<p><strong>ಕಾರವಾರ:</strong> ನಗರ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವ ಸಲುವಾಗಿ ಗೂಡಂಗಡಿಗಳ ಮೇಲೆ ನಿಯಂತ್ರಣ ಹೇರುವ ಜೊತೆಗೆ, ಕಸ ಸಂಗ್ರಹಣೆ ವಾಹನಗಳ ಓಡಾಟದ ಮೇಲೆ ನಿಗಾ ಇರಿಸಲು ಪ್ರತ್ಯೇಕ ನಿರ್ವಹಣಾ ವ್ಯವಸ್ಥೆ ರೂಪಿಸಲು ನಿರ್ಧರಿಸಲಾಗಿದೆ.</p>.<p>ಇಲ್ಲಿನ ನಗರಸಭೆ ಸಭಾಭವನದಲ್ಲಿ ಸೋಮವಾರ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.</p>.<p>ಸ್ವಚ್ಛತೆ ಕಾಯ್ದುಕೊಳ್ಳುವಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿರುವ ಮಧ್ಯಪ್ರದೇಶ ರಾಜ್ಯದ ಇಂಧೋರ್ ನಗರಕ್ಕೆ ಈಚೆಗೆ ಅಧ್ಯಯನ ಪ್ರವಾಸ ಕೈಗೊಂಡಿದ್ದ ನಗರಸಭೆ ಸದಸ್ಯರು, ಅಧಿಕಾರಿಗಳು ಅಲ್ಲಿ ಅಭ್ಯಸಿಸಿದ ಕೆಲ ಅಂಶಗಳನ್ನು ನಗರಸಭೆ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಿದರು.</p>.<p>ತ್ಯಾಜ್ಯ ವಿಲೇವಾರಿ ಘಟಕ ನಿರ್ವಹಣೆಯನ್ನು ಸರ್ಕಾರೇತರ ಸಂಸ್ಥೆಗೆ (ಎನ್ಜಿಒ) ವಹಿಸಿದ ಕ್ರಮ, ಕಸ ಸಂಗ್ರಹಣೆ ವಾಹನಗಳ ವ್ಯವಸ್ಥಿತ ಓಡಾಟಕ್ಕೆ ರೂಪಿಸಿದ ತಂತ್ರಜ್ಞಾನ ಆಧಾರಿತ ವ್ಯವಸ್ಥೆಯ ಕುರಿತು ಹಿರಿಯ ಸದಸ್ಯರಾದ ಪ್ರಕಾಶ ನಾಯ್ಕ, ಸಂದೀಪ ತಳೇಕರ, ಪ್ರೇಮಾನಂದ ಗುನಗಾ ಪ್ರಸ್ತಾಪಿಸಿದರು.</p>.<p>‘ಗೂಡಂಗಡಿಗಳ ಸಂಖ್ಯೆ ಹೆಚ್ಚುತ್ತಿದ್ದು, ಸ್ವಚ್ಛತೆ ಕಾಯ್ದುಕೊಳ್ಳಲು ಸವಾಲಾಗಿದೆ. ಮೊದಲು ಅವುಗಳನ್ನು ನಿಯಂತ್ರಿಸಿ. ಯುವಕರನ್ನು, ವಿದ್ಯಾರ್ಥಿಗಳನ್ನು ಒಳಗೊಂಡು ಸ್ವಚ್ಚತೆ ಜಾಗೃತಿ ಮೂಡಿಸಿ’ ಎಂದು ಸದಸ್ಯ ಡಾ.ನಿತಿನ್ ಪಿಕಳೆ ಸಲಹೆ ನೀಡಿದರು.</p>.<p>‘ಕಾರವಾರದಲ್ಲಿ ಪ್ರತಿದಿನ ಸರಾಸರಿ 27 ಟನ್ ಕಸ ಸಂಗ್ರಹ ಆಗುತ್ತಿದೆ. ಕಸ ಸಂಗ್ರಹಣೆ ವಾಹನಗಳು ನಿರ್ದಿಷ್ಟ ಸಮಯಗಳಲ್ಲೇ ಆಯಾ ವಾರ್ಡ್ ವ್ಯಾಪ್ತಿಯಲ್ಲಿ ಸಂಚರಿಸುವಂತೆ ನಿಗಾ ಇರಿಸಲು ಪ್ರತ್ಯೇಕ ನಿರ್ವಹಣಾ ವ್ಯವಸ್ಥೇ ರೂಪಿಸಲಾಗುವುದು’ ಎಂದು ಪೌರಾಯುಕ್ತ ಜಗದೀಶ ಹುಲಗೆಜ್ಜಿ ಹೇಳಿದರು.</p>.<p>ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೇಕರ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಾಲಾ ಹುಲಸ್ವಾರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ನಗರ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವ ಸಲುವಾಗಿ ಗೂಡಂಗಡಿಗಳ ಮೇಲೆ ನಿಯಂತ್ರಣ ಹೇರುವ ಜೊತೆಗೆ, ಕಸ ಸಂಗ್ರಹಣೆ ವಾಹನಗಳ ಓಡಾಟದ ಮೇಲೆ ನಿಗಾ ಇರಿಸಲು ಪ್ರತ್ಯೇಕ ನಿರ್ವಹಣಾ ವ್ಯವಸ್ಥೆ ರೂಪಿಸಲು ನಿರ್ಧರಿಸಲಾಗಿದೆ.</p>.<p>ಇಲ್ಲಿನ ನಗರಸಭೆ ಸಭಾಭವನದಲ್ಲಿ ಸೋಮವಾರ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.</p>.<p>ಸ್ವಚ್ಛತೆ ಕಾಯ್ದುಕೊಳ್ಳುವಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿರುವ ಮಧ್ಯಪ್ರದೇಶ ರಾಜ್ಯದ ಇಂಧೋರ್ ನಗರಕ್ಕೆ ಈಚೆಗೆ ಅಧ್ಯಯನ ಪ್ರವಾಸ ಕೈಗೊಂಡಿದ್ದ ನಗರಸಭೆ ಸದಸ್ಯರು, ಅಧಿಕಾರಿಗಳು ಅಲ್ಲಿ ಅಭ್ಯಸಿಸಿದ ಕೆಲ ಅಂಶಗಳನ್ನು ನಗರಸಭೆ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಿದರು.</p>.<p>ತ್ಯಾಜ್ಯ ವಿಲೇವಾರಿ ಘಟಕ ನಿರ್ವಹಣೆಯನ್ನು ಸರ್ಕಾರೇತರ ಸಂಸ್ಥೆಗೆ (ಎನ್ಜಿಒ) ವಹಿಸಿದ ಕ್ರಮ, ಕಸ ಸಂಗ್ರಹಣೆ ವಾಹನಗಳ ವ್ಯವಸ್ಥಿತ ಓಡಾಟಕ್ಕೆ ರೂಪಿಸಿದ ತಂತ್ರಜ್ಞಾನ ಆಧಾರಿತ ವ್ಯವಸ್ಥೆಯ ಕುರಿತು ಹಿರಿಯ ಸದಸ್ಯರಾದ ಪ್ರಕಾಶ ನಾಯ್ಕ, ಸಂದೀಪ ತಳೇಕರ, ಪ್ರೇಮಾನಂದ ಗುನಗಾ ಪ್ರಸ್ತಾಪಿಸಿದರು.</p>.<p>‘ಗೂಡಂಗಡಿಗಳ ಸಂಖ್ಯೆ ಹೆಚ್ಚುತ್ತಿದ್ದು, ಸ್ವಚ್ಛತೆ ಕಾಯ್ದುಕೊಳ್ಳಲು ಸವಾಲಾಗಿದೆ. ಮೊದಲು ಅವುಗಳನ್ನು ನಿಯಂತ್ರಿಸಿ. ಯುವಕರನ್ನು, ವಿದ್ಯಾರ್ಥಿಗಳನ್ನು ಒಳಗೊಂಡು ಸ್ವಚ್ಚತೆ ಜಾಗೃತಿ ಮೂಡಿಸಿ’ ಎಂದು ಸದಸ್ಯ ಡಾ.ನಿತಿನ್ ಪಿಕಳೆ ಸಲಹೆ ನೀಡಿದರು.</p>.<p>‘ಕಾರವಾರದಲ್ಲಿ ಪ್ರತಿದಿನ ಸರಾಸರಿ 27 ಟನ್ ಕಸ ಸಂಗ್ರಹ ಆಗುತ್ತಿದೆ. ಕಸ ಸಂಗ್ರಹಣೆ ವಾಹನಗಳು ನಿರ್ದಿಷ್ಟ ಸಮಯಗಳಲ್ಲೇ ಆಯಾ ವಾರ್ಡ್ ವ್ಯಾಪ್ತಿಯಲ್ಲಿ ಸಂಚರಿಸುವಂತೆ ನಿಗಾ ಇರಿಸಲು ಪ್ರತ್ಯೇಕ ನಿರ್ವಹಣಾ ವ್ಯವಸ್ಥೇ ರೂಪಿಸಲಾಗುವುದು’ ಎಂದು ಪೌರಾಯುಕ್ತ ಜಗದೀಶ ಹುಲಗೆಜ್ಜಿ ಹೇಳಿದರು.</p>.<p>ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೇಕರ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಾಲಾ ಹುಲಸ್ವಾರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>