<p><strong>ಶಿರಸಿ:</strong> ‘ನುಡಿದಂತೆ ನಡೆಯುವುದರ ಮೂಲಕ ಧರ್ಮ ಮತ್ತು ಸಂಸ್ಕೃತಿಯನ್ನು ಎತ್ತಿ ಹಿಡಿಯಬೇಕು’ ಎಂದು ಬೆಳಗಾವಿ ಹುಕ್ಕೇರಿ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಜಡ್ಡಿಗದ್ದೆಯ ಮಂಡಲ ವ್ಯಾಪ್ತಿಯಲ್ಲಿ ಹಿಂದೂ ಸಮ್ಮೇಳನ ಸಂಚಾಲನಾ ಸಮಿತಿ ಆಶ್ರಯದಲ್ಲಿ ಈಚೆಗೆ ಆಯೋಜಿಸಿದ್ದ ಹಿಂದೂ ಸಮಾವೇಶದಲ್ಲಿ ಅವರು ಆಶೀರ್ವಚನ ನೀಡಿದರು.</p>.<p>‘ನಾವು ಹಿಂದೂ ಎಂದು ಹೇಳಿಕೊಳ್ಳಲು ಹಿಂಜರಿಯಬಾರದು. ಅಭಿಮಾನದಿಂದ ಸಂಘಟಿತರಾಗಬೇಕು. ಯುಗಾದಿಯಂತಹ ಹಬ್ಬಗಳಲ್ಲಿ ಎಲ್ಲರ ಮನೆಗೆ ತೆರಳಿ ಪ್ರೀತಿ ಹಂಚಿದರೆ ಮಾತ್ರ ಮತಾಂತರ ತಡೆಯಲು ಸಾಧ್ಯ. ಹಿಂದೂಗಳನ್ನು ಆರ್ಥಿಕ, ಸಾಮಾಜಿಕ ಹಾಗೂ ಧಾರ್ಮಿಕವಾಗಿ ಸದೃಢಗೊಳಿಸುವುದೇ ದೇಶ ಉಳಿಸುವ ಹಾದಿ’ ಎಂದು ತಿಳಿಸಿದರು.</p>.<p>ದಿಕ್ಸೂಚಿ ಭಾಷಣ ಮಾಡಿದ ವಿಶ್ವ ಹಿಂದೂ ಪರಿಷತ್ ರಾಜ್ಯ ಸಂಚಾಲಕ ಸೂರ್ಯನಾರಾಯಣ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯವೈಖರಿ ಹಾಗೂ ಮುಂದಿನ ಪೀಳಿಗೆಯಲ್ಲಿ ಹಿಂದುತ್ವ ಜಾಗೃತಿ ಅಗತ್ಯವನ್ನು ವಿವರಿಸಿದರು.</p>.<p>ಶಿವರಾಮ ಭಟ್ ಹೊಸ್ಮನೆ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಗಿರಿಜಾ ಹೆಗಡೆ, ರತ್ನಾವತಿ ನಾಯ್ಕ ಇದ್ದರು. ಸಮಾವೇಶಕ್ಕೂ ಮುನ್ನ ಜಡ್ಡಿಗದ್ದೆ ದೇವಸ್ಥಾನದಿಂದ ಸಭಾಂಗಣದವರೆಗೆ ಭಾರತ ಮಾತೆ ಚಿತ್ರದ ಶೋಭಾಯಾತ್ರೆ ನಡೆಯಿತು. ವೇದಘೋಷ, ಭಗವದ್ಗೀತೆ ಪಠಣ ಹಾಗೂ ದೇಶಭಕ್ತಿ ಗೀತೆಗಳು ಸಮಾವೇಶಕ್ಕೆ ಕಳೆ ನೀಡಿದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-20-673680895</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ‘ನುಡಿದಂತೆ ನಡೆಯುವುದರ ಮೂಲಕ ಧರ್ಮ ಮತ್ತು ಸಂಸ್ಕೃತಿಯನ್ನು ಎತ್ತಿ ಹಿಡಿಯಬೇಕು’ ಎಂದು ಬೆಳಗಾವಿ ಹುಕ್ಕೇರಿ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಜಡ್ಡಿಗದ್ದೆಯ ಮಂಡಲ ವ್ಯಾಪ್ತಿಯಲ್ಲಿ ಹಿಂದೂ ಸಮ್ಮೇಳನ ಸಂಚಾಲನಾ ಸಮಿತಿ ಆಶ್ರಯದಲ್ಲಿ ಈಚೆಗೆ ಆಯೋಜಿಸಿದ್ದ ಹಿಂದೂ ಸಮಾವೇಶದಲ್ಲಿ ಅವರು ಆಶೀರ್ವಚನ ನೀಡಿದರು.</p>.<p>‘ನಾವು ಹಿಂದೂ ಎಂದು ಹೇಳಿಕೊಳ್ಳಲು ಹಿಂಜರಿಯಬಾರದು. ಅಭಿಮಾನದಿಂದ ಸಂಘಟಿತರಾಗಬೇಕು. ಯುಗಾದಿಯಂತಹ ಹಬ್ಬಗಳಲ್ಲಿ ಎಲ್ಲರ ಮನೆಗೆ ತೆರಳಿ ಪ್ರೀತಿ ಹಂಚಿದರೆ ಮಾತ್ರ ಮತಾಂತರ ತಡೆಯಲು ಸಾಧ್ಯ. ಹಿಂದೂಗಳನ್ನು ಆರ್ಥಿಕ, ಸಾಮಾಜಿಕ ಹಾಗೂ ಧಾರ್ಮಿಕವಾಗಿ ಸದೃಢಗೊಳಿಸುವುದೇ ದೇಶ ಉಳಿಸುವ ಹಾದಿ’ ಎಂದು ತಿಳಿಸಿದರು.</p>.<p>ದಿಕ್ಸೂಚಿ ಭಾಷಣ ಮಾಡಿದ ವಿಶ್ವ ಹಿಂದೂ ಪರಿಷತ್ ರಾಜ್ಯ ಸಂಚಾಲಕ ಸೂರ್ಯನಾರಾಯಣ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯವೈಖರಿ ಹಾಗೂ ಮುಂದಿನ ಪೀಳಿಗೆಯಲ್ಲಿ ಹಿಂದುತ್ವ ಜಾಗೃತಿ ಅಗತ್ಯವನ್ನು ವಿವರಿಸಿದರು.</p>.<p>ಶಿವರಾಮ ಭಟ್ ಹೊಸ್ಮನೆ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಗಿರಿಜಾ ಹೆಗಡೆ, ರತ್ನಾವತಿ ನಾಯ್ಕ ಇದ್ದರು. ಸಮಾವೇಶಕ್ಕೂ ಮುನ್ನ ಜಡ್ಡಿಗದ್ದೆ ದೇವಸ್ಥಾನದಿಂದ ಸಭಾಂಗಣದವರೆಗೆ ಭಾರತ ಮಾತೆ ಚಿತ್ರದ ಶೋಭಾಯಾತ್ರೆ ನಡೆಯಿತು. ವೇದಘೋಷ, ಭಗವದ್ಗೀತೆ ಪಠಣ ಹಾಗೂ ದೇಶಭಕ್ತಿ ಗೀತೆಗಳು ಸಮಾವೇಶಕ್ಕೆ ಕಳೆ ನೀಡಿದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-20-673680895</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>