, ಚುನಾವಣೆ ಶಾಖೆಯ ತಹಶೀಲ್ದಾರ ಪ್ರಮೋದ ನಾಯ್ಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ, ಬಂಜಾರ ಸಂಘದ ಅಧ್ಯಕ್ಷ ಸತೀಶ್ ನಾಯ್ಕ, ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ, ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ಸಂತ ಸೇವಾಲಾಲ ಅವರು ಬಂಜಾರ ಸಮುದಾಯಕ್ಕೆ ಸ್ವಾಭಿಮಾನದ ಬದುಕು ಮತ್ತು ಸಾಮಾಜಿಕ ಸಮಾನತೆಯನ್ನು ಕಲಿಸಿದ ಮಹಾನ್ ಸಂತ’ ಎಂದು ಶಾಸಕ ಸತೀಶ ಸೈಲ್ ಹೇಳಿದರು.</p>.<p>ತಾಲ್ಲೂಕಿನ ಬಿಣಗಾದ ಸೀತಾ ನಗರದಲ್ಲಿ ಭಾನುವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳೀಯ ಮಹಾನಾಯಕ ತಾಂಡ ಜಂಟಿಯಾಗಿ ಹಮ್ಮಿಕೊಂಡಿದ್ದ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಒಂದು ಕಾಲದಲ್ಲಿ ಶಿಕ್ಷಣ, ಸಾಮಾಜಿಕ ಸೌಕರ್ಯಗಳಿಂದ ವಂಚಿತವಾಗಿದ್ದ ಸಮುದಾಯವನ್ನು ಪ್ರೇರೇಪಿಸಿ ಒಗ್ಗೂಡುವಂತೆ ಮಾಡುವ ಜೊತೆಗೆ ಸಮಾಜದಲ್ಲಿ ಸೂಕ್ತ ಸ್ಥಾನಮಾನ ಸಿಗುವಲ್ಲಿ ಸೇವಾಲಾಲ ಅವರ ಪಾತ್ರ ಮಹತ್ವದ್ದಾಗಿದೆ’ ಎಂದರು.</p>.<p>‘ಸಂತ ಸೇವಲಾಲ ಕೇವಲ ಆಧ್ಯಾತ್ಮಿಕ ಕ್ಷೇತ್ರಕ್ಕೆ ಸೀಮಿತರಾಗದೆ ಸಮಾಜ ಸುಧಾರಣೆಗೂ ತಮ್ಮದೇ ಕೊಡುಗೆ ನೀಡಿದ್ದಾರೆ. ಸತ್ಯ, ಅಹಿಂಸೆ, ಬ್ರಹ್ಮಚರ್ಯ ಮತ್ತು ವ್ಯಸನ ಮುಕ್ತ ಜೀವನವನ್ನು ಬೋಧಿಸಿ ಶಿಕ್ಷಣದೇ ಜೀವನಕ್ಕೆ ದಾರಿದೀಪ ಎಂದು ಸಾಬೀತುಪಡಿಸಿದ್ದರು’ ಎಂದರು.</p>.<p>ಸಂತ ಸೇವಲಾಲ ಕುರಿತು ಅನಿಲ ಪವಾರ ಉಪನ್ಯಾಸ ನೀಡಿದರು. ಸಭಾ ಕಾರ್ಯಕ್ರಮಕ್ಕೆ ಮುನ್ನ ಬಂಜಾರ ಸಮುದಾಯದವರಿಂದ ಅದ್ದೂರಿ ಮೆರವಣಿಗೆ ನಡೆಯಿತು.</p>.<p>ತಹಶೀಲ್ದಾರ ನಿಶ್ಚಲ್ ನೊರೋನ್ಹಾ, ಚುನಾವಣೆ ಶಾಖೆಯ ತಹಶೀಲ್ದಾರ ಪ್ರಮೋದ ನಾಯ್ಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ, ಬಂಜಾರ ಸಂಘದ ಅಧ್ಯಕ್ಷ ಸತೀಶ್ ನಾಯ್ಕ, ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ, ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>