‘ಯಕ್ಷಗಾನದ ಪ್ರಸಿದ್ಧ ಕಲಾವಿದ ಕಲಗದ್ದೆ ನಾಟ್ಯಗಣಪತಿ ದೇವಸ್ಥಾನದ ವಿಶ್ವಸ್ಥ ವಿನಾಯಕ ಹೆಗಡೆ ಕಲಗದ್ದೆ ಅವರಿಗೆ ‘ರಂಗ ಮಹಾಬಲ’ ಬಿರುದು ನೀಡಿ ಗೌರವಿಸಲಾಗುವುದು. ವಿಶೇಷ ಅತಿಥಿಗಳಾಗಿ ಲಂಡನ್ ಭಾರತೀಯ ವಿದ್ಯಾಭವನದ ನಿರ್ದೇಶಕ ಮತ್ತೂರು ನಂದಕುಮಾರ, ಶಿಕ್ಷಣ ತಜ್ಞ ಬೆಂಗಳೂರಿನ ಹೆಬ್ರಾನ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಪ್ರೀನಂದ್ ಪ್ರೇಮಚಂದ್ರನ್ ಪಾಲ್ಗೊಳ್ಳಲಿದ್ದು, ಶಂಕರಮಠದ ಧರ್ಮಾಧಿಕಾರಿ ದೊಡ್ಮನೆ ವಿಜಯ ಹೆಗಡೆ ಅಧ್ಯಕ್ಷತೆ ವಹಿಸುವರು’ ಎಂದು ಹೇಳಿದರು.