ಹಳಿಯಾಳ: ತಾಲ್ಲೂಕಿನ ಮಂಗಳವಾಡ ಗ್ರಾಮದ ಶಿಕ್ಷಕಿ ಭಾರತಿ ಕೇದಾರಿ ನಲವಡೆ ಅವರು ಸಾವಿತ್ರಿ ಬಾಯಿ ಫುಲೆ ರಾಷ್ಟ್ರ ಪ್ರಶಸ್ತಿ–2024 ಆಯ್ಕೆ ಆಗಿದ್ದಾರೆ.
2024 ಜ. 7ರಂದು ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ್ ಸಭಾಭವನದಲ್ಲಿ ರಾಜ್ಯ ಮಟ್ಟದ ಸಾವಿತ್ರಿ ಬಾಯಿ ಫುಲೆ ಜಯಂತಿ ಅಂಗವಾಗಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಭಾರತಿ ನಲವಡೆ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿದ ಸೇವೆ ಗುರುತಿಸಿ ಪ್ರಶಸ್ತಿ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ. ವಿಶ್ವನಾಥ ಡಿ. ಹಾಗೂ ಕಾರ್ಯದರ್ಶಿ ಎನ್.ಎಲ್. ರಾಥೋಡ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.