<p>ಜೊಯಿಡಾ: ‘ಜೊಯಿಡಾ ಪ್ರವಾಸೋದ್ಯಮದ ಅತ್ಯುತ್ತಮ ತಾಣವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಸ್ಥಳೀಯವಾಗಿ ವಿಪುಲ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ. ಈ ಬಗ್ಗೆ ಕಾಲೇಜಿನಲ್ಲಿ ಉದ್ಯಮಶೀಲ ಚಟುವಟಿಕೆಗಳನ್ನು ಹಮ್ಮಿಕೊಂಡು ಕೌಶಲಗಳನ್ನು ವೃದ್ಧಿಸಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸ್ವ ಉದ್ಯೋಗ ಹೊಂದುವಂತೆ ಪ್ರೇರೇಪಿಸಬೇಕು’ ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.</p>.<p>ಮಂಗಳವಾರ ಜೊಯಿಡಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಪರಿಶೀಲಿಸಿ ಕಾಲೇಜು ಅಭಿವೃದ್ಧಿ ಸಮಿತಿಯ ಸಭೆ ನಡೆಸಿ ಮಾತನಾಡಿದರು.</p>.<p>ಜೊಯಿಡಾದಲ್ಲಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಮಂಜೂರು ಮಾಡುವಂತೆ ಇಲಾಖೆಯ ಸಚಿವರಿಗೆ ಶಿಫಾರಸು ಮಾಡಿದರು. ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ಕುರಿತು ಉನ್ನತ ಶಿಕ್ಷಣ ಇಲಾಖೆಯ ಆಯುಕ್ತರೊಂದಿಗೆ ಕರೆ ಮೂಲಕ ಮಾತನಾಡಿ ಶೀಘ್ರ ಸಮಸ್ಯೆ ಬಗೆಹರಿಸಲು ಹೇಳಿದರು.</p>.<p>ಇದೇ ಸಂದರ್ಭದಲ್ಲಿ ಕಾಲೇಜಿನ ರಾತ್ರಿ ಕಾವಲುಗಾರರ ವೇತನಕ್ಕೆ ₹42 ಸಾವಿರ ದೇಣಿಗೆ ನೀಡಿದ ಅವರು ಕಾಲೇಜಿಗೆ ಅಗತ್ಯವಿರುವ ಕಂಪ್ಯೂಟರ್ಗಳನ್ನು ದಾಂಡೇಲಿ ವೆಸ್ಟ್ ಕಾಸ್ಟ್ ಪೇಪರ್ ಕಾರ್ಖಾನೆಯ ಕಂಪನಿಯ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ ಒದಗಿಸುವುದಾಗಿ ಭರವಸೆ ನೀಡಿದರು.</p>.<p>ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಗಜೇಂದ್ರ ಗಾಂದಲೆ, ನೂತನವಾಗಿ ನಿರ್ಮಿಸುತ್ತಿರುವ ಗ್ರಂಥಾಲಯದ ಪೀಠೋಪಕರಣಗಳ ಖರೀದಿಗೆ ₹50 ಸಾವಿರ ನೆರವು ನೀಡಿದರು.</p>.<p>ಸಭೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ರವಿ ರೇಡ್ಕರ್, ಸುಭಾಷ ವೇಳಿಪ, ಸದಾನಂದ ದಬ್ಗಾರ್, ಸಂಜಯ ಹಣಬರ, ವಿನಯ ದೇಸಾಯಿ, ದೇವಿದಾಸ ದೇಸಾಯಿ, ಕಾಲೇಜಿನ ಪ್ರಾಚಾರ್ಯೆ ಅಂಜಲಿ ರಾಣೆ, ಉಪನ್ಯಾಸಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜೊಯಿಡಾ: ‘ಜೊಯಿಡಾ ಪ್ರವಾಸೋದ್ಯಮದ ಅತ್ಯುತ್ತಮ ತಾಣವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಸ್ಥಳೀಯವಾಗಿ ವಿಪುಲ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ. ಈ ಬಗ್ಗೆ ಕಾಲೇಜಿನಲ್ಲಿ ಉದ್ಯಮಶೀಲ ಚಟುವಟಿಕೆಗಳನ್ನು ಹಮ್ಮಿಕೊಂಡು ಕೌಶಲಗಳನ್ನು ವೃದ್ಧಿಸಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸ್ವ ಉದ್ಯೋಗ ಹೊಂದುವಂತೆ ಪ್ರೇರೇಪಿಸಬೇಕು’ ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.</p>.<p>ಮಂಗಳವಾರ ಜೊಯಿಡಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಪರಿಶೀಲಿಸಿ ಕಾಲೇಜು ಅಭಿವೃದ್ಧಿ ಸಮಿತಿಯ ಸಭೆ ನಡೆಸಿ ಮಾತನಾಡಿದರು.</p>.<p>ಜೊಯಿಡಾದಲ್ಲಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಮಂಜೂರು ಮಾಡುವಂತೆ ಇಲಾಖೆಯ ಸಚಿವರಿಗೆ ಶಿಫಾರಸು ಮಾಡಿದರು. ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ಕುರಿತು ಉನ್ನತ ಶಿಕ್ಷಣ ಇಲಾಖೆಯ ಆಯುಕ್ತರೊಂದಿಗೆ ಕರೆ ಮೂಲಕ ಮಾತನಾಡಿ ಶೀಘ್ರ ಸಮಸ್ಯೆ ಬಗೆಹರಿಸಲು ಹೇಳಿದರು.</p>.<p>ಇದೇ ಸಂದರ್ಭದಲ್ಲಿ ಕಾಲೇಜಿನ ರಾತ್ರಿ ಕಾವಲುಗಾರರ ವೇತನಕ್ಕೆ ₹42 ಸಾವಿರ ದೇಣಿಗೆ ನೀಡಿದ ಅವರು ಕಾಲೇಜಿಗೆ ಅಗತ್ಯವಿರುವ ಕಂಪ್ಯೂಟರ್ಗಳನ್ನು ದಾಂಡೇಲಿ ವೆಸ್ಟ್ ಕಾಸ್ಟ್ ಪೇಪರ್ ಕಾರ್ಖಾನೆಯ ಕಂಪನಿಯ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ ಒದಗಿಸುವುದಾಗಿ ಭರವಸೆ ನೀಡಿದರು.</p>.<p>ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಗಜೇಂದ್ರ ಗಾಂದಲೆ, ನೂತನವಾಗಿ ನಿರ್ಮಿಸುತ್ತಿರುವ ಗ್ರಂಥಾಲಯದ ಪೀಠೋಪಕರಣಗಳ ಖರೀದಿಗೆ ₹50 ಸಾವಿರ ನೆರವು ನೀಡಿದರು.</p>.<p>ಸಭೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ರವಿ ರೇಡ್ಕರ್, ಸುಭಾಷ ವೇಳಿಪ, ಸದಾನಂದ ದಬ್ಗಾರ್, ಸಂಜಯ ಹಣಬರ, ವಿನಯ ದೇಸಾಯಿ, ದೇವಿದಾಸ ದೇಸಾಯಿ, ಕಾಲೇಜಿನ ಪ್ರಾಚಾರ್ಯೆ ಅಂಜಲಿ ರಾಣೆ, ಉಪನ್ಯಾಸಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>