ಹಿರಿಯ ಅಧಿಕಾರಿಗಳ ಸಮಿತಿ:ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಮುಲೈ ಮುಗಿಲನ್, ‘ಮೊಗೇರ ಸಮುದಾಯಕ್ಕೆ ಎಸ್.ಸಿ ಪ್ರಮಾಣ ಪತ್ರದ ಕುರಿತು ಉಂಟಾಗಿರುವ ಗೊಂದಲ ನಿವಾರಿಸಲು ಐವರು ಸದಸ್ಯರ ಸಮಿತಿ ರಚಿಸಲಾಗಿದೆ. ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಉತ್ತರ ಕನ್ನಡ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ಉತ್ತರ ಕನ್ನಡ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಹಾಗೂ ಮೈಸೂರು ಮಾನವ ಶಾಸ್ತ್ರ ವಿಭಾಗದ ಪ್ರೊಫೆಸರ್ ಇರಲಿದ್ದಾರೆ’ ಎಂದು ಮಾಹಿತಿ ನೀಡಿದರು.