<p><strong>ಕಾರವಾರ</strong>: ‘ಪರೇಶ ಮೇಸ್ತ ಸಾವು ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರನೇ ಆರೋಪಿ ಎಂದು ಬಿ.ಜೆ.ಪಿ ವಕ್ತಾರ ನಾಗರಾಜ ನಾಯಕ ಹೇಳಿರುವುದು ಹಾಸ್ಯಾಸ್ಪದ. ಅವರು ಮಾಡಿರುವ ಆರೋಪಕ್ಕೆ ಯಾವುದೇ ಬೆಲೆಯಿಲ್ಲ’ ಎಂದು ಮಾಜಿ ಶಾಸಕ ಸತೀಶ ಸೈಲ್ ಹೇಳಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೊದಲ ಇಬ್ಬರು ಆರೋಪಿಗಳು ಯಾರು ಎಂಬುದನ್ನು ಅವರು ಸ್ಪಷ್ಟಪಡಿಸಲಿ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಪರೇಶನ ಸಾವು ಪ್ರಕರಣದ ತನಿಖೆಯನ್ನು ಸಿ.ಬಿ.ಐಗೆ ಹಸ್ತಾಂತರಿಸಿದರು’ ಎಂದರು.</p>.<p>‘ಮಣಿಪಾಲದ ಆಸ್ಪತ್ರೆಯಲ್ಲಿ ನಡೆದ ಮರಣೋತ್ತರ ಪರೀಕ್ಷೆಯಲ್ಲಿ, ನೀರಿನಲ್ಲಿ ಮುಳುಗಿದ್ದರಿಂದ ಸಾವು ಸಂಭವಿಸಿದೆ ಎಂದು ವೈದ್ಯರು ವರದಿ ನೀಡಿದ್ದಾರೆ. ಈ ಪ್ರಕರಣ ನಡೆದು ಐದು ವರ್ಷಗಳಾದವು. ಆದರೆ, ತನಿಖೆಯನ್ನು ಇನ್ನೂ ಯಾಕೆ ಎಳೆಯುತ್ತಿದ್ದಾರೆ? ಪ್ರಕರಣವನ್ನು ರಾಜಕೀಯಗೊಳಿಸಲಾಗಿದೆ. ಇದನ್ನು ಕೊಲೆಯೆಂದು ಸಾಬೀತು ಮಾಡಲಿ. ನಿಜವಾಗಿಯೂ ಹತ್ಯೆಯಾಗಿದ್ದರೆ ಹೋರಾಟಕ್ಕೆ ನಾವೂ ಸಿದ್ಧರಿದ್ದೇವೆ’ ಎಂದು ಹೇಳಿದರು.</p>.<p class="Subhead"><strong>‘ಬಿ.ಜೆ.ಪಿ ಸಾಧನೆಯೇನಿಲ್ಲ’:</strong></p>.<p>‘ಕಾರವಾರ– ಅಂಕೋಲಾ ವಿಧಾನಸಭಾ ಕ್ಷೇತ್ರಕ್ಕೆ ಬಿ.ಜೆ.ಪಿ.ಯವರು ಒಂದೂ ಹೊಸ ಯೋಜನೆ ತಂದಿಲ್ಲ. ನನ್ನ ಅವಧಿಯಲ್ಲಿ ಮಂಜೂರಾದ ಸೇತುವೆಗಳನ್ನು, ತಮ್ಮ ಸಾಧನೆ ಎನ್ನುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ನಮ್ಮ ಗೆಲುವು ಖಚಿತ’ ಎಂದು ಸತೀಶ ಸೈಲ್ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಪಕ್ಷದ ಜಿಲ್ಲಾ ಸಮಿತಿ ವಕ್ತಾರ ಶಂಭು ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಮೀರ್ ನಾಯ್ಕ, ಪ್ರಮುಖರಾದ ರವೀಂದ್ರ ಅಮದಳ್ಳಿ, ಜಿ.ಪಿ.ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ಪರೇಶ ಮೇಸ್ತ ಸಾವು ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರನೇ ಆರೋಪಿ ಎಂದು ಬಿ.ಜೆ.ಪಿ ವಕ್ತಾರ ನಾಗರಾಜ ನಾಯಕ ಹೇಳಿರುವುದು ಹಾಸ್ಯಾಸ್ಪದ. ಅವರು ಮಾಡಿರುವ ಆರೋಪಕ್ಕೆ ಯಾವುದೇ ಬೆಲೆಯಿಲ್ಲ’ ಎಂದು ಮಾಜಿ ಶಾಸಕ ಸತೀಶ ಸೈಲ್ ಹೇಳಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೊದಲ ಇಬ್ಬರು ಆರೋಪಿಗಳು ಯಾರು ಎಂಬುದನ್ನು ಅವರು ಸ್ಪಷ್ಟಪಡಿಸಲಿ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಪರೇಶನ ಸಾವು ಪ್ರಕರಣದ ತನಿಖೆಯನ್ನು ಸಿ.ಬಿ.ಐಗೆ ಹಸ್ತಾಂತರಿಸಿದರು’ ಎಂದರು.</p>.<p>‘ಮಣಿಪಾಲದ ಆಸ್ಪತ್ರೆಯಲ್ಲಿ ನಡೆದ ಮರಣೋತ್ತರ ಪರೀಕ್ಷೆಯಲ್ಲಿ, ನೀರಿನಲ್ಲಿ ಮುಳುಗಿದ್ದರಿಂದ ಸಾವು ಸಂಭವಿಸಿದೆ ಎಂದು ವೈದ್ಯರು ವರದಿ ನೀಡಿದ್ದಾರೆ. ಈ ಪ್ರಕರಣ ನಡೆದು ಐದು ವರ್ಷಗಳಾದವು. ಆದರೆ, ತನಿಖೆಯನ್ನು ಇನ್ನೂ ಯಾಕೆ ಎಳೆಯುತ್ತಿದ್ದಾರೆ? ಪ್ರಕರಣವನ್ನು ರಾಜಕೀಯಗೊಳಿಸಲಾಗಿದೆ. ಇದನ್ನು ಕೊಲೆಯೆಂದು ಸಾಬೀತು ಮಾಡಲಿ. ನಿಜವಾಗಿಯೂ ಹತ್ಯೆಯಾಗಿದ್ದರೆ ಹೋರಾಟಕ್ಕೆ ನಾವೂ ಸಿದ್ಧರಿದ್ದೇವೆ’ ಎಂದು ಹೇಳಿದರು.</p>.<p class="Subhead"><strong>‘ಬಿ.ಜೆ.ಪಿ ಸಾಧನೆಯೇನಿಲ್ಲ’:</strong></p>.<p>‘ಕಾರವಾರ– ಅಂಕೋಲಾ ವಿಧಾನಸಭಾ ಕ್ಷೇತ್ರಕ್ಕೆ ಬಿ.ಜೆ.ಪಿ.ಯವರು ಒಂದೂ ಹೊಸ ಯೋಜನೆ ತಂದಿಲ್ಲ. ನನ್ನ ಅವಧಿಯಲ್ಲಿ ಮಂಜೂರಾದ ಸೇತುವೆಗಳನ್ನು, ತಮ್ಮ ಸಾಧನೆ ಎನ್ನುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ನಮ್ಮ ಗೆಲುವು ಖಚಿತ’ ಎಂದು ಸತೀಶ ಸೈಲ್ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಪಕ್ಷದ ಜಿಲ್ಲಾ ಸಮಿತಿ ವಕ್ತಾರ ಶಂಭು ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಮೀರ್ ನಾಯ್ಕ, ಪ್ರಮುಖರಾದ ರವೀಂದ್ರ ಅಮದಳ್ಳಿ, ಜಿ.ಪಿ.ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>