<p>ಶಿರಸಿ: ಇಲ್ಲಿನ ಗಣೇಶನಗರದ ಅಂಗನವಾಡಿ ನಂ.5ರ ಚಾವಣಿ ಎತ್ತರಿಸುವ ಕಾಮಗಾರಿಯನ್ನು ಗ್ರಾಮ ಪಂಚಾಯಿತಿ ಕ್ರಿಯಾ ಯೋಜನೆಯಲ್ಲಿ ಸೇರಿಸಲು ತೀರ್ಮಾನಿಸಿರುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಈಚೆಗೆ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಪ್ರಕಟವಾದ ‘ಶೆಡ್ ಅಡಿ ಬೆವರುತ್ತಿವೆ ಎಳೆಯ ಜೀವಗಳು’ ವರದಿ ಪ್ರಕಟವಾದ ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಅಂಗನವಾಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.</p>.<p>‘ಗಣೇಶನಗರ-5ರ ಅಂಗನವಾಡಿ ಕೇಂದ್ರವು ಕಳೆದ 17 ವರ್ಷಗಳಿಂದ ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ನಡೆಯುತ್ತಿದೆ. ಇಲ್ಲಿ ಕುಡಿಯುವ ನೀರು, ವಿದ್ಯುತ್, ಫ್ಯಾನ್ ಹಾಗೂ ಶೌಚಾಲಯದಂತಹ ಮೂಲ ಸೌಕರ್ಯಗಳಿದ್ದು, ಹುತ್ಗಾರ ಗ್ರಾಮ ಪಂಚಾಯಿತಿಯಿಂದ ಈಚೆಗಷ್ಟೇ ಸುಣ್ಣಬಣ್ಣ ಹಾಗೂ ದುರಸ್ತಿ ಕಾರ್ಯಮಾಡಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಬಾಲವಿಕಾಸ ಸಮಿತಿ ಹಾಗೂ ಪಾಲಕರು ಇದೇ ಕಟ್ಟಡದಲ್ಲಿ ಕೇಂದ್ರ ಮುಂದುವರಿಸಲು ಸಮ್ಮತಿಸಿದ್ದಾರೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-20-1507619235</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ಇಲ್ಲಿನ ಗಣೇಶನಗರದ ಅಂಗನವಾಡಿ ನಂ.5ರ ಚಾವಣಿ ಎತ್ತರಿಸುವ ಕಾಮಗಾರಿಯನ್ನು ಗ್ರಾಮ ಪಂಚಾಯಿತಿ ಕ್ರಿಯಾ ಯೋಜನೆಯಲ್ಲಿ ಸೇರಿಸಲು ತೀರ್ಮಾನಿಸಿರುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಈಚೆಗೆ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಪ್ರಕಟವಾದ ‘ಶೆಡ್ ಅಡಿ ಬೆವರುತ್ತಿವೆ ಎಳೆಯ ಜೀವಗಳು’ ವರದಿ ಪ್ರಕಟವಾದ ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಅಂಗನವಾಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.</p>.<p>‘ಗಣೇಶನಗರ-5ರ ಅಂಗನವಾಡಿ ಕೇಂದ್ರವು ಕಳೆದ 17 ವರ್ಷಗಳಿಂದ ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ನಡೆಯುತ್ತಿದೆ. ಇಲ್ಲಿ ಕುಡಿಯುವ ನೀರು, ವಿದ್ಯುತ್, ಫ್ಯಾನ್ ಹಾಗೂ ಶೌಚಾಲಯದಂತಹ ಮೂಲ ಸೌಕರ್ಯಗಳಿದ್ದು, ಹುತ್ಗಾರ ಗ್ರಾಮ ಪಂಚಾಯಿತಿಯಿಂದ ಈಚೆಗಷ್ಟೇ ಸುಣ್ಣಬಣ್ಣ ಹಾಗೂ ದುರಸ್ತಿ ಕಾರ್ಯಮಾಡಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಬಾಲವಿಕಾಸ ಸಮಿತಿ ಹಾಗೂ ಪಾಲಕರು ಇದೇ ಕಟ್ಟಡದಲ್ಲಿ ಕೇಂದ್ರ ಮುಂದುವರಿಸಲು ಸಮ್ಮತಿಸಿದ್ದಾರೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-20-1507619235</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>