<p>ಶಿರಸಿ: ನಗರದ ಕವಿ ಕಾವ್ಯ ಬಳಗದ 18ನೇ ವರ್ಷದ ಸ್ನೇಹ ಸಮ್ಮಿಲನ ಮತ್ತು ಪುಸ್ತಕ ಲೋಕಾರ್ಪಣೆ ಸಮಾರಂಭವು ಏ. 3ರಂದು ಬೆಳಿಗ್ಗೆ 10ರಿಂದ ಮಧುವನದ ಆರಾಧನಾ ಸಭಾಂಗಣದಲ್ಲಿ ನಡೆಯಲಿದೆ.</p>.<p>ಹಿರಿಯ ಸಾಹಿತಿ ಆರ್.ಡಿ.ಹೆಗಡೆ ಆಲ್ಮನೆ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಗಂಗಾಧರ ಕೊಳಗಿ ಉದ್ಘಾಟಿಸುವರು. ಪತ್ರಕರ್ತ ನಾಗರಾಜ ವೈದ್ಯ ಅವರ ಎಐ ಭಗವದ್ಗೀತೆ ಕೃತಿ ಲೋಕಾರ್ಪಣೆಗೊಳ್ಳಲಿದೆ. ನಂತರ ಎನ್.ಆರ್.ರೂಪಶ್ರೀ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ಹಾಗೂ ಸಂಗೀತ ಕಾರ್ಯಕ್ರಮ ಜರುಗಲಿದೆ.</p>.<p>ಮಧ್ಯಾಹ್ನ 2 ಗಂಟೆಗೆ ಸುಬ್ರಾಯ ಮತ್ತಿಹಳ್ಳಿ ಅವರ ಅಧ್ಯಕ್ಷತೆಯಲ್ಲಿ ಎಐ ಸಾಧಕ– ಬಾಧಕಗಳು ಕುರಿತು ವಿಶೇಷ ಸಂವಾದ ಗೋಷ್ಠಿ ಏರ್ಪಡಿಸಲಾಗಿದೆ. ಇದರಲ್ಲಿ ಸೀತಾರಾಮ ಕಾನಳ್ಳಿ, ಕೃಷ್ಣ ಪದಕಿ ಸೇರಿದಂತೆ ಹಲವರು ಪಾಲ್ಗೊಂಡು ತಂತ್ರಜ್ಞಾನ ಮತ್ತು ಸಾಹಿತ್ಯದ ಸವಾಲುಗಳ ಕುರಿತು ಚರ್ಚಿಸಲಿದ್ದಾರೆ.</p>.<p>ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಹಿರಿಯ ಸಾಹಿತಿ ಎಚ್.ಆರ್. ಅಮರನಾಥ ಅವರಿಗೆ ಈ ವರ್ಷದ ಉಪಾಯನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಭಾಗೀರಥಿ ಹೆಗಡೆ ಅಧ್ಯಕ್ಷತೆ ವಹಿಸುವರು. ವಿಜಯನಳಿನಿ ರಮೇಶ ಅಭಿನಂದನಾ ಭಾಷಣ ಮಾಡುವರು. ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬಳಗ ವಿನಂತಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-20-133439325</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ನಗರದ ಕವಿ ಕಾವ್ಯ ಬಳಗದ 18ನೇ ವರ್ಷದ ಸ್ನೇಹ ಸಮ್ಮಿಲನ ಮತ್ತು ಪುಸ್ತಕ ಲೋಕಾರ್ಪಣೆ ಸಮಾರಂಭವು ಏ. 3ರಂದು ಬೆಳಿಗ್ಗೆ 10ರಿಂದ ಮಧುವನದ ಆರಾಧನಾ ಸಭಾಂಗಣದಲ್ಲಿ ನಡೆಯಲಿದೆ.</p>.<p>ಹಿರಿಯ ಸಾಹಿತಿ ಆರ್.ಡಿ.ಹೆಗಡೆ ಆಲ್ಮನೆ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಗಂಗಾಧರ ಕೊಳಗಿ ಉದ್ಘಾಟಿಸುವರು. ಪತ್ರಕರ್ತ ನಾಗರಾಜ ವೈದ್ಯ ಅವರ ಎಐ ಭಗವದ್ಗೀತೆ ಕೃತಿ ಲೋಕಾರ್ಪಣೆಗೊಳ್ಳಲಿದೆ. ನಂತರ ಎನ್.ಆರ್.ರೂಪಶ್ರೀ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ಹಾಗೂ ಸಂಗೀತ ಕಾರ್ಯಕ್ರಮ ಜರುಗಲಿದೆ.</p>.<p>ಮಧ್ಯಾಹ್ನ 2 ಗಂಟೆಗೆ ಸುಬ್ರಾಯ ಮತ್ತಿಹಳ್ಳಿ ಅವರ ಅಧ್ಯಕ್ಷತೆಯಲ್ಲಿ ಎಐ ಸಾಧಕ– ಬಾಧಕಗಳು ಕುರಿತು ವಿಶೇಷ ಸಂವಾದ ಗೋಷ್ಠಿ ಏರ್ಪಡಿಸಲಾಗಿದೆ. ಇದರಲ್ಲಿ ಸೀತಾರಾಮ ಕಾನಳ್ಳಿ, ಕೃಷ್ಣ ಪದಕಿ ಸೇರಿದಂತೆ ಹಲವರು ಪಾಲ್ಗೊಂಡು ತಂತ್ರಜ್ಞಾನ ಮತ್ತು ಸಾಹಿತ್ಯದ ಸವಾಲುಗಳ ಕುರಿತು ಚರ್ಚಿಸಲಿದ್ದಾರೆ.</p>.<p>ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಹಿರಿಯ ಸಾಹಿತಿ ಎಚ್.ಆರ್. ಅಮರನಾಥ ಅವರಿಗೆ ಈ ವರ್ಷದ ಉಪಾಯನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಭಾಗೀರಥಿ ಹೆಗಡೆ ಅಧ್ಯಕ್ಷತೆ ವಹಿಸುವರು. ವಿಜಯನಳಿನಿ ರಮೇಶ ಅಭಿನಂದನಾ ಭಾಷಣ ಮಾಡುವರು. ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬಳಗ ವಿನಂತಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-20-133439325</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>