<p><strong>ಹೊನ್ನಾವರ (ಉತ್ತರ ಕನ್ನಡ):</strong> ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಟ್ಟು, ವಿದ್ಯುತ್ ಕೊರತೆ ನೀಗಿಸಲು ಬದಲಿ ಇಂಧನ ಮೂಲಗಳ ಮೊರೆ ಹೋಗಬೇಕು ಎಂದು ಪಟ್ಟಣದಲ್ಲಿ ಮಂಗಳವಾರ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಒತ್ತಾಯಿಸಲಾಗಿದೆ.</p>.<p>ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ನೇತೃತ್ವದಲ್ಲಿ ‘ಶರಾವತಿ ಉಳಿಸಿ ಹೋರಾಟ ಸಮಿತಿ’ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಯೋಜನೆ ಶಾಶ್ವತ ರದ್ದತಿಗೆ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಮಂಡಿಸಲಾಯಿತು.</p>.<p>‘ಶರಾವತಿ ನದಿ ನೀರನ್ನು ಪರಿಸರ ನಾಶದ ಯೋಜನೆಗೆ ಬಳಸಿಕೊಳ್ಳುವುದು ತಾಯಿಯ ರಕ್ತ ಕುಡಿದಷ್ಟೇ ಮಹಾಪಾಪ’ ಎಂದು ರಾಘವೇಶ್ವರ ಶ್ರೀ ಅಭಿಪ್ರಾಯಪಟ್ಟರು. </p>.<p>‘ಉತ್ತರ ಕನ್ನಡ ಜಿಲ್ಲೆಯ ಪರಿಸರ ಧಾರಣ ಸಾಮರ್ಥ್ಯದ ಅಧ್ಯಯನ ನಡೆಸದೇ, ಇಲ್ಲಿ ಯಾವುದೇ ಬೃಹತ್ ಯೋಜನೆ ಹೇರಿಕೆ ಮಾಡಬಾರದು’ ಎಂಬ ಒತ್ತಾಯ ಮಾಡಲಾಯಿತು.</p>.<p>ಮೀನುಗಾರಿಕೆ ಸಚಿವ ಮಂಕಾಳ ವೈದ್ಯ, ಶಾಸಕ ದಿನಕರ ಶೆಟ್ಟಿ, ಬಂಗಾರಮಕ್ಕಿ ಕ್ಷೇತ್ರದ ಧರ್ಮದರ್ಶಿ ಮಾರುತಿ ಗುರೂಜಿ, ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾವರ (ಉತ್ತರ ಕನ್ನಡ):</strong> ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಟ್ಟು, ವಿದ್ಯುತ್ ಕೊರತೆ ನೀಗಿಸಲು ಬದಲಿ ಇಂಧನ ಮೂಲಗಳ ಮೊರೆ ಹೋಗಬೇಕು ಎಂದು ಪಟ್ಟಣದಲ್ಲಿ ಮಂಗಳವಾರ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಒತ್ತಾಯಿಸಲಾಗಿದೆ.</p>.<p>ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ನೇತೃತ್ವದಲ್ಲಿ ‘ಶರಾವತಿ ಉಳಿಸಿ ಹೋರಾಟ ಸಮಿತಿ’ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಯೋಜನೆ ಶಾಶ್ವತ ರದ್ದತಿಗೆ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಮಂಡಿಸಲಾಯಿತು.</p>.<p>‘ಶರಾವತಿ ನದಿ ನೀರನ್ನು ಪರಿಸರ ನಾಶದ ಯೋಜನೆಗೆ ಬಳಸಿಕೊಳ್ಳುವುದು ತಾಯಿಯ ರಕ್ತ ಕುಡಿದಷ್ಟೇ ಮಹಾಪಾಪ’ ಎಂದು ರಾಘವೇಶ್ವರ ಶ್ರೀ ಅಭಿಪ್ರಾಯಪಟ್ಟರು. </p>.<p>‘ಉತ್ತರ ಕನ್ನಡ ಜಿಲ್ಲೆಯ ಪರಿಸರ ಧಾರಣ ಸಾಮರ್ಥ್ಯದ ಅಧ್ಯಯನ ನಡೆಸದೇ, ಇಲ್ಲಿ ಯಾವುದೇ ಬೃಹತ್ ಯೋಜನೆ ಹೇರಿಕೆ ಮಾಡಬಾರದು’ ಎಂಬ ಒತ್ತಾಯ ಮಾಡಲಾಯಿತು.</p>.<p>ಮೀನುಗಾರಿಕೆ ಸಚಿವ ಮಂಕಾಳ ವೈದ್ಯ, ಶಾಸಕ ದಿನಕರ ಶೆಟ್ಟಿ, ಬಂಗಾರಮಕ್ಕಿ ಕ್ಷೇತ್ರದ ಧರ್ಮದರ್ಶಿ ಮಾರುತಿ ಗುರೂಜಿ, ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>