<p><strong>ಶಿರಸಿ</strong>: ‘ತಾಲ್ಲೂಕಿನ ಕಾಳಂಗಿ ಕ್ರಾಸ್ನಿಂದ ರಾಮಾಪುರದವರೆಗೆ ಮರು ಡಾಂಬರೀಕರಣ ಕಾಮಗಾರಿಗಾಗಿ ಅನುದಾನ ಬಿಡುಗಡೆಯಾಗಿದ್ದರೂ, ಗುತ್ತಿಗೆದಾರ ಕೆಲಸ ಪ್ರಾರಂಭಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಈ ಭಾಗದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದ್ದು, ಕೂಡಲೇ ರಸ್ತೆ ನಿರ್ಮಾಣ ಮಾಡದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಸಾಮಾಜಿಕ ಕಾರ್ಯಕರ್ತ ಯುವರಾಜ ಗೌಡ ಎಚ್ಚರಿಕೆ ನೀಡಿದ್ದಾರೆ.</p>.<p>ಈ ಕುರಿತು ಪ್ರಕಟಣೆ ನೀಡಿರುವ ಅವರು, ‘ವದ್ದಲದಿಂದ ಒಂದೂವರೆ ಕಿಲೋಮೀಟರ್ ರಸ್ತೆಯ ಮರು ಡಾಂಬರೀಕರಣಕ್ಕಾಗಿ ₹1 ಕೋಟಿ ಮಂಜೂರಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು. ಅದರಂತೆ ನಾಲ್ಕು ತಿಂಗಳ ಹಿಂದೆಯೇ ಬಂದ ಗುತ್ತಿಗೆದಾರ, ಈ ರಸ್ತೆಯ ಕೆಲವು ಭಾಗಗಳನ್ನು ಜೆಸಿಬಿ ಯಂತ್ರದ ಮುಖಾಂತರ ಅಗೆದು ಹಾಕಿದ್ದಾರೆ. ಆದರೆ, ಅದಾದ ನಂತರ ಡಾಂಬರೀಕರಣ ಮಾಡದೇ ಕಾಮಗಾರಿಯನ್ನು ಹಾಗೆಯೇ ಅರ್ಧಕ್ಕೆ ಕೈಬಿಟ್ಟಿದ್ದಾರೆ’ ಎಂದು ಆರೋಪಿಸಿದ್ದಾರೆ.</p>.<p>‘ಪ್ರಸ್ತುತ ರಸ್ತೆ ಸಂಪೂರ್ಣ ಅಗೆದು ಹಾಕಿರುವುದರಿಂದ ಸಂಚಾರ ದುಸ್ತರವಾಗಿದ್ದು, ನಿತ್ಯ ಈ ರಸ್ತೆಯನ್ನೇ ನಂಬಿಕೊಂಡಿರುವ ನೂರಾರು ವಾಹನ ಸವಾರರು ಮತ್ತು ಸ್ಥಳೀಯರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಲೋಕೋಪಯೋಗಿ ಇಲಾಖೆಯು ತಕ್ಷಣವೇ ಗಮನಹರಿಸಿ, ಅರ್ಧಕ್ಕೆ ನಿಂತಿರುವ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಇಲಾಖೆಯ ವಿರುದ್ಧ ಪ್ರತಿಭಟನೆ ಮಾಡುವುದು ಅನಿವಾರ್ಯವಾಗುತ್ತದೆ’ ಎಂದು ಅವರು ಎಚ್ಚರಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-20-1879574701</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ‘ತಾಲ್ಲೂಕಿನ ಕಾಳಂಗಿ ಕ್ರಾಸ್ನಿಂದ ರಾಮಾಪುರದವರೆಗೆ ಮರು ಡಾಂಬರೀಕರಣ ಕಾಮಗಾರಿಗಾಗಿ ಅನುದಾನ ಬಿಡುಗಡೆಯಾಗಿದ್ದರೂ, ಗುತ್ತಿಗೆದಾರ ಕೆಲಸ ಪ್ರಾರಂಭಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಈ ಭಾಗದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದ್ದು, ಕೂಡಲೇ ರಸ್ತೆ ನಿರ್ಮಾಣ ಮಾಡದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಸಾಮಾಜಿಕ ಕಾರ್ಯಕರ್ತ ಯುವರಾಜ ಗೌಡ ಎಚ್ಚರಿಕೆ ನೀಡಿದ್ದಾರೆ.</p>.<p>ಈ ಕುರಿತು ಪ್ರಕಟಣೆ ನೀಡಿರುವ ಅವರು, ‘ವದ್ದಲದಿಂದ ಒಂದೂವರೆ ಕಿಲೋಮೀಟರ್ ರಸ್ತೆಯ ಮರು ಡಾಂಬರೀಕರಣಕ್ಕಾಗಿ ₹1 ಕೋಟಿ ಮಂಜೂರಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು. ಅದರಂತೆ ನಾಲ್ಕು ತಿಂಗಳ ಹಿಂದೆಯೇ ಬಂದ ಗುತ್ತಿಗೆದಾರ, ಈ ರಸ್ತೆಯ ಕೆಲವು ಭಾಗಗಳನ್ನು ಜೆಸಿಬಿ ಯಂತ್ರದ ಮುಖಾಂತರ ಅಗೆದು ಹಾಕಿದ್ದಾರೆ. ಆದರೆ, ಅದಾದ ನಂತರ ಡಾಂಬರೀಕರಣ ಮಾಡದೇ ಕಾಮಗಾರಿಯನ್ನು ಹಾಗೆಯೇ ಅರ್ಧಕ್ಕೆ ಕೈಬಿಟ್ಟಿದ್ದಾರೆ’ ಎಂದು ಆರೋಪಿಸಿದ್ದಾರೆ.</p>.<p>‘ಪ್ರಸ್ತುತ ರಸ್ತೆ ಸಂಪೂರ್ಣ ಅಗೆದು ಹಾಕಿರುವುದರಿಂದ ಸಂಚಾರ ದುಸ್ತರವಾಗಿದ್ದು, ನಿತ್ಯ ಈ ರಸ್ತೆಯನ್ನೇ ನಂಬಿಕೊಂಡಿರುವ ನೂರಾರು ವಾಹನ ಸವಾರರು ಮತ್ತು ಸ್ಥಳೀಯರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಲೋಕೋಪಯೋಗಿ ಇಲಾಖೆಯು ತಕ್ಷಣವೇ ಗಮನಹರಿಸಿ, ಅರ್ಧಕ್ಕೆ ನಿಂತಿರುವ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಇಲಾಖೆಯ ವಿರುದ್ಧ ಪ್ರತಿಭಟನೆ ಮಾಡುವುದು ಅನಿವಾರ್ಯವಾಗುತ್ತದೆ’ ಎಂದು ಅವರು ಎಚ್ಚರಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-20-1879574701</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>