<p>ಶಿರಸಿ: ಬೇಡ್ತಿ ಮತ್ತು ಅಘನಾಶಿನಿ ನದಿಗಳ ಸಂರಕ್ಷಣೆಗಾಗಿ ನಡೆಯುತ್ತಿರುವ ನಿರಂತರ ಹೋರಾಟ ಹಾಗೂ ವ್ಯಾಪಕ ಅಭಿಯಾನಗಳ ಭಾಗವಾಗಿ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯ ವಿಶೇಷ ಸಭೆಯನ್ನು ಏ.20ರಂದು ಆಯೋಜಿಸಲಾಗಿದೆ. ನಗರದ ಕದಂಬ ಮಾರ್ಕೆಟಿಂಗ್ ಸಭಾಭವನದಲ್ಲಿ ಮಧ್ಯಾಹ್ನ 3.30ಕ್ಕೆ ಸಭೆ ನಡೆಯಲಿದೆ.</p>.<p>ಸ್ವರ್ಣವಲ್ಲಿ ಮಹಾಸಂಸ್ಥಾನದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯದಲ್ಲಿ ಈ ಸಭೆ ಜರುಗಲಿದೆ. ಜಲ ಸಂಪನ್ಮೂಲ ತಜ್ಞ ಬೆಂಗಳೂರಿನ ವಿ.ಆರ್.ಹೆಗಡೆ ಶೀಗೆಮನೆ ಸಭೆಯಲ್ಲಿ ಉಪಸ್ಥಿತರಿರಲಿದ್ದು, ಬೇಡ್ತಿ-ವರದಾ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳ ವಿಫಲತೆ ಹಾಗೂ ಅವುಗಳ ವಾಸ್ತವಿಕ ಚಿತ್ರಣದ ಕುರಿತು ಮಾಹಿತಿ ಮಂಡಿಸುವರು. ಇದೇ ಸಂದರ್ಭದಲ್ಲಿ ಬಾಲಚಂದ್ರ ಸಾಯಿಮನೆ ಹಾಗೂ ಅಶ್ವಿನಿ ಕುಮಾರ ಅವರು ಅಘನಾಶಿನಿ ಅಪ್ಪೆಮಿಡಿ ಪಾದಯಾತ್ರೆಯ ಕುರಿತಾದ ವಿಶೇಷ ವೀಡಿಯೋ ಪ್ರದರ್ಶನ ನಡೆಸಿಕೊಡುವರು.</p>.<p>ದೆಹಲಿ, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ವಿವಿಧೆಡೆ ನಡೆದ ಅಭಿಯಾನಗಳು ಹಾಗೂ ಹೋರಾಟದ ಪ್ರಚಲಿತ ವಿದ್ಯಮಾನಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು, ಮಾತೃಮಂಡಳಿ ಹಾಗೂ ವಿವಿಧ ವಿಭಾಗಗಳ ಸಂಯೋಜಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಂಚಾಲಕರು ಪ್ರಕಟಣೆಯಲ್ಲಿ ಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-20-1435912306</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ಬೇಡ್ತಿ ಮತ್ತು ಅಘನಾಶಿನಿ ನದಿಗಳ ಸಂರಕ್ಷಣೆಗಾಗಿ ನಡೆಯುತ್ತಿರುವ ನಿರಂತರ ಹೋರಾಟ ಹಾಗೂ ವ್ಯಾಪಕ ಅಭಿಯಾನಗಳ ಭಾಗವಾಗಿ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯ ವಿಶೇಷ ಸಭೆಯನ್ನು ಏ.20ರಂದು ಆಯೋಜಿಸಲಾಗಿದೆ. ನಗರದ ಕದಂಬ ಮಾರ್ಕೆಟಿಂಗ್ ಸಭಾಭವನದಲ್ಲಿ ಮಧ್ಯಾಹ್ನ 3.30ಕ್ಕೆ ಸಭೆ ನಡೆಯಲಿದೆ.</p>.<p>ಸ್ವರ್ಣವಲ್ಲಿ ಮಹಾಸಂಸ್ಥಾನದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯದಲ್ಲಿ ಈ ಸಭೆ ಜರುಗಲಿದೆ. ಜಲ ಸಂಪನ್ಮೂಲ ತಜ್ಞ ಬೆಂಗಳೂರಿನ ವಿ.ಆರ್.ಹೆಗಡೆ ಶೀಗೆಮನೆ ಸಭೆಯಲ್ಲಿ ಉಪಸ್ಥಿತರಿರಲಿದ್ದು, ಬೇಡ್ತಿ-ವರದಾ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳ ವಿಫಲತೆ ಹಾಗೂ ಅವುಗಳ ವಾಸ್ತವಿಕ ಚಿತ್ರಣದ ಕುರಿತು ಮಾಹಿತಿ ಮಂಡಿಸುವರು. ಇದೇ ಸಂದರ್ಭದಲ್ಲಿ ಬಾಲಚಂದ್ರ ಸಾಯಿಮನೆ ಹಾಗೂ ಅಶ್ವಿನಿ ಕುಮಾರ ಅವರು ಅಘನಾಶಿನಿ ಅಪ್ಪೆಮಿಡಿ ಪಾದಯಾತ್ರೆಯ ಕುರಿತಾದ ವಿಶೇಷ ವೀಡಿಯೋ ಪ್ರದರ್ಶನ ನಡೆಸಿಕೊಡುವರು.</p>.<p>ದೆಹಲಿ, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ವಿವಿಧೆಡೆ ನಡೆದ ಅಭಿಯಾನಗಳು ಹಾಗೂ ಹೋರಾಟದ ಪ್ರಚಲಿತ ವಿದ್ಯಮಾನಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು, ಮಾತೃಮಂಡಳಿ ಹಾಗೂ ವಿವಿಧ ವಿಭಾಗಗಳ ಸಂಯೋಜಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಂಚಾಲಕರು ಪ್ರಕಟಣೆಯಲ್ಲಿ ಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-20-1435912306</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>