<p>ಶಿರಸಿ: ‘ದೇವರನ್ನು ನಂಬಿದರೆ ನಿಂತ ನೆಲವೇ ದೇವಾಲಯವಾಗುತ್ತದೆ’ ಎಂದು ವಿದ್ವಾಂಸ ಉಮಾಕಾಂತ ಭಟ್ ಕೆರೆಕೈ ನುಡಿದರು.</p>.<p>ತಾಲ್ಲೂಕಿನ ಪಡಂಬೈಲಿನ ದೊಡ್ಡಜಡ್ಡಿಯ ಸುರೇಶ ಹೆಗಡೆ ಅವರ ತವರುಮನೆ ತೋಟದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಅಘನಾಶಿನಿ ನದಿ ಪೂಜೆ, ಬಾಗಿನ ಅರ್ಪಣೆ ಹಾಗೂ ಗಂಗಾರತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದೇವಾಲಯ ನಿರ್ಮಿಸಿ ಕ್ಷೇತ್ರ ಮಾಡಬೇಕಾಗಿಲ್ಲ, ತವರಿನ ಭಾವವೃಷ್ಟಿ ಸುರಿಸುವ ಇಂತಹ ಕ್ಷೇತ್ರಗಳು ಪ್ರಕೃತಿಯ ಮಡಿಲಲ್ಲಿ ನೆಮ್ಮದಿಯ ಜೀವನ ಕಟ್ಟಿಕೊಳ್ಳಲು ಪ್ರೇರಣೆ ನೀಡುತ್ತವೆ’ ಎಂದರು.</p>.<p>ಹಿರಿಯ ಸಾಹಿತಿ ಜಿ.ಎ.ಹೆಗಡೆ ಸೋಂದಾ, ಸಾಮಾಜಿಕ ಕಾರ್ಯಕರ್ತ ವಿಶ್ವನಾಥ ಶರ್ಮಾ ನಾಡಗುಳಿ ಶುಭ ಹಾರೈಸಿದರು. ಸುರೇಶ ಹೆಗಡೆ ಅವರು ತಾವು ಓದಿದ ಹೆಗಡೆಕಟ್ಟಾ ಪ್ರೌಢಶಾಲೆ ಹಾಗೂ ಪಂಚಲಿಂಗ ಪ್ರಾಥಮಿಕ ಶಾಲೆಗೆ ಧನಸಹಾಯದ ಚೆಕ್ ಹಸ್ತಾಂತರಿಸಿದರು.</p>.<p>ಬಡಾವಣೆಯ ಸಿಮೆಂಟ್ ರಸ್ತೆ ಉದ್ಘಾಟನೆ ಹಾಗೂ ಒಳಚರಂಡಿ ನೀರು ಶುದ್ಧೀಕರಣ ಘಟಕದ ಗುದ್ದಲಿಪೂಜೆ ನೆರವೇರಿಸಲಾಯಿತು. ಸಾಹಿತಿ ಜಯಪ್ರಕಾಶ ಹಬ್ಬು ನಿರ್ವಹಿಸಿದರು. ರೇಖಾ ಹೆಗಡೆ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-20-94609562</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ‘ದೇವರನ್ನು ನಂಬಿದರೆ ನಿಂತ ನೆಲವೇ ದೇವಾಲಯವಾಗುತ್ತದೆ’ ಎಂದು ವಿದ್ವಾಂಸ ಉಮಾಕಾಂತ ಭಟ್ ಕೆರೆಕೈ ನುಡಿದರು.</p>.<p>ತಾಲ್ಲೂಕಿನ ಪಡಂಬೈಲಿನ ದೊಡ್ಡಜಡ್ಡಿಯ ಸುರೇಶ ಹೆಗಡೆ ಅವರ ತವರುಮನೆ ತೋಟದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಅಘನಾಶಿನಿ ನದಿ ಪೂಜೆ, ಬಾಗಿನ ಅರ್ಪಣೆ ಹಾಗೂ ಗಂಗಾರತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದೇವಾಲಯ ನಿರ್ಮಿಸಿ ಕ್ಷೇತ್ರ ಮಾಡಬೇಕಾಗಿಲ್ಲ, ತವರಿನ ಭಾವವೃಷ್ಟಿ ಸುರಿಸುವ ಇಂತಹ ಕ್ಷೇತ್ರಗಳು ಪ್ರಕೃತಿಯ ಮಡಿಲಲ್ಲಿ ನೆಮ್ಮದಿಯ ಜೀವನ ಕಟ್ಟಿಕೊಳ್ಳಲು ಪ್ರೇರಣೆ ನೀಡುತ್ತವೆ’ ಎಂದರು.</p>.<p>ಹಿರಿಯ ಸಾಹಿತಿ ಜಿ.ಎ.ಹೆಗಡೆ ಸೋಂದಾ, ಸಾಮಾಜಿಕ ಕಾರ್ಯಕರ್ತ ವಿಶ್ವನಾಥ ಶರ್ಮಾ ನಾಡಗುಳಿ ಶುಭ ಹಾರೈಸಿದರು. ಸುರೇಶ ಹೆಗಡೆ ಅವರು ತಾವು ಓದಿದ ಹೆಗಡೆಕಟ್ಟಾ ಪ್ರೌಢಶಾಲೆ ಹಾಗೂ ಪಂಚಲಿಂಗ ಪ್ರಾಥಮಿಕ ಶಾಲೆಗೆ ಧನಸಹಾಯದ ಚೆಕ್ ಹಸ್ತಾಂತರಿಸಿದರು.</p>.<p>ಬಡಾವಣೆಯ ಸಿಮೆಂಟ್ ರಸ್ತೆ ಉದ್ಘಾಟನೆ ಹಾಗೂ ಒಳಚರಂಡಿ ನೀರು ಶುದ್ಧೀಕರಣ ಘಟಕದ ಗುದ್ದಲಿಪೂಜೆ ನೆರವೇರಿಸಲಾಯಿತು. ಸಾಹಿತಿ ಜಯಪ್ರಕಾಶ ಹಬ್ಬು ನಿರ್ವಹಿಸಿದರು. ರೇಖಾ ಹೆಗಡೆ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-20-94609562</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>